AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಕಷ್ಟಪಟ್ಟು ಗಳಿಸಿದ ಅಂಕ ಕಳೆದುಕೊಂಡಾಗ ನೋವಾಗುತ್ತೆ..!

India vs South Africa: ಟೀಮ್ ಇಂಡಿಯಾ ಸೆಂಚುರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ಒಂದು ಓವರ್ ಹಿಂದಿತ್ತು. ಇದರ ನಂತರ, ತಂಡದ ಎಲ್ಲಾ ಆಟಗಾರರಿಗೆ ಅವರ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಯಿತು.

Rahul Dravid: ಕಷ್ಟಪಟ್ಟು ಗಳಿಸಿದ ಅಂಕ ಕಳೆದುಕೊಂಡಾಗ ನೋವಾಗುತ್ತೆ..!
Rahul Dravid
TV9 Web
| Updated By: ಝಾಹಿರ್ ಯೂಸುಫ್|

Updated on:Jan 02, 2022 | 10:22 PM

Share

ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ 113 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದಾಗ್ಯೂ ನಿಧಾನಗತಿಯ ಓವರ್ ರೇಟ್‌ಗಾಗಿ ಟೀಮ್ ಇಂಡಿಯಾ ದಂಡ ಪಾವತಿಸಬೇಕಾಯಿತು. ಅಷ್ಟೇ ಅಲ್ಲದೆ ಭಾರತ ತಂಡ ಮಾಡಿದ ಈ ತಪ್ಪಿನಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಿಂದ ಒಂದು ಅಂಕವನ್ನು ಕಳೆದುಕೊಂಡಿತು. ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಕಷ್ಟಪಟ್ಟು ಗಳಿಸಿರುವ ಅಂಕಗಳನ್ನು ಕಳೆದುಕೊಳ್ಳುವುದು ನಿಜಕ್ಕೂ ನಿರಾಶಾದಾಯಕ ಎಂದಿದ್ದಾರೆ.

ಐಸಿಸಿ ಆಟದ ವೇಗವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಆದರೆ ಕೋಚ್ ಆಗಿ ಇಂತಹ ನಿರ್ಧಾರಗಳು ಕಠಿಣ ಎಂದೇ ಹೇಳಬಹುದು. ಐಸಿಸಿ ಪಂದ್ಯವನ್ನು ಸಮತೋಲನವಾಗಿ ಕೊಂಡೊಯ್ಯುವ ಮಾರ್ಗದಲ್ಲಿ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಇಂತಹ ನಿಯಮಗಳು ಸರಿ ಎಂದೇ ಹೇಳಬಹುದು. ಅಷ್ಟೇ ಅಲ್ಲದೆ ಇದು ನಾವು ಉತ್ತಮಗೊಳ್ಳಬೇಕಾದ ಕ್ಷೇತ್ರ ಎಂಬುದು ಅರಿವಾಗಿದೆ ಎಂದು ದ್ರಾವಿಡ್ ತಿಳಿಸಿದರು.

ಓವರ್ ರೇಟ್​ ನಿಯಮಗಳು ಎಲ್ಲರಿಗೂ ಒಂದೇ ಆಗಿದೆ. ಆದರೆ ಸಾಗರೋತ್ತರದಲ್ಲಿ ಕಷ್ಟಪಟ್ಟು ಗಳಿಸಿದ ಅಂಕವನ್ನು ಕಳೆದುಕೊಳ್ಳುವುದು ನಿರಾಶಾದಾಯಕವಾಗಿದೆ ಎಂದು ದ್ರಾವಿಡ್ ಹೇಳಿದರು. ನಾವು ಇದನ್ನು ಅರ್ಥಮಾಡಿಕೊಂಡಿದ್ದೇವೆ. ಹೀಗಾಗಿ ವಿದೇಶಿ ಪಿಚ್​ಗಳಲ್ಲಿ ಉತ್ತಮವಾಗಲು ಪ್ರಯತ್ನಿಸುತ್ತಿದ್ದೇವೆ. ಈ ಕಾರಣದಿಂದ ಮುಂದೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್‌ ಕೈ ತಪ್ಪಿದರೆ, ಅದಕ್ಕಿಂತ ದೊಡ್ಡ ನಿರಾಸೆ ಮತ್ತೊಂದಿರಲ್ಲ ಎಂದು ಟೀಮ್ ಇಂಡಿಯಾ ಕೋಚ್ ತಿಳಿಸಿದರು.

ಟೀಮ್ ಇಂಡಿಯಾ ಸೆಂಚುರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ಒಂದು ಓವರ್ ಹಿಂದಿತ್ತು. ಇದರ ನಂತರ, ತಂಡದ ಎಲ್ಲಾ ಆಟಗಾರರಿಗೆ ಅವರ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಯಿತು. ಅಷ್ಟೇ ಅಲ್ಲದೆ ಸ್ಲೋ ಓವರ್​ ರೇಟ್ ನಿಮಯದಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಿಂದ ಒಂದು ಅಂಕವನ್ನು ಕಡಿತಗೊಳಿಸಲಾಯಿತು. ಈ ಹಿಂದೆ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಕೂಡ ಟೀಮ್ ಇಂಡಿಯಾ ಸ್ಲೋ ಓವರ್ ರೇಟ್ ಕಾರಣ ಒಂದು ಅಂಕವನ್ನು ಕಳೆದುಕೊಂಡಿತು. ಹೀಗಾಗಿ 2ನೇ ಟೆಸ್ಟ್ ಪಂದ್ಯದ ವೇಳೆ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂದು ಟೀಮ್ ಇಂಡಿಯಾ ಕೋಚ್ ಆಟಗಾರರಿಗೆ ವಿಶೇಷ ಸೂಚನೆ ನೀಡಿದ್ದಾರೆ.

ಭಾರತ-ದಕ್ಷಿಣ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ಜೋಹಾನ್ಸ್​ಬರ್ಗ್​ನ ವಂಡಾರರ್ಸ್​ ಸ್ಟೇಡಿಯಂನಲ್ಲಿ ಸೋಮವಾರದಿಂದ ಶುರುವಾಗಲಿದ್ದು, ಈ ಪಂದ್ಯದಲ್ಲಿ ಭಾರತ ಗೆದ್ದರೆ ಸೌತ್ ಆಫ್ರಿಕಾ ವಿರುದ್ದ ಸರಣಿ ಗೆದ್ದ ದಾಖಲೆ ನಿರ್ಮಿಸಲಿದೆ.

ಇದನ್ನೂ ಓದಿ:  Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Rahul Dravid ‘disappointed’ with losing points for slow over-rate)

Published On - 10:21 pm, Sun, 2 January 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?