AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್

Rahul Dravid Co-Owner of European T20 League Team: ಟಿ20 ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿದ್ದ ರಾಹುಲ್ ದ್ರಾವಿಡ್ ಮತ್ತೆ ಕ್ರಿಕೆಟ್‌ಗೆ ಮರಳಿದ್ದಾರೆ. ಅವರು ಐರ್ಲೆಂಡ್‌ನಲ್ಲಿ ನಡೆಯಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ನಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡದ ಸಹ-ಮಾಲೀಕರಾಗಿದ್ದಾರೆ. ಈ ತಂಡಕ್ಕೆ ಭಾರತದ ಅನುಭವಿ ಆಫ್-ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ದ್ರಾವಿಡ್ ತಮ್ಮ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್
Rahul Dravid
ಪೃಥ್ವಿಶಂಕರ
|

Updated on: May 11, 2026 | 8:59 PM

Share

ತಮ್ಮ ಕೋಚಿಂಗ್​ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್ ಲೋಕದತ್ತ ವಾಲಿರುವ ಗೋಡೆ, ವಿದೇಶದಲ್ಲಿ ನಡೆಯಲ್ಲಿರುವ ಟಿ20 ಲೀಗ್​ನಲ್ಲಿ ತಂಡವೊಂದಕ್ಕೆ ಸಹ ಮಾಲೀಕರಾಗಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ರಾಹುಲ್ ಮಾಲೀಕತ್ವದ ತಂಡಕ್ಕೆ ಆರ್. ಅಶ್ವಿನ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ವಾಸ್ತವವಾಗಿ ರಾಹುಲ್ ದ್ರಾವಿಡ್ ಐರ್ಲೆಂಡ್‌ನಲ್ಲಿ ನಡೆಯಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದಾರೆ. ರಾಹುಲ್ ದ್ರಾವಿಡ್ ಡಬ್ಲಿನ್ ಗಾರ್ಡಿಯನ್ಸ್‌ ತಂಡದ ಸಹ-ಮಾಲೀಕರಾಗಿದ್ದು, ಈ ತಂಡದ ಒಡೆತನ ಭಾರತೀಯ ಕಂಪನಿಯ ಕೈಯಲ್ಲಿದೆ. ದ್ರಾವಿಡ್ ಒಡೆತನದ ಈ ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಭಾರತದ ಮಾಜಿ ಆಫ್-ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ಈ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.

ರಾಹುಲ್ ದ್ರಾವಿಡ್ ಪ್ರತಿಕ್ರಿಯೆ

ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್ ಪಂದ್ಯಗಳು ಮತ್ತು 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಮಾತ್ರವಲ್ಲದೆ 2021 ರಿಂದ 2024 ರವರೆಗೆ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ಕ್ರಿಕೆಟ್​ನಲ್ಲಿ ಮತ್ತೊಂದು ಇನ್ನಿಂಗ್ಸ್ ಆರಂಭಿಸಿರುವ ದ್ರಾವಿಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್​ನಲ್ಲಿ ಭಾಗಿಯಾಗಿರುವುದು ನಿಜಕ್ಕೂ ಅದ್ಭುತವಾಗಿದೆ. ಯುರೋಪ್‌ನಲ್ಲಿ ಕ್ರಿಕೆಟ್‌ನ ಮೇಲಿನ ಉತ್ಸಾಹವನ್ನು ನಾನು ಯಾವಾಗಲೂ ಪ್ರೀತಿಸುತ್ತೇನೆ. ಆಟಗಾರರು ಆಟವನ್ನು ಆಡುವ ಉತ್ಸಾಹ ಅದ್ಭುತವಾಗಿದೆ ಎಂದಿದ್ದಾರೆ.

ದ್ರಾವಿಡ್ ತಂಡಕ್ಕೆ ಅಶ್ವಿನ್ ನಾಯಕ

ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ರವಿಚಂದ್ರನ್ ಅಶ್ವಿನ್ ಗಾರ್ಡಿಯನ್ಸ್ ತಂಡದ ನಾಯಕರಾಗಿರುತ್ತಾರೆ. ಅಶ್ವಿನ್ ಐಪಿಎಲ್‌ನಿಂದಲೂ ನಿವೃತ್ತರಾಗಿರುವುದರಿಂದ ಅವರಿಗೆ ಪ್ರಪಂಚದಾದ್ಯಂತದ ಲೀಗ್‌ಗಳಲ್ಲಿ ಆಡಲು ಅವಕಾಶವಿದೆ. ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್‌ಲ್ಯಾಂಡ್ಸ್ ಕ್ರಿಕೆಟ್ ಮಂಡಳಿಗಳ ಸಹಯೋಗದೊಂದಿಗೆ ಇಟಿಪಿಎಲ್ ಅನ್ನು ಆಯೋಜಿಸಲಾಗುತ್ತಿದೆ.

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಲೀಗ್‌ನಲ್ಲಿ ಆಮ್ಸ್ಟರ್‌ಡ್ಯಾಮ್, ರೋಟರ್‌ಡ್ಯಾಮ್, ಬೆಲ್‌ಫಾಸ್ಟ್, ಡಬ್ಲಿನ್, ಗ್ಲ್ಯಾಸ್ಗೋ ಮತ್ತು ಎಡಿನ್‌ಬರ್ಗ್‌ ಎಂಬ ಆರು ತಂಡಗಳು ಸೇರಿವೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಈ ಲೀಗ್​ನ ಸೃಷ್ಟಿಕರ್ತರಾಗಿದ್ದು, ಅವರು ಭಾರತೀಯ ಖಾಸಗಿ ಕಂಪನಿಯಾದ ರೂಲ್ಸ್ ಸ್ಪೋರ್ಟ್ ಟೆಕ್ ಸಹಯೋಗದೊಂದಿಗೆ ಈ ಲೀಗ್ ಅನ್ನು ನಡೆಸಲಿದ್ದಾರೆ. ಪಂದ್ಯಾವಳಿಯು ಆಗಸ್ಟ್ 26 ರಿಂದ ಸೆಪ್ಟೆಂಬರ್ 20 ರವರೆಗೆ ನಡೆಯಲಿದ್ದು, ಮೊದಲ ಆವೃತ್ತಿಯ ಪಂದ್ಯಗಳು ದಿ ಹೇಗ್ ಮತ್ತು ಡಬ್ಲಿನ್‌ನಲ್ಲಿ ನಡೆಯಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ