AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: 27 ವರ್ಷಗಳ ಹಿಂದಿನ ಸೋಲಿನ ನೆನಪು: ಕೋಪಗೊಂಡ ರಾಹುಲ್ ದ್ರಾವಿಡ್

India vs Afghanistan: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಇನ್ನು ತನ್ನ 2ನೇ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ.

Rahul Dravid: 27 ವರ್ಷಗಳ ಹಿಂದಿನ ಸೋಲಿನ ನೆನಪು: ಕೋಪಗೊಂಡ ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jun 20, 2024 | 11:59 AM

Share

T20 World Cup 2024: ಟಿ20 ವಿಶ್ವಕಪ್​ನಲ್ಲಿ ಗುರುವಾರ (ಜೂ.20) ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ರಾಹುಲ್ ದ್ರಾವಿಡ್ ಕೋಪಗೊಂಡಿದ್ದಾರೆ. ಸದಾ ತಾಳ್ಮೆಯಲ್ಲೇ ಕಾಣಿಸಿಕೊಳ್ಳುವ ದ್ರಾವಿಡ್ ಅವರಿಗೆ 27 ವರ್ಷಗಳ ಹಿಂದಿನ ಸೋಲನ್ನು ನೆನಪಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಟೀಮ್ ಇಂಡಿಯಾ ಕೋಚ್ ತುಸು ಖಡಕ್ಕಾಗಿಯೇ ಉತ್ತರ ನೀಡಿದ್ದಾರೆ.

1997 ರಲ್ಲಿ ಬಾರ್ಬಡೋಸ್​ನ ಕೆನ್ಸಿಂಗ್ಟನ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಟೆಸ್ಟ್ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ ದ್ರಾವಿಡ್ ಎರಡು ಇನಿಂಗ್ಸ್​ಗಳಲ್ಲಿ ಕ್ರಮವಾಗಿ 78 ಮತ್ತು 2 ರನ್ ಕಲೆಹಾಕಿದ್ದರು. ಇದಾಗ್ಯೂ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 38 ರನ್​ಗಳಿಂದ ಸೋಲನುಭವಿಸಿತ್ತು.

ಇದೀಗ ಇದೇ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗುತ್ತಿದೆ. ಇದೇ ಕಾರಣದಿಂದಾಗಿ ವರದಿಗಾರರೊಬ್ಬರು, ಹಳೆಯ ಸೋಲಿನ ನೆನಪನ್ನು ಮಾಡಿ ಕಿಚಾಯಿಸಲು ಯತ್ನಿಸಿದ್ದಾರೆ.

ವರದಿಗಾರ: “ರಾಹುಲ್, ನೀವು ಆಟಗಾರನಾಗಿ, ಇಲ್ಲಿ ಆಡಿದ್ದೀರಿ. 97ರ ಟೆಸ್ಟ್‌ ನೆನಪಿದೆಯಲ್ಲವೇ?”

ದ್ರಾವಿಡ್: ” ತುಂಬಾ ಧನ್ಯವಾದಗಳು ಗೆಳೆಯ! ನಾನು ಇಲ್ಲಿ ಇತರ ಕೆಲವು ಯೋಗ್ಯ ನೆನಪುಗಳನ್ನು ಹೊಂದಿದ್ದೇನೆ.”

ವರದಿಗಾರ: “ಹಾಗಿದ್ರೆ ಗುರುವಾರ ಹೊಸ ಮತ್ತು ಉತ್ತಮವಾದ ನೆನಪುಗಳನ್ನು ಸೃಷ್ಟಿಸುತ್ತೀರಾ?”

ದ್ರಾವಿಡ್ : “ದೇವರೇ! ನಾನು ಹೊಸದನ್ನು ಮಾಡಲು ಪ್ರಯತ್ನಿಸುತ್ತಿಲ್ಲ!

“ನಾನು ಕೆಲ ವಿಷಯಗಳಿಂದ ಬೇಗನೆ ಹೊರಬರುತ್ತೇನೆ. ಅದು ನನ್ನ ವೈಶಿಷ್ಟ್ಯಗಳಲ್ಲಿ ಒಂದು. ಆ ಬಳಿಕ ಆ ವಿಷಯಗಳನ್ನು ಹಿಂತಿರುಗಿ ನೋಡುವುದಿಲ್ಲ. ನಾನು ಈಗ ಏನು ಮಾಡುತ್ತಿರುವೆ, ಏನು ಮಾಡಲು ಪ್ರಯತ್ನಿಸಬಹುದು ಎಂಬುದನ್ನಷ್ಟೇ ಯೋಚಿಸುತ್ತೇನೆ. 1997 ರಲ್ಲಿ ಅಥವಾ ಆ ಬಳಿಕ ಏನಾಯಿತು ಎಂಬುದರ ಬಗ್ಗೆ ಚಿಂತಿಸುವುದಿಲ್ಲ ಎಂದು ರಾಹುಲ್ ದ್ರಾವಿಡ್ ಖಾರವಾಗಿ ಉತ್ತರಿಸಿದರು.

ಅಫ್ಘಾನಿಸ್ತಾನವನ್ನು ಹಗುರವಾಗಿ ಪರಿಗಣಿಸುವುದಿಲ್ಲ:

ನಾವು ಅಫ್ಘಾನಿಸ್ತಾನ್ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಟಿ20 ಸ್ವರೂಪದಲ್ಲಿ ಅಫ್ಘಾನಿಸ್ತಾನ್ ಅಪಾಯಕಾರಿ ತಂಡವಾಗಿದೆ. ಅವರು ಈ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಇದನ್ನೂ ಓದಿ: Phil Salt: 6,6,6,6,6: ಹೊಸ ದಾಖಲೆ ಬರೆದ ಫಿಲ್ ಸಾಲ್ಟ್

ಅವರಿಗೆ ಹೆಚ್ಚಿನ ಅಂತಾರಾಷ್ಟ್ರೀಯ ಅನುಭವ ಇಲ್ಲದಿರಬಹುದು, ಆದರೆ ಅವರ ಕೆಲವು ಆಟಗಾರರು ನಮ್ಮ ಆಟಗಾರರಿಗಿಂತ ಹೆಚ್ಚು T20 ಲೀಗ್‌ಗಳಲ್ಲಿ ನಿಯಮಿತವಾಗಿ ಆಡಿದ್ದಾರೆ. ಅಲ್ಲದೆ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ತಂಡವನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್