AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ

Rahmanullah Gurbaz: ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ
Rahmanullah Gurbaz
TV9 Web
| Edited By: |

Updated on:Nov 13, 2023 | 8:54 PM

Share

ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಗುಜರಾತ್​ನ ಅಹಮದಾಬಾದ್​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತನ್ನ ಕೊನೆಯ ಪಂದ್ಯವಾಡಿತ್ತು. ಮರುದಿನ ಮುಂಜಾನೆ ರಹಮಾನುಲ್ಲಾ ಗುರ್ಬಾಝ್ ಅಹಮದಾಬಾದ್​ನ ಪ್ರಮುಖ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಳಿಗ್ಗಿನ ಜಾವ 3 ಗಂಟೆಗೆ ಅಹಮದಾಬಾದ್​ನ ಬೀದಿ ಬದಿಯಲ್ಲಿ ಮಲಗಿದ್ದ ನಿರ್ಗತಿಕರಿಗೆ ರಹಮಾನುಲ್ಲಾ ಗುರ್ಬಾಝ್ ಹಣ ಹಂಚಿದ್ದಾರೆ. ಎಲ್ಲರೂ ಗಾಢ ನಿದ್ದೆಯಲ್ಲಿದ್ದ ವೇಳೆ ಗುರ್ಬಾಝ್ ಅವರ ಬಳಿ ಹಣವನ್ನಿಟ್ಟು ತೆರಳಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಇದೀಗ ಅಫ್ಘಾನ್ ಆಟಗಾರನ ಮಾನವೀಯ ಗುಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಹಮಾನುಲ್ಲಾ ಗುರ್ಬಾಝ್ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ವಿಶೇಷ ಎಂದರೆ ಈ ವಿಡಿಯೋವನ್ನು ರಹಮಾನುಲ್ಲಾ ಗುರ್ಬಾಝ್ ಅವರಿಗೆ ತಿಳಿಯದಂತೆ ಚಿತ್ರೀಕರಿಸಲಾಗಿದೆ. ಇದರಿಂದಾಗಿ ಅಫ್ಘಾನ್ ಆಟಗಾರನ ಮಾನವೀಯತೆ ಬೆಳಕಿಗೆ ಬಂದಿದೆ.

ಇತ್ತ ಭಾರತದಲ್ಲಿ ಕ್ರಿಕೆಟ್ ಆಡಲು ಬಂದು ಇಲ್ಲಿನ ಬಡವರಿಗೆ ಸಹಾಯ ಮಾಡಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಅವರ ಮಾನವೀಯತೆಗೆ ಇದೀಗ ಭಾರತೀಯರು ಹಾಡಿ ಹೊಗಳುತ್ತಿರುವುದು ವಿಶೇಷ.

ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಒಟ್ಟಿನಲ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು. ಇದೀಗ ಅದೇ ತಂಡದ ಆಟಗಾರನ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

Published On - 8:28 pm, Mon, 13 November 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್