AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli 100th Tets: ಕೊಹ್ಲಿಗೆ ವಿಶೇಷವಾದ 100ನೇ ಟೆಸ್ಟ್ ಕ್ಯಾಪ್ ನೀಡುವಾಗ ದ್ರಾವಿಡ್ ಏನು ಹೇಳಿದರು ಕೇಳಿ

IND vs SL 1st Test: ಪಂದ್ಯದಾರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರಿಗೆ ತಂಡದ ಕೋಚ್ ರಾಹುಲ್ ದ್ರಾವಿಡ್ ನೂರನೇ ಟೆಸ್ಟ್​ನ ವಿಶೇಷ ಕ್ಯಾಪ್ ಅನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಮೈದಾನದಲ್ಲಿ ಉಪಸ್ಥಿತರಿದ್ದರು.

Virat Kohli 100th Tets: ಕೊಹ್ಲಿಗೆ ವಿಶೇಷವಾದ 100ನೇ ಟೆಸ್ಟ್ ಕ್ಯಾಪ್ ನೀಡುವಾಗ ದ್ರಾವಿಡ್ ಏನು ಹೇಳಿದರು ಕೇಳಿ
Rahul Dravid and Kohli 100 Test Cap
TV9 Web
| Updated By: Vinay Bhat|

Updated on: Mar 04, 2022 | 11:06 AM

Share

ಭಾರತ ಹಾಗ ಶ್ರೀಲಂಕಾ (India vs Sri Lanka) ನಡುವಣ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಿದ್ದು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಕ್ಯಾಪ್ಟನ್ ರೋಹಿತ್ 28 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಇಡೀ ಮೈದಾನ ವಿರಾಟ್ ಕೊಹ್ಲಿ (Virat Kohli) ಆಗಮನಕ್ಕೆ ಕಾದುಕುಳಿತಿದ್ದು, 100ನೇ ಟೆಸ್ಟ್​​ಗೆ ಸಜ್ಜಾಗಿ ನಿಂತಿದ್ದಾರೆ. ಪಂದ್ಯದಾರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರಿಗೆ ತಂಡದ ಕೋಚ್ ರಾಹುಲ್ ದ್ರಾವಿಡ್ (Rahul Dravid) ನೂರನೇ ಟೆಸ್ಟ್​ನ ವಿಶೇಷ ಕ್ಯಾಪ್ ಅನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಮೈದಾನದಲ್ಲಿ ಉಪಸ್ಥಿತರಿದ್ದರು. ನನ್ನ ಬಾಲ್ಯ ಹೀರೋಗಳಲ್ಲಿ ಒಬ್ಬರಾದ ದ್ರಾವಿಡ್​ ಅವರಿಂದ 100ನೇ ಟೆಸ್ಟ್ ಕ್ಯಾಪ್ ಪಡೆದಿದ್ದು ಬಹಳ ಖುಷಿ ನೀಡಿದೆ ಎಂದು ಇದೇ ಸಂದರ್ಭ ವಿರಾಟ್ ನುಡಿದರು.

ದ್ರಾವಿಡ್ ಅವರಿಂದ ವಿಶೇಷ ಕ್ಯಾಪ್ ಸ್ವೀಕರಿಸಿ ಮಾತನಾಡಿದ ಕೊಹ್ಲಿ, “ರಾಹುಲ್ ದ್ರಾವಿಡ್ ಅವರಿಂದ ಈ ಕ್ಯಾಪ್ ಸ್ವೀಕರಿಸಿದ್ದು ವಿಶೇಷವಾಗಿದೆ. ದ್ರಾವಿಡ್ ಅವರು ತನ್ನ ಬಾಲ್ಯದ ಹೀರೋ. ಈ ಉಡುಗೊರೆ ಸ್ವೀಕರಿಸಲು ಅವರಿಗಿಂತ ವಿಶೇಷ ವ್ಯಕ್ತಿಯಿಂದ ಮತ್ತೊಬ್ಬರಿಲ್ಲ,” ಎಂದು ಹೇಳಿದರು.

India vs Sri Lanka 1st Test, Day 1 Live Score:

ಕೋಚ್ ರಾಹುಲ್ ದ್ರಾವಿಡ್ ಕೂಡ ಕೊಹ್ಲಿಗೆ ವಿಶೇಷ ಕ್ಯಾಪ್ ನೀಡುವ ಸಂದರ್ಭದಲ್ಲಿ ಕೊಹ್ಲಿ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. “ಇದು ವಿರಾಟ್​ಗೆ ಸಿಕ್ಕಂತಹ ಅತ್ಯಂತ ಅರ್ಹ ಗೌರವ. ಇದನ್ನು ಅರ್ಹತೆಯಿಂದಲೇ ಸಂಪಾದಿಸಿದ್ದೀರಿ. ನಾವು ಡ್ರೆಸ್ಸಿಂಗ್ ರೂಮ್‌ನಲ್ಲಿ ಹೇಳಿದಂತೆಯೇ ಈ ಸಂಭ್ರಮವನ್ನು ದ್ವಿಗುಣಗೊಳಿಸೋಣ”, ಎಂದು ದ್ರಾವಿಡ್ ಹೇಳಿದರು.

ವಿರಾಟ್ ಕೊಹ್ಲಿ ಇದಕ್ಕೆ ಧನ್ಯವಾದ ಸೂಚಿಸಿ ಮಾತನಾಡಿ, “ಇದು ನನಗೆ ಅತ್ಯಂತ ವಿಶೇಷವಾದ ಕ್ಷಣಗಳು. ಈ ಸಂದರ್ಭದಲ್ಲಿ ನನ್ನ ಪತ್ನಿ ಇಲ್ಲಿ ನನ್ನೊಂದಿಗಿದ್ದಾರೆ. ನನ್ನ ಸೋದರ ಸ್ಟ್ಯಾಂಡ್‌ನಲ್ಲಿದ್ದಾರೆ. ಇದೊಂದು ತಂಡದ ಆಟವಾಗಿದ್ದು ನೀವೆಲ್ಲಾ ಇಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ. ಬಿಸಿಸಿಐಗೆ ಕೂಡ ಧನ್ಯವಾದಗಳು. ನಾನು ಈ ಗೌರವವನ್ನು ರಾಹುಲ್ ದ್ರಾವಿಡ್ ಅವರಿಗಿಂತ ವಿಶೇಷವಾದ ವ್ಯಕ್ತಿಗಿಂತ ಸ್ವೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಬಾಲ್ಯದ ಹೀರೋ ಅವರು. ಅಂಡರ್-15 ದಿನಗಳಲ್ಲಿ ಅವರೊಂದಿಗೆ ತೆಗೆದುಕೊಂಡಿದ್ದ ಫೋಟೋ ಈಗಲೂ ನನ್ನ ಬಳಿ ಇದೆ”, ಎಂದು ಕೊಹ್ಲಿ ನೆನಪಿಸಿಕೊಂಡರು.

ಇಂದು ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ.ಈ ಮೂಲಕ ವಿಶ್ವದಲ್ಲಿ 100 ಟೆಸ್ಟ್ ಪಂದ್ಯ ಆಡಿದ ಕೆಲವೇ ಕೆಲವು ದಿಗ್ಗಜ ಆಟಗಾರರ ಸಾಲಿಗೆ ವಿರಾಟ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಕೊಹ್ಲಿ ಅವರ ಅದ್ಭುತ ಸಾಧನೆಯ ಬಗ್ಗೆ ವಿಶ್ವದ ಕ್ರಿಕೆಟ್ ದಿಗ್ಗಜರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯವಾಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ವಿಶೇಷವಾಗಿರುವ ಮೂಲಕ ವಿರಾಟ್ ಕೊಹ್ಲಿಗೆ ಧನ್ಯವಾದ ಹೇಳಿದೆ. ಈ ವಿಡಿಯೋದಲ್ಲಿ ವಿಶ್ವ ಕ್ರಿಕೆಟ್ ನ ದಿಗ್ಗಜರು ಕೊಹ್ಲಿ ಸಾಧನೆಯನ್ನು ಕೊಂಡಾಡಿದ್ದಾರೆ.

“ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ವಹಿಸಿಕೊಳ್ಳುವ ವೇಳೆಗೆ ಟೀಮ್ ಇಂಡಿಯಾ 7ನೇ ಸ್ಥಾನದಲ್ಲಿತ್ತು. ಕೊಹ್ಲಿ ನಾಯಕರಾದ ಮೇಲೆ ಸತತ ಐದು ವರ್ಷಗಳ ಕಾಲ ಟೆಸ್ಟ್ ಶ್ರೇಯಾಂಕದಲ್ಲಿ ತಂಡ ಅಗ್ರಸ್ಥಾನದಲ್ಲಿತ್ತು. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಆಟಗಾರರಾಗಿದ್ದು, ಅಂತಹ ಆಟಗಾರರಿಗಾಗಿ 100 ನೇ ಟೆಸ್ಟ್ ಪಂದ್ಯವನ್ನು ಇನ್ನಷ್ಟು ವಿಶೇಷವಾಗಿಸಲು ನಾವು ಬಯಸುತ್ತೇವೆ,” ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

Devdutt Padikkal: ಆರ್​ಸಿಬಿ ಕೈಬಿಟ್ಟಿದ್ದೆ ತಡ ಅಬ್ಬರಿಸಿದ ಪಡಿಕ್ಕಲ್: ದ್ವಿಶತಕದತ್ತ ದೇವದತ್ ಕಣ್ಣು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?