AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: 27 ವರ್ಷಗಳ ಹಿಂದಿನ ಸೋಲಿನ ನೆನಪು: ಕೋಪಗೊಂಡ ರಾಹುಲ್ ದ್ರಾವಿಡ್

India vs Afghanistan: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಇನ್ನು ತನ್ನ 2ನೇ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ.

Rahul Dravid: 27 ವರ್ಷಗಳ ಹಿಂದಿನ ಸೋಲಿನ ನೆನಪು: ಕೋಪಗೊಂಡ ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jun 20, 2024 | 11:59 AM

Share

T20 World Cup 2024: ಟಿ20 ವಿಶ್ವಕಪ್​ನಲ್ಲಿ ಗುರುವಾರ (ಜೂ.20) ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ರಾಹುಲ್ ದ್ರಾವಿಡ್ ಕೋಪಗೊಂಡಿದ್ದಾರೆ. ಸದಾ ತಾಳ್ಮೆಯಲ್ಲೇ ಕಾಣಿಸಿಕೊಳ್ಳುವ ದ್ರಾವಿಡ್ ಅವರಿಗೆ 27 ವರ್ಷಗಳ ಹಿಂದಿನ ಸೋಲನ್ನು ನೆನಪಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಟೀಮ್ ಇಂಡಿಯಾ ಕೋಚ್ ತುಸು ಖಡಕ್ಕಾಗಿಯೇ ಉತ್ತರ ನೀಡಿದ್ದಾರೆ.

1997 ರಲ್ಲಿ ಬಾರ್ಬಡೋಸ್​ನ ಕೆನ್ಸಿಂಗ್ಟನ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಟೆಸ್ಟ್ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ ದ್ರಾವಿಡ್ ಎರಡು ಇನಿಂಗ್ಸ್​ಗಳಲ್ಲಿ ಕ್ರಮವಾಗಿ 78 ಮತ್ತು 2 ರನ್ ಕಲೆಹಾಕಿದ್ದರು. ಇದಾಗ್ಯೂ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 38 ರನ್​ಗಳಿಂದ ಸೋಲನುಭವಿಸಿತ್ತು.

ಇದೀಗ ಇದೇ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗುತ್ತಿದೆ. ಇದೇ ಕಾರಣದಿಂದಾಗಿ ವರದಿಗಾರರೊಬ್ಬರು, ಹಳೆಯ ಸೋಲಿನ ನೆನಪನ್ನು ಮಾಡಿ ಕಿಚಾಯಿಸಲು ಯತ್ನಿಸಿದ್ದಾರೆ.

ವರದಿಗಾರ: “ರಾಹುಲ್, ನೀವು ಆಟಗಾರನಾಗಿ, ಇಲ್ಲಿ ಆಡಿದ್ದೀರಿ. 97ರ ಟೆಸ್ಟ್‌ ನೆನಪಿದೆಯಲ್ಲವೇ?”

ದ್ರಾವಿಡ್: ” ತುಂಬಾ ಧನ್ಯವಾದಗಳು ಗೆಳೆಯ! ನಾನು ಇಲ್ಲಿ ಇತರ ಕೆಲವು ಯೋಗ್ಯ ನೆನಪುಗಳನ್ನು ಹೊಂದಿದ್ದೇನೆ.”

ವರದಿಗಾರ: “ಹಾಗಿದ್ರೆ ಗುರುವಾರ ಹೊಸ ಮತ್ತು ಉತ್ತಮವಾದ ನೆನಪುಗಳನ್ನು ಸೃಷ್ಟಿಸುತ್ತೀರಾ?”

ದ್ರಾವಿಡ್ : “ದೇವರೇ! ನಾನು ಹೊಸದನ್ನು ಮಾಡಲು ಪ್ರಯತ್ನಿಸುತ್ತಿಲ್ಲ!

“ನಾನು ಕೆಲ ವಿಷಯಗಳಿಂದ ಬೇಗನೆ ಹೊರಬರುತ್ತೇನೆ. ಅದು ನನ್ನ ವೈಶಿಷ್ಟ್ಯಗಳಲ್ಲಿ ಒಂದು. ಆ ಬಳಿಕ ಆ ವಿಷಯಗಳನ್ನು ಹಿಂತಿರುಗಿ ನೋಡುವುದಿಲ್ಲ. ನಾನು ಈಗ ಏನು ಮಾಡುತ್ತಿರುವೆ, ಏನು ಮಾಡಲು ಪ್ರಯತ್ನಿಸಬಹುದು ಎಂಬುದನ್ನಷ್ಟೇ ಯೋಚಿಸುತ್ತೇನೆ. 1997 ರಲ್ಲಿ ಅಥವಾ ಆ ಬಳಿಕ ಏನಾಯಿತು ಎಂಬುದರ ಬಗ್ಗೆ ಚಿಂತಿಸುವುದಿಲ್ಲ ಎಂದು ರಾಹುಲ್ ದ್ರಾವಿಡ್ ಖಾರವಾಗಿ ಉತ್ತರಿಸಿದರು.

ಅಫ್ಘಾನಿಸ್ತಾನವನ್ನು ಹಗುರವಾಗಿ ಪರಿಗಣಿಸುವುದಿಲ್ಲ:

ನಾವು ಅಫ್ಘಾನಿಸ್ತಾನ್ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಟಿ20 ಸ್ವರೂಪದಲ್ಲಿ ಅಫ್ಘಾನಿಸ್ತಾನ್ ಅಪಾಯಕಾರಿ ತಂಡವಾಗಿದೆ. ಅವರು ಈ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಇದನ್ನೂ ಓದಿ: Phil Salt: 6,6,6,6,6: ಹೊಸ ದಾಖಲೆ ಬರೆದ ಫಿಲ್ ಸಾಲ್ಟ್

ಅವರಿಗೆ ಹೆಚ್ಚಿನ ಅಂತಾರಾಷ್ಟ್ರೀಯ ಅನುಭವ ಇಲ್ಲದಿರಬಹುದು, ಆದರೆ ಅವರ ಕೆಲವು ಆಟಗಾರರು ನಮ್ಮ ಆಟಗಾರರಿಗಿಂತ ಹೆಚ್ಚು T20 ಲೀಗ್‌ಗಳಲ್ಲಿ ನಿಯಮಿತವಾಗಿ ಆಡಿದ್ದಾರೆ. ಅಲ್ಲದೆ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ತಂಡವನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ