AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid Birthday: ಕರ್ನಾಟಕ ಹೆಮ್ಮೆಯ ಕ್ರಿಕೆಟಿಗ ರಾಹುಲ್ ದ್ರಾವಿಡ್​ಗೆ ಹುಟ್ಟುಹಬ್ಬದ ಸಂಭ್ರಮ: ಇಲ್ಲಿದೆ ಅವರ ಮರೆಯಲಾಗದ ಇನ್ನಿಂಗ್ಸ್

Happy Birthday Rahul Dravid: ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್​ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.

Rahul Dravid Birthday: ಕರ್ನಾಟಕ ಹೆಮ್ಮೆಯ ಕ್ರಿಕೆಟಿಗ ರಾಹುಲ್ ದ್ರಾವಿಡ್​ಗೆ ಹುಟ್ಟುಹಬ್ಬದ ಸಂಭ್ರಮ: ಇಲ್ಲಿದೆ ಅವರ ಮರೆಯಲಾಗದ ಇನ್ನಿಂಗ್ಸ್
Rahul Dravid
TV9 Web
| Edited By: |

Updated on: Jan 11, 2022 | 8:33 AM

Share

ಭಾರತ ಕ್ರಿಕೆಟ್ ಕಂಡ ಅತ್ಯಂತ ಸಭ್ಯ ಕ್ರಿಕೆಟಿಗ, ಸದ್ಯ ಟೀಮ್ ಇಂಡಿಯಾ (Team India) ಮುಖ್ಯ ಕೋಚ್ ಆಗಿರುವ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid Birthday) ಇಂದು ತಮ್ಮ 49ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಮೈದಾನದೊಳಗೆ ಹಾಗೂ ಮೈದಾನದಾಚೆ ತನ್ನದೇ ಆದ ವರ್ಚಸ್ಸನ್ನು ಹೊಂದಿರುವ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾ ಪಾಲಿಗೆ ಆಪತ್ಭಾಂದವ ಆಗಿದ್ದವರು. ತಾನೊಬ್ಬ ಸ್ಟಾರ್ ಆಟಗಾರನಾಗಿ ಬೆಳೆದು ನಿಂತರೂ ಸಿಂಪ್ಲಿಸಿಟಿ ಎನ್ನುವುದು ಕೊಂಚವೂ ಬದಲಾಗಿಲ್ಲ. ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್​ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.

ವಿಶ್ವದ ಎಂತಹ ಕಠಿಣ ಪಿಚ್ ಆದರೂ ಅಲ್ಲಿ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಹೀಗೆ ವಿಶ್ವ ದಿಗ್ಗಜರೇ ವೈಫಲಗೊಂಡರೂ ಅಂತಹ ಪಿಚ್‌ಗಳಲ್ಲಿ ನೆಲೆಯೂರಿ ನಿಲ್ಲುವ ಮೂಲಕ ದ್ರಾವಿಡ್, ಟೀಮ್ ಇಂಡಿಯಾ ಪಾಲಿಗೆ ಆಪತ್ಬಾಂಧವ ಎನಿಸಿದ್ದರು. ಇದೇ ಕಾರಣಕ್ಕಾಗಿ ‘ದಿ ವಾಲ್’ ಎಂಬ ಮನ್ನಣೆಗೆ ಪಾತ್ರವಾಗಿದ್ದಾರೆ. ಕ್ರಿಕೆಟ್ ಬಳಿಕವೂ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸುವ ಮೂಲಕ ರಾಹುಲ್ ದ್ರಾವಿಡ್ ಗಮನ ಸೆಳೆದಿದ್ದಾರೆ. ದ್ರಾವಿಡ್ ಗರಡಿಯಲ್ಲಿ ಪಳಗಿದವರು ಇಂದು ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾಗಿ ಹೊರಹೊಮ್ಮುತ್ತಿದ್ದಾರೆ.

1996 ಏಪ್ರಿಲ್ 3 ರಂದು ಶ್ರೀಲಂಕಾ ವಿರುದ್ಧ ಪಂದ್ಯವನ್ನಾಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದ್ರಾವಿಡ್ ಪದಾರ್ಪಣೆ ಮಾಡಿದ್ದರು. 164 ಟೆಸ್ಟ್ ಪಂದ್ಯಗಳಲ್ಲಿ 13,288 ರನ್ ಗಳಿಸಿರುವ ದ್ರಾವಿಡ್ 36 ಶತಕ ಹಾಗೂ 63 ಅರ್ಧಶತಕ ಬಾರಿಸಿದ್ದಾರೆ. ದ್ರಾವಿಡ್ ಅವರು ಬರೋಬ್ಬರಿ 31,258 ಬಾಲ್​ಗಳನ್ನು ಎದುರಿಸಿ ದಾಖಲೆ ಬರೆದಿದ್ದಾರೆ. ಇನ್ನು ದ್ರಾವಿಡ್ ಬ್ಯಾಟುಗಾರನಾಗಿ ಕ್ರಿಕೆಟ್ ಕ್ರೀಸಿನಲ್ಲಿ 44,152 ನಿಮಿಷ ಆಡಿದ್ದಾರೆ. ಇದು ವಿಶ್ವ ದಾಖಲೆಯೇ ಆಗಿದೆ. ದ್ರಾವಿಡ್ 2012ರಲ್ಲಿ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನಾಡಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ವಿಕೆಟ್ ಕೀಪರ್ ಆಗಿಯು ಮಿಂಚಿದ ದ್ರಾವಿಡ್ ಟೆಸ್ಟ್ ಕ್ರಿಕೆಟ್​ನಲ್ಲಿ 210 ಕ್ಯಾಚ್ ಪಡೆದಿದ್ದಾರೆ. ಏಕದಿನ ಕ್ರಿಕೆಟ್​​ನಲ್ಲಿ 344 ಪಂದ್ಯಗಳನ್ನು ಆಡಿ 10, 889 ರನ್ ದ್ರಾವಿಡ್ ಕಲೆಹಾಕಿದ್ದಾರೆ. ಇದರಲ್ಲಿ 12 ಶತಕ ಹಾಗೂ 83 ಅರ್ಧಶತಕ ಸೇರಿವೆ.

ರಾಹುಲ್ ದ್ರಾವಿಡ್ ಮರೆಯಲಾಗದ ಇನ್ನಿಂಗ್ಸ್:

ದ್ರಾವಿಡ್ ಅವರ ಮರೆಯಲಾಗದ ಇನ್ನಿಂಗ್ಸ್​ ಪೈಕಿ 2000ನೇ ಇಸವಿಯಲ್ಲಿ ಈಡನ್ ಗಾರ್ಡನ್ಸ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯ ಕೂಡ ಒಂದು. ಈ ಪಂದ್ಯದಲ್ಲಿ ಭಾರತ ಗೆಲ್ಲಲು ಹರಸಾಹಸ ನಡೆಸಿತು. ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಹೋರಾಟ ನಡೆಸಿದರು. ಲಕ್ಷ್ಮಣ್ 280 ರನ್ ಗಳಿಸಿದ್ದರೆ, ದ್ರಾವಿಡ್ ಅಮೂಲ್ಯವಾದ 180 ರನ್​ಗಳ ಕೊಡುಗೆ ನೀಡಿದ್ದರು.

ಇನ್ನು ಅಡಿಲೇಡ್​ನಲ್ಲಿ 2003 ರಲ್ಲಿ ನಡೆದ ಆಸೀಸ್ ವಿರುದ್ಧದ ಪಂದ್ಯದಲ್ಲಿ ದ್ರಾವಿಡ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ಇಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 566 ರನ್ ಗಳಿಸಿತ್ತು. ದ್ರಾವಿಡ್ (233) ಹಾಗೂ ಲಕ್ಷ್ಮಣ್ (148) ಅವರ ಅಮೋಘ ಆಟದ ನೆರವಿನಿಂದ ಭಾರತ ಉತ್ತಮ ರನ್ ಗಳಿಸಿತು. ಈ ಪಂದ್ಯದಲ್ಲಿ ಭಾರತ 4 ವಿಕೆಟ್​ಗಳ ಗೆಲುವು ಸಾಧಿಸಿತ್ತು.

2004 ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ದ್ವಿಶತಕ ಸಿಡಿಸಿ ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು. ಈ ಪಂದ್ಯದಲ್ಲಿ ಇವರು 270 ರನ್ ಚಚ್ಚಿದ್ದರು. ಇದು ಪಾಕ್ ನೆಲದಲ್ಲಿ ಭಾರತ ಜಯಿಸಿದ ಮೊಟ್ಟ ಮೊದಲ ಟೆಸ್ಟ್ ಸರಣಿ ಗೆಲುವಾಗಿತ್ತು.

South Africa vs India: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟೆಸ್ಟ್: ಇತಿಹಾಸ ಸೃಷ್ಟಿಸುವ ಕನಸಲ್ಲಿ ಕೊಹ್ಲಿ ಪಡೆ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!