AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನಿಂದ ಔಟ್; ದ್ರಾವಿಡ್​ ಟೀಂಗೆ ವಿಶ್ರಾಂತಿ, ಲಕ್ಷ್ಮಣ್​ಗೆ ಕೋಚಿಂಗ್ ಜವಾಬ್ದಾರಿ

ತಂಡದ ಕೋಚಿಂಗ್ ಸ್ಟಾಫ್​ನಲ್ಲಿ ಬದಲಾವಣೆ ಆಗಲಿದ್ದು, ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್ ಬರಲಿದ್ದಾರೆ ಎಂಬ ಸುದ್ದಿ ಇದೆ. ಆದಾಗ್ಯೂ, ಈ ಬದಲಾವಣೆ ಕೇವಲ ಒಂದು ಸರಣಿಗೆ ಮಾತ್ರ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

ಟಿ20 ವಿಶ್ವಕಪ್​ನಿಂದ ಔಟ್; ದ್ರಾವಿಡ್​ ಟೀಂಗೆ ವಿಶ್ರಾಂತಿ, ಲಕ್ಷ್ಮಣ್​ಗೆ ಕೋಚಿಂಗ್ ಜವಾಬ್ದಾರಿ
ಮುಖ್ಯ ಕೋಚ್ ರಾಹುಲ್ ದ್ರಾವಿಡ್
TV9 Web
| Edited By: |

Updated on:Nov 11, 2022 | 12:31 PM

Share

ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2022) ಭಾರತದ ಪಯಣ ಅಂತ್ಯಗೊಂಡಿದೆ. ಗುರುವಾರ ಅಡಿಲೇಡ್‌ ಓವಲ್‌ನಲ್ಲಿ ಇಂಗ್ಲೆಂಡ್‌ ಎದುರು ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ರೋಹಿತ್ ಪಡೆಯ ಕನಸು ಭಗ್ನಗೊಂಡಿದೆ. ಅಂದಿನಿಂದ ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಬದಲಾವಣೆಗಳಾಗಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ತಂಡದ ಕೋಚಿಂಗ್ ಸ್ಟಾಫ್​ನಲ್ಲಿ ಬದಲಾವಣೆ ಆಗಲಿದ್ದು, ರಾಹುಲ್ ದ್ರಾವಿಡ್ (Rahul Dravid) ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ (VVS. Laxman) ಬರಲಿದ್ದಾರೆ ಎಂಬ ಸುದ್ದಿ ಇದೆ. ಆದಾಗ್ಯೂ, ಈ ಬದಲಾವಣೆ ಕೇವಲ ಒಂದು ಸರಣಿಗೆ ಮಾತ್ರ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

ಟಿ20 ವಿಶ್ವಕಪ್ ಬಳಿಕ ಭಾರತ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಬೇಕಿದೆ. ಭಾರತ ತಂಡ ಈ ತಿಂಗಳು ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ ಮೂರು ಟಿ20 ಮತ್ತು ಅಷ್ಟೂ ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾವನ್ನು ಪ್ರಕಟಿಸಿದೆ.

ರಾಹುಲ್ ಮತ್ತು ಕಂಪನಿಗೆ ವಿಶ್ರಾಂತಿ

ಆಂಗ್ಲ ಪತ್ರಿಕೆ ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಏಷ್ಯಾಕಪ್‌ನಿಂದ ನಿರಂತರವಾಗಿ ತಂಡದೊಂದಿಗಿರುವ ಕೋಚಿಂಗ್ ಸಿಬ್ಬಂದಿಗೆ ಟಿ20 ವಿಶ್ವಕಪ್ ನಂತರ ವಿರಾಮ ನೀಡಲಾಗುವುದು. ಹೀಗಾಗಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬೌಲಿಂಗ್ ಕೋಚ್ ಪರಸ್ ಮಹಾಂಬ್ರೆ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನವನ್ನು ವಿ.ವಿ.ಎಸ್. ಲಕ್ಷ್ಮಣ್, ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್), ಸಾಯಿರಾಜ್ ಬಹುಲೆ (ಬೌಲಿಂಗ್ ಕೋಚ್) ತುಂಬಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Rohit Sharma: ಧೋನಿಯ ಗುಣಗಳು ಮೈದಾನದಲ್ಲಿ ಕಾಣಲಿಲ್ಲ; ಈ ವಿಶ್ವಕಪ್​ನಲ್ಲಿ ರೋಹಿತ್ ಮಾಡಿದ ತಪ್ಪುಗಳಿವು..!

ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ತನ್ನ ವರದಿಯಲ್ಲಿ, “ಸಪೋರ್ಟ್ ಸ್ಟಾಫ್ – ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬೌಲಿಂಗ್ ಕೋಚ್ ಪರಾಸ್, ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿರುವ ಬ್ಯಾಟಿಂಗ್ ಕೋಚ್ ವಿಕ್ರಮ್, ಪಂದ್ಯಾವಳಿಯ ನಂತರ ಮನೆಗೆ ಮರಳಲಿದ್ದು, ಕೆಲವು ದಿನಗಳ ವಿಶ್ರಾಂತಿ ಪಡೆಯಲಿದ್ದಾರೆ. ಆ ಬಳಿಕ ಇವರೆಲ್ಲರು ಬಾಂಗ್ಲಾದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಹಾಗೆಯೇ ತೆರವಾದ ಈ ಜಾಗಗಳಿಗೆ ಲಕ್ಷ್ಮಣ್ ಜೊತೆಗೆ ರಿಷಿಕೇಶ್ ಮತ್ತು ಬಹುಲೆ ಸೇರಿಕೊಂಡಿದ್ದಾರೆ ಎಂದು ತಿಳಿಸಿದೆ.

ಲಕ್ಷ್ಮಣ್​ಗೆ ಈಗಾಗಲೇ ಈ ಜವಬ್ದಾರಿ ನೀಡಲಾಗಿತ್ತು

ಆದಾಗ್ಯೂ, ಲಕ್ಷ್ಮಣ್, ರಿಷಿಕೇಶ್ ಮತ್ತು ಬಹುಲೆ ಅವರನ್ನು ಟೀಮ್ ಇಂಡಿಯಾದೊಂದಿಗೆ ಕಳುಹಿಸುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಈ ಮೂವರೂ ತಂಡದೊಂದಿಗೆ ಕೆಲಸ ಮಾಡಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಮೊದಲ ಬಾರಿಗೆ ಲಕ್ಷ್ಮಣ್​ ಟೀಂಗೆ ತಂಡದ ಜವಾಬ್ದಾರಿಯನ್ನು ನೀಡಲಾಗಿತ್ತು. ಇದರ ನಂತರ, ಅವರು ಏಷ್ಯಾಕಪ್‌ಗೆ ಮುನ್ನ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡದೊಂದಿಗೆ ತೆರಳಿದ್ದರು. ದಕ್ಷಿಣ ಆಫ್ರಿಕಾದೊಂದಿಗೆ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲೂ ಇದೇ ತಂಡ ಟೀಂ ಇಂಡಿಯಾದೊಂದಿಗಿತ್ತು. ಈ ಮೂವರು ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದು, ಲಕ್ಷ್ಮಣ್ ಎನ್‌ಸಿಎ ಮುಖ್ಯಸ್ಥರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Fri, 11 November 22

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ