Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ

Rahmanullah Gurbaz: ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ
Rahmanullah Gurbaz
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 13, 2023 | 8:54 PM

ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಗುಜರಾತ್​ನ ಅಹಮದಾಬಾದ್​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತನ್ನ ಕೊನೆಯ ಪಂದ್ಯವಾಡಿತ್ತು. ಮರುದಿನ ಮುಂಜಾನೆ ರಹಮಾನುಲ್ಲಾ ಗುರ್ಬಾಝ್ ಅಹಮದಾಬಾದ್​ನ ಪ್ರಮುಖ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಳಿಗ್ಗಿನ ಜಾವ 3 ಗಂಟೆಗೆ ಅಹಮದಾಬಾದ್​ನ ಬೀದಿ ಬದಿಯಲ್ಲಿ ಮಲಗಿದ್ದ ನಿರ್ಗತಿಕರಿಗೆ ರಹಮಾನುಲ್ಲಾ ಗುರ್ಬಾಝ್ ಹಣ ಹಂಚಿದ್ದಾರೆ. ಎಲ್ಲರೂ ಗಾಢ ನಿದ್ದೆಯಲ್ಲಿದ್ದ ವೇಳೆ ಗುರ್ಬಾಝ್ ಅವರ ಬಳಿ ಹಣವನ್ನಿಟ್ಟು ತೆರಳಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಇದೀಗ ಅಫ್ಘಾನ್ ಆಟಗಾರನ ಮಾನವೀಯ ಗುಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಹಮಾನುಲ್ಲಾ ಗುರ್ಬಾಝ್ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ವಿಶೇಷ ಎಂದರೆ ಈ ವಿಡಿಯೋವನ್ನು ರಹಮಾನುಲ್ಲಾ ಗುರ್ಬಾಝ್ ಅವರಿಗೆ ತಿಳಿಯದಂತೆ ಚಿತ್ರೀಕರಿಸಲಾಗಿದೆ. ಇದರಿಂದಾಗಿ ಅಫ್ಘಾನ್ ಆಟಗಾರನ ಮಾನವೀಯತೆ ಬೆಳಕಿಗೆ ಬಂದಿದೆ.

ಇತ್ತ ಭಾರತದಲ್ಲಿ ಕ್ರಿಕೆಟ್ ಆಡಲು ಬಂದು ಇಲ್ಲಿನ ಬಡವರಿಗೆ ಸಹಾಯ ಮಾಡಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಅವರ ಮಾನವೀಯತೆಗೆ ಇದೀಗ ಭಾರತೀಯರು ಹಾಡಿ ಹೊಗಳುತ್ತಿರುವುದು ವಿಶೇಷ.

ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಒಟ್ಟಿನಲ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು. ಇದೀಗ ಅದೇ ತಂಡದ ಆಟಗಾರನ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

Published On - 8:28 pm, Mon, 13 November 23

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ