AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ

Rahmanullah Gurbaz: ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ
Rahmanullah Gurbaz
TV9 Web
| Edited By: |

Updated on:Nov 13, 2023 | 8:54 PM

Share

ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಗುಜರಾತ್​ನ ಅಹಮದಾಬಾದ್​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತನ್ನ ಕೊನೆಯ ಪಂದ್ಯವಾಡಿತ್ತು. ಮರುದಿನ ಮುಂಜಾನೆ ರಹಮಾನುಲ್ಲಾ ಗುರ್ಬಾಝ್ ಅಹಮದಾಬಾದ್​ನ ಪ್ರಮುಖ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಳಿಗ್ಗಿನ ಜಾವ 3 ಗಂಟೆಗೆ ಅಹಮದಾಬಾದ್​ನ ಬೀದಿ ಬದಿಯಲ್ಲಿ ಮಲಗಿದ್ದ ನಿರ್ಗತಿಕರಿಗೆ ರಹಮಾನುಲ್ಲಾ ಗುರ್ಬಾಝ್ ಹಣ ಹಂಚಿದ್ದಾರೆ. ಎಲ್ಲರೂ ಗಾಢ ನಿದ್ದೆಯಲ್ಲಿದ್ದ ವೇಳೆ ಗುರ್ಬಾಝ್ ಅವರ ಬಳಿ ಹಣವನ್ನಿಟ್ಟು ತೆರಳಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಇದೀಗ ಅಫ್ಘಾನ್ ಆಟಗಾರನ ಮಾನವೀಯ ಗುಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಹಮಾನುಲ್ಲಾ ಗುರ್ಬಾಝ್ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ವಿಶೇಷ ಎಂದರೆ ಈ ವಿಡಿಯೋವನ್ನು ರಹಮಾನುಲ್ಲಾ ಗುರ್ಬಾಝ್ ಅವರಿಗೆ ತಿಳಿಯದಂತೆ ಚಿತ್ರೀಕರಿಸಲಾಗಿದೆ. ಇದರಿಂದಾಗಿ ಅಫ್ಘಾನ್ ಆಟಗಾರನ ಮಾನವೀಯತೆ ಬೆಳಕಿಗೆ ಬಂದಿದೆ.

ಇತ್ತ ಭಾರತದಲ್ಲಿ ಕ್ರಿಕೆಟ್ ಆಡಲು ಬಂದು ಇಲ್ಲಿನ ಬಡವರಿಗೆ ಸಹಾಯ ಮಾಡಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಅವರ ಮಾನವೀಯತೆಗೆ ಇದೀಗ ಭಾರತೀಯರು ಹಾಡಿ ಹೊಗಳುತ್ತಿರುವುದು ವಿಶೇಷ.

ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಒಟ್ಟಿನಲ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು. ಇದೀಗ ಅದೇ ತಂಡದ ಆಟಗಾರನ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

Published On - 8:28 pm, Mon, 13 November 23

Follow Us
Web contact
Web contact

TV9 Kannada

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್