AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸಿರಾಜ್​ಗೆ ವಿಕೆಟ್​: ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ

India vs Australia 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್​ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ.

VIDEO: ಸಿರಾಜ್​ಗೆ ವಿಕೆಟ್​: ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ
Rahul Dravid
TV9 Web
| Edited By: |

Updated on: Feb 09, 2023 | 4:54 PM

Share

India vs Australia 1st Test: ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ 2ನೇ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಆಸೀಸ್ ಪಡೆಗೆ ಶಾಕ್ ನೀಡಿದ್ದರು. ಮೊದಲ ಓವರ್ ಎಸೆದ ಮೊಹಮ್ಮದ್ ಶಮಿ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಇದಾದ ಬಳಿಕ 2ನೇ ಓವರ್​ ಎಸೆದ ಮೊಹಮ್ಮದ್ ಸಿರಾಜ್ ಉಸ್ಮಾನ್ ಖ್ವಾಜಾರನ್ನು ಎಲ್​ಬಿ ಬಲೆಗೆ ಬೀಸಿದರು.

ಕೆಳ ಹಂತದಲ್ಲಿ ಬಂದ ಸಿರಾಜ್ ಚೆಂಡನ್ನು ಗುರುತಿಸುವಲ್ಲಿ ಆಸೀಸ್ ಬ್ಯಾಟರ್ ಎಡವಿದರು. ಇತ್ತ ಎಲ್​ಬಿಡಬ್ಲ್ಯೂಗೆ ಮನವಿ ಸಲ್ಲಿಸಿದರೂ ಅಂಪೈರ್ ಔಟ್ ನೀಡಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಆರ್​ಎಸ್ ಮೊರೆ ಹೋದರು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಇತ್ತ ಟೀಮ್ ಇಂಡಿಯಾ ಆಟಗಾರರು ಮೂರನೇ ಅಂಪೈರ್​ನ ತೀರ್ಪನ್ನು ಕುತೂಹಲದಿಂದ ಕಾಯುತ್ತಿದ್ದರು. ರಿಪ್ಲೇ ಪರಿಶೀಲಿಸಿದ ಥರ್ಡ್ ಅಂಪೈರ್ ಔಟ್ ಎಂದು ತೀರ್ಪಿತ್ತರು. ಇದನ್ನು ನೋಡಿ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸಲಾರಂಭಿಸಿದರು. ಮತ್ತೊಂದೆಡೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಅಂತಹದೊಂದು ಆರಂಭವನ್ನು ಎದುರು ನೋಡಿದ್ದರು. ಹೀಗಾಗಿಯೇ ಸಿರಾಜ್​ಗೆ ವಿಕೆಟ್​ ಸಿಗುತ್ತಿದ್ದಂತೆ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು. ಇದೀಗ ಶಾಂತ ಸ್ವಭಾವದ ರಾಹುಲ್ ದ್ರಾವಿಡ್ ಅವರ ಆಕ್ರಮಣಕಾರಿ ಸಂಭ್ರಮದ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್​ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಜಡೇಜಾ 5 ವಿಕೆಟ್ ಪಡೆದರೆ, ಅಶ್ವಿನ್ 3 ವಿಕೆಟ್ ಕಬಳಿಸಿ ಮಿಂಚಿದರು.

ಇದಾದ ಬಳಿಕ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 77 ರನ್​ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ 20 ರನ್​ಗಳಿಸಿ ಔಟಾದರೆ, ರೋಹಿತ್ ಶರ್ಮಾ (56) ಹಾಗೂ ಅಶ್ವಿನ್ (0) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ: Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಕೆಎಲ್ ರಾಹುಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ರವಿಚಂದ್ರನ್ ಅಶ್ವಿನ್ , ಅಕ್ಷರ್ ಪಟೇಲ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ , ಮ್ಯಾಟ್ ರೆನ್ಶಾ , ಪೀಟರ್ ಹ್ಯಾಂಡ್ಸ್ಕಾಂಬ್ , ಅಲೆಕ್ಸ್ ಕ್ಯಾರಿ (ವಿಕೆಟ್​ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ನಾಥನ್ ಲಿಯಾನ್ , ಟಾಡ್ ಮರ್ಫಿ , ಸ್ಕಾಟ್ ಬೋಲ್ಯಾಂಡ್.

Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?