AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಕೋಚ್ ಹುದ್ದೆ ನನಗೆ ಬೇಡ! ಬಿಸಿಸಿಐ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ ರಾಹುಲ್ ದ್ರಾವಿಡ್

ಟೀಂ ಇಂಡಿಯಾದ ಕೋಚ್ ಪಾತ್ರವನ್ನು ತೆಗೆದುಕೊಳ್ಳುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪ್ರಸ್ತಾಪವನ್ನು ರಾಹುಲ್ ದ್ರಾವಿಡ್ ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಟೀಂ ಇಂಡಿಯಾ ಕೋಚ್ ಹುದ್ದೆ ನನಗೆ ಬೇಡ! ಬಿಸಿಸಿಐ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ ರಾಹುಲ್ ದ್ರಾವಿಡ್
Rahul Dravid
TV9 Web
| Updated By: ಪೃಥ್ವಿಶಂಕರ|

Updated on: Oct 13, 2021 | 3:55 PM

Share

ಟೀಂ ಇಂಡಿಯಾದ ಕೋಚ್ ಪಾತ್ರವನ್ನು ತೆಗೆದುಕೊಳ್ಳುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪ್ರಸ್ತಾಪವನ್ನು ರಾಹುಲ್ ದ್ರಾವಿಡ್ ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಂಬರುವ ಟಿ 20 ವಿಶ್ವಕಪ್ ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಒಮಾನ್‌ನಲ್ಲಿ ನಿಗದಿಯಾಗಿರುವ ಟಿ ವಿಶ್ವಕಪ್‌ ನಂತರ ಭಾರತ ತಂಡದ ಮುಖ್ಯ ಕೋಚ್ ರವಿ ಶಾಸ್ತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಂತರ ಬಿಸಿಸಿಐ ತಂಡಕ್ಕೆ ಹೊಸ ಕೋಚ್ ಹುಡುಕಾಟದಲ್ಲಿ ನಿರತವಾಗಿದೆ.

ಶಾಸ್ತ್ರಿಯ ಜೊತೆಗೆ, ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಸೇರಿದಂತೆ ಇತರ ಸಹಾಯಕ ಸಿಬ್ಬಂದಿಗಳು ತಮ್ಮ ಸ್ಥಾನಗಳನ್ನು ತೊರೆಯುವ ನಿರೀಕ್ಷೆಯಿದೆ. ಹಿರಿಯ ತಂಡದ ಶಕ್ತಿ ಮತ್ತು ಕಂಡೀಷನಿಂಗ್ ಕೋಚ್ ನಿಕ್ ವೆಬ್ ಕೂಡ ಮುಂಬರುವ ವಿಶ್ವಕಪ್ ನಂತರ ತನ್ನ ನಿರ್ಗಮನವನ್ನು ಖಚಿತಪಡಿಸಿದ್ದಾರೆ.

ದ್ರಾವಿಡ್‌ಗೆ ಸಂಬಂಧಿಸಿದಂತೆ, 48 ವರ್ಷದ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಚುಕ್ಕಾಣಿ ಹಿಡಿದಿದ್ದಾರೆ ಮತ್ತು ಅಂಡರ್ 19 ಮತ್ತು ಭಾರತ A ತಂಡಗಳ ಉಸ್ತುವಾರಿಯೂ ಆಗಿದ್ದಾರೆ. ಹಿರಿಯ ತಂಡದೊಂದಿಗೆ ದ್ರಾವಿಡ್‌ಗೆ ಆಫರ್ ನೀಡುತ್ತಿರುವುದು ಇದೇ ಮೊದಲಲ್ಲ, ಆದಾಗ್ಯೂ, ಅವರು 2016 ಮತ್ತು 2017 ರಲ್ಲಿ ಬಿಸಿಸಿಐ ಕೋರಿಕೆಯನ್ನು ತಿರಸ್ಕರಿಸಿದ್ದರಿಂದ ಜೂನಿಯರ್ ಕ್ರಿಕೆಟ್‌ನಲ್ಲಿ ಗಮನಹರಿಸಲು ಮತ್ತು ಎನ್‌ಸಿಎಯಲ್ಲಿ ಸೇವೆ ಸಲ್ಲಿಸಲು ಆಯ್ಕೆ ಮಾಡಿಕೊಂಡರು.

ಎಲ್ಲಾ ಕ್ರಿಕೆಟ್ ವಲಯಗಳಲ್ಲಿಯೂ ಅತ್ಯಂತ ಗೌರವಯುತವಾಗಿರುವ ದ್ರಾವಿಡ್, ಹಲವು ವರ್ಷಗಳಿಂದ ಯುವಕರು ಮತ್ತು ಕಚ್ಚಾ ಪ್ರತಿಭೆಗಳನ್ನು ಪೋಷಿಸುವ ಮತ್ತು ಮಾರ್ಗದರ್ಶನ ಮಾಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾರತವು ಅಪೇಕ್ಷಣೀಯ ಬೆಂಚ್ ಬಲವನ್ನು ಹೊಂದಲು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರಂತರ ಆಟಗಾರರನ್ನು ಪೂರೈಸಲು ಅನುವು ಮಾಡಿಕೊಟ್ಟಿದ್ದಾರೆ.

ಸಾಗರೋತ್ತರ ಬ್ಯಾಟಿಂಗ್ ಸಲಹೆ ದ್ರಾವಿಡ್ ಈ ಹಿಂದೆ 2018 ರಲ್ಲಿ ಭಾರತದ ಸಾಗರೋತ್ತರ ಬ್ಯಾಟಿಂಗ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಅವರು ಜುಲೈನಲ್ಲಿ ಸೀಮಿತ ಓವರ್‌ಗಳ ಸರಣಿಗಾಗಿ ಶ್ರೀಲಂಕಾಕ್ಕೆ ತಂಡದ ತರಬೇತುದಾರರಾಗಿ ಪ್ರಯಾಣಿಸಿದ್ದರು. ಏತನ್ಮಧ್ಯೆ, ಬಿಸಿಸಿಐ, ತನ್ನ ಸಂವಿಧಾನದ ಅಡಿಯಲ್ಲಿ ನೀಡಲಾಗಿರುವ ನಿಯಮಗಳ ಪ್ರಕಾರ, ಭಾರತದ ಮುಖ್ಯ ಕೋಚ್ ಹುದ್ದೆಗೆ ಅಧಿಕೃತವಾಗಿ ಪ್ರಸ್ತುತ ಸಿಬ್ಬಂದಿಯ ಅಧಿಕಾರಾವಧಿಯ ಅಂತ್ಯಕ್ಕೆ ಹತ್ತಿರವಾಗುವಂತೆ ಜಾಹೀರಾತು ನೀಡಲಿದೆ ಎಂದು ತಿಳಿದುಬಂದಿದೆ.

ಎಲ್ಲಾ ಟಿ 20 ವಿಶ್ವಕಪ್‌ಗೆ ಒಳಪಟ್ಟಿರುವ ಭಾರತೀಯ ಆಟಗಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಪ್ರಸ್ತುತ ಯುಎಇಯಲ್ಲಿದ್ದಾರೆ. ಅವರಲ್ಲಿ ಹೆಚ್ಚಿನವರು ಇಂಡಿಯನ್ ಪ್ರೀಮಿಯರ್ ಲೀಗ್‌ನ 2021 ರ ಆವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಟಿ 20 ವಿಶ್ವಕಪ್ ಅರ್ಹತಾ ಪಂದ್ಯಗಳ ಆರಂಭಕ್ಕೆ ಕೇವಲ ಎರಡು ದಿನಗಳ ಮೊದಲು ಅಕ್ಟೋಬರ್ 15 ರಂದು ಕೊನೆಗೊಳ್ಳುತ್ತದೆ. ಅಕ್ಟೋಬರ್ 24 ರಂದು ಪಾಕಿಸ್ತಾನ ವಿರುದ್ಧ ಭಾರತ ತನ್ನ ಅಭಿಯಾನ ಆರಂಭಿಸಲಿದೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?