AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ನಾನು ನಿರುದ್ಯೋಗಿ, ಕೆಲಸ ಇದ್ರೆ ತಿಳಿಸಿ: ರಾಹುಲ್ ದ್ರಾವಿಡ್

Rahul Dravid: ವಿಶ್ವಕಪ್ ಗೆಲ್ಲಬೇಕೆಂಬ ರಾಹುಲ್ ದ್ರಾವಿಡ್ ಅವರ ಬಹುದೊಡ್ಡ ಕನಸು ಕೊನೆಗೂ ಈಡೇರಿದೆ. ಈ ಹಿಂದೆ ಭಾರತದ ಪರ ವಿಶ್ವಕಪ್​ ಟೂರ್ನಿಗಳನ್ನು ಆಡಿದರೂ ದ್ರಾವಿಡ್ ಅವರಿಗೆ ವಿಶ್ವಕಪ್ ಎತ್ತಿ ಹಿಡಿಯಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ರಾಹುಲ್ ದ್ರಾವಿಡ್ ಕೋಚ್ ಆಗಿ ತಮ್ಮ ವಿಶ್ವಕಪ್ ಗೆಲ್ಲುವ ಕನಸನ್ನು ಈಡೇರಿಸಿಕೊಂಡಿದ್ದಾರೆ.

Rahul Dravid: ನಾನು ನಿರುದ್ಯೋಗಿ, ಕೆಲಸ ಇದ್ರೆ ತಿಳಿಸಿ: ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jul 02, 2024 | 10:09 AM

Share

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಕಾರ್ಯಾವಧಿ ಮುಗಿದಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ದ್ರಾವಿಡ್ ಕೋಚ್ ಆಗಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ವಿವಿಎಸ್​ ಲಕ್ಷ್ಮಣ್ ಅವರನ್ನು ತಾತ್ಕಾಲಿಕ ಕೋಚ್ ಆಗಿ ನೇಮಿಸಲಾಗಿದೆ.

ಹಾಗೆಯೇ ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಭಾರತ ತಂಡದ ನೂತನ ಕೋಚ್ ಅನ್ನು ಘೋಷಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ತಿಳಿಸಿದ್ದಾರೆ. ಅತ್ತ ಟೀಮ್ ಇಂಡಿಯಾ ಕೋಚ್ ರೇಸ್​ನಲ್ಲಿ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಭಾರತ ತಂಡದ ತರಬೇತುದಾರನಾಗಿ ಗೌತಿ ಹೊಸ ಇನಿಂಗ್ಸ್ ಆರಂಭಿಸಿದರೂ ಅಚ್ಚರಿಪಡಬೇಕಿಲ್ಲ.

ಇತ್ತ ಟಿ20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದಿರುವ ರಾಹುಲ್ ದ್ರಾವಿಡ್ ಅವರಿಗೆ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್, ಈ ಗೆಲುವಿನಿಂದ ನಾನು ಶೀಘ್ರದಲ್ಲೇ ಹೊರಬರುತ್ತೇನೆ. ಏಕೆಂದರೆ ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ. ಏನಾದರು ಕೆಲಸ ಇದ್ದರೆ ಹೇಳಿ ಎಂದು ದ್ರಾವಿಡ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇದೀಗ ರಾಹುಲ್ ದ್ರಾವಿಡ್ ಅವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ:

ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿ ವಿಶ್ವಕಪ್ ಎತ್ತಿ ಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (76) ಅಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಪರಿಣಾಮ ಕೊನೆಯ ಓವರ್​ನಲ್ಲಿ 16 ರನ್​ಗಳು ಬೇಕಿತ್ತು. ಅಂತಿಮ ಓವರ್ ಎಸೆದ ಹಾರ್ದಿಕ್ ಪಾಂಡ್ಯ ಕೇವಲ 8 ರನ್ ನೀಡುವ ಮೂಲಕ ಸೌತ್ ಆಪ್ರಿಕಾ ತಂಡವನ್ನು 169 ರನ್​ಗಳಿಗೆ ನಿಯಂತ್ರಿಸಿದರು. ಈ ಮೂಲಕ ಭಾರತ ತಂಡವು 7 ರನ್​ಗಳ ಜಯ ಸಾಧಿಸಿತು.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಪಾಲಿಗೆ ಮರೀಚಿಕೆಯಾಗಿರುವ 2 ಟ್ರೋಫಿ

ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಆಟಗಾರರು ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ. ಇದರೊಂದಿಗೆ ದ್ರಾವಿಡ್ ಅವರ ಕೋಚಿಂಗ್ ಕೆರಿಯರ್ ಕೂಡ ಅಂತ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಅವರು ಬಿಸಿಸಿಐ ಜೊತೆ ಕೈ ಜೋಡಿಸಲಿದ್ದಾರಾ ಕಾದು ನೋಡಬೇಕಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ