AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಕಾಲಿಗೆ ಪ್ಲಾಸ್ಟರ್, ವೀಲ್‌ಚೇರ್‌ನಲ್ಲೇ ತರಬೇತಿ: ರಾಹುಲ್ ದ್ರಾವಿಡ್‌ಗೆ ಏನಾಯಿತು?

IPL 2025: ರಾಹುಲ್ ದ್ರಾವಿಡ್ ಅವರಿಗೆ ಬೆಂಬಲವಿಲ್ಲದೆ ನಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಗಾಯದ ಹೊರತಾಗಿಯೂ ದ್ರಾವಿಡ್ ವಿಶ್ರಾಂತಿ ತೆಗೆದುಕೊಳ್ಳದೆ ತಮ್ಮ ಜವಾಭ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ವಿಡಿಯೋದಲ್ಲಿ, ದ್ರಾವಿಡ್ ವೀಲ್‌ಚೇರ್ ಮೇಲೆ ಕುಳಿತು ರಾಜಸ್ಥಾನ ರಾಯಲ್ಸ್ ಆಟಗಾರರಿಗೆ ಮೈದಾನದಲ್ಲಿ ತರಬೇತಿ ನೀಡುತ್ತಿರುವುದನ್ನು ಕಾಣಬಹುದು.

Rahul Dravid: ಕಾಲಿಗೆ ಪ್ಲಾಸ್ಟರ್, ವೀಲ್‌ಚೇರ್‌ನಲ್ಲೇ ತರಬೇತಿ: ರಾಹುಲ್ ದ್ರಾವಿಡ್‌ಗೆ ಏನಾಯಿತು?
Rahul Dravid
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 20, 2025 | 5:09 PM

Share

ಬೆಂಗಳೂರು (ಮಾ. 20): ಭಾರತೀಯ ಕ್ರಿಕೆಟ್ ತಂಡದ ದಂತಕಥೆ ರಾಹುಲ್ ದ್ರಾವಿಡ್ (Rahul Dravid) ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಸದ್ಯ ಐಪಿಎಲ್ 2025 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲ ತಂಡಗಳು ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿವೆ. ದ್ರಾವಿಡ್ ಕೂಡ ಆರ್ ಆರ್ ತಂಡದ ಅಭ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ದ್ರಾವಿಡ್ ಊರುಗೋಲಿನ ಜೊತೆಗೆ ಮತ್ತು ವೀಲ್‌ಚೇರ್‌ನಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲದೆ ದ್ರಾವಿಡ್ ಕಾಲಿಗೆ ದಪ್ಪ ಪ್ಲಾಸ್ಟರ್ ಹಾಕಲಾಗಿದೆ. ಇದರಿಂದ, ಅವರ ಗಾಯ ಎಷ್ಟು ಗಂಭೀರವಾಗಿದೆ ಎಂದು ಅಂದಾಜು ಮಾಡಬಹುದು.

ರಾಹುಲ್ ದ್ರಾವಿಡ್ ಅವರಿಗೆ ಬೆಂಬಲವಿಲ್ಲದೆ ನಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಗಾಯದ ಹೊರತಾಗಿಯೂ ದ್ರಾವಿಡ್ ವಿಶ್ರಾಂತಿ ತೆಗೆದುಕೊಳ್ಳದೆ ತಮ್ಮ ಜವಾಭ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ವಿಡಿಯೋದಲ್ಲಿ, ದ್ರಾವಿಡ್ ವೀಲ್‌ಚೇರ್ ಮೇಲೆ ಕುಳಿತು ರಾಜಸ್ಥಾನ ರಾಯಲ್ಸ್ ಆಟಗಾರರಿಗೆ ಮೈದಾನದಲ್ಲಿ ತರಬೇತಿ ನೀಡುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಸಾರ್ವಜನಿಕವಾಗಿ ಆರ್‌ಸಿಬಿಯನ್ನು ಗೇಲಿ ಮಾಡಿದ ಸಿಎಸ್‌ಕೆ ಆಟಗಾರ: VIDEO
Image
ಐಪಿಎಲ್​ಗಾಗಿ 5 ವರ್ಷಗಳ ನಿಷೇಧವನ್ನು ರದ್ದುಗೊಳಿಸಿದ ಬಿಸಿಸಿಐ
Image
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
Image
ಬೆಂಗಳೂರಿನಲ್ಲಿ ಆರ್​ಸಿಬಿ vs ಡೆಲ್ಲಿ ಫೈಟ್; ಪಂದ್ಯದ ಟಿಕೆಟ್ ಮಾರಾಟ

ದ್ರಾವಿಡ್ ಅವರ ಈ ಸಮರ್ಪಣೆಯನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ. ಗಾಯಗೊಂಡಿದ್ದರೂ ಸಹ, ಮುಂಬರುವ ಐಪಿಎಲ್ ಋತುವಿನಲ್ಲಿ ಅವರು ತಮ್ಮ ತಂಡಕ್ಕೆ ತನ್ನ ಕೈಯಿಂದ ಏನು ಕೊಡುಗೆ ನೀಡಲು ಸಾಧ್ಯವೋ ಅದನ್ನು ಮಾಡುತ್ತಿದ್ದಾರೆ. 18ನೇ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಪಂದ್ಯ ಮಾರ್ಚ್ 23 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿದೆ.

IPL 2025, RCB: ಸಾರ್ವಜನಿಕವಾಗಿ ಆರ್‌ಸಿಬಿಯನ್ನು ಗೇಲಿ ಮಾಡಿದ ಸಿಎಸ್‌ಕೆ ಆಟಗಾರ: ವಿಡಿಯೋ

ರಾಹುಲ್ ದ್ರಾವಿಡ್​ಗೆ ಈ ಗಾಯ ಯಾವಾಗ ಆಯಿತು?:

ಟೀಮ್ ಇಂಡಿಯಾದ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್, ವಿಜಯ ಕ್ರಿಕೆಟ್ ಕ್ಲಬ್ ಪರ ಆಡುವಾಗ ಈ ಗಾಯಕ್ಕೆ ಒಳಗಾದರು. ದ್ರಾವಿಡ್ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಲೀಗ್ ಪಂದ್ಯವನ್ನು ಆಡುತ್ತಿದ್ದರು. ಈ ಪಂದ್ಯದಲ್ಲಿ ಅವರ ಮಗ ಅನ್ವಯ್ ಕೂಡ ದ್ರಾವಿಡ್ ಜೊತೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಆಡುವಾಗ ದ್ರಾವಿಡ್ ಅವರ ಎಡಗಾಲಿಗೆ ಗಾಯವಾಗಿದೆ. ಗಾಯದಿಂದಾಗಿ, ಸ್ನಾಯುರಜ್ಜು ಅಂದರೆ ಮೂಳೆಯನ್ನು ಸಂಪರ್ಕಿಸುವ ರಕ್ತನಾಳಕ್ಕೆ ದೊಡ್ಡ ಪೆಟ್ಟಾಗಿದೆ. ಆದಾಗ್ಯೂ, ಇದರ ಹೊರತಾಗಿಯೂ, ಅವರು ರಾಜಸ್ಥಾನ್ ರಾಯಲ್ಸ್ ಆಟಗಾರರ ಮೇಲೆ ನಿಗಾ ಇಡುತ್ತಿದ್ದಾರೆ.

ಆರ್​ಆರ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ಕೂಡ ಗಾಯ:

ಕೋಚ್ ಮಾತ್ರವಲ್ಲ, ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕೂಡ ಗಾಯಗೊಂಡಿದ್ದಾರೆ. ಕಳೆದ ತಿಂಗಳು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ವೇಳೆ ಸಂಜು ಸ್ಯಾಮ್ಸನ್ ಬೆರಳಿಗೆ ಗಾಯವಾಗಿತ್ತು. ಇದರಿಂದಾಗಿ, ಸಂಜು ಇನ್ನು ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಐಪಿಎಲ್ 2025ರ ಮೊದಲ ಮೂರು ಪಂದ್ಯಗಳಲ್ಲಿ ಸಂಜು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ವಹಿಸಿಕೊಳ್ಳುವುದಿಲ್ಲ. ಅವರ ಸ್ಥಾನದಲ್ಲಿ ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ ನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆದಾಗ್ಯೂ, ಬ್ಯಾಟ್ಸ್‌ಮನ್ ಆಗಿರುವುದರ ಹೊರತಾಗಿ, ಸಂಜು ತಂಡಕ್ಕಾಗಿ ಇಂಪ್ಯಾಕ್ಟ್ ಸಬ್ ಆಗಿ ಆಡಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ