AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊಹ್ಲಿ ಏಕೆ ಪತ್ರಿಕಾಗೋಷ್ಠಿ ನಡೆಸುತ್ತಿಲ್ಲ, ಯಾವಾಗ ಮಾಧ್ಯಮದ ಮುಂದೆ ಬರುತ್ತಾರೆ? ದ್ರಾವಿಡ್ ಉತ್ತರ ಹೀಗಿತ್ತು

IND vs SA: ಅದೇನಿಲ್ಲ... ನಾನು ಅದನ್ನು ನಿರ್ಧರಿಸುವುದಿಲ್ಲ. ಈಗ ಅವರ 100 ನೇ ಟೆಸ್ಟ್ ನಡೆಯಲಿದೆ, ಆಗ ವಿರಾಟ್ ಪತ್ರಿಕಾಗೋಷ್ಠಿಗೆ ಬರುತ್ತಾರೆ. ಆಗ ನೀವು ಅವರಿಗೆ ಪ್ರಶ್ನೆಗಳನ್ನು ಕೇಳಬಹುದು

IND vs SA: ಕೊಹ್ಲಿ ಏಕೆ ಪತ್ರಿಕಾಗೋಷ್ಠಿ ನಡೆಸುತ್ತಿಲ್ಲ, ಯಾವಾಗ ಮಾಧ್ಯಮದ ಮುಂದೆ ಬರುತ್ತಾರೆ? ದ್ರಾವಿಡ್ ಉತ್ತರ ಹೀಗಿತ್ತು
ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on: Jan 02, 2022 | 5:41 PM

Share

ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಸಮಾವೇಶದಲ್ಲಿ ಕೊಹ್ಲಿ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಟ್ವೆಂಟಿ-20 ತಂಡದ ನಾಯಕತ್ವ ತೊರೆಯದಂತೆ ಕೊಹ್ಲಿಯನ್ನು ತಡೆಯಲಾಗಿದೆ ಎಂದು ಗಂಗೂಲಿ ಹೇಳಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮಾತನ್ನು ಕೊಹ್ಲಿ ಸ್ಪಷ್ಟವಾಗಿ ನಿರಾಕರಿಸಿದ್ದರು. ಕೊಹ್ಲಿಯ ಈ ಹೇಳಿಕೆಯ ನಂತರ ಅಲ್ಲೋಲ ಕಲ್ಲೋಲ ಸಂಭವಿಸಿದೆ. ಅಂದಿನಿಂದ ಕೊಹ್ಲಿ ಯಾವುದೇ ಪತ್ರಿಕಾಗೋಷ್ಠಿ ನಡೆಸಿಲ್ಲ. ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮುನ್ನಾ ದಿನವೂ ಮತ್ತು ಎರಡನೇ ಪಂದ್ಯದ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿಲ್ಲ. ಹೆಚ್ಚಿನ ನಾಯಕರು ಪಂದ್ಯದ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲು ಬರುತ್ತಾರೆ. ಆದರೆ ಎರಡೂ ಸಂದರ್ಭಗಳಲ್ಲಿ, ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಮಾಧ್ಯಮಗಳ ಎದುರು ಕೊಹ್ಲಿ ಯಾವಾಗ ಎದುರಾಗುತ್ತಾರೆ ಎಂದು ರಾಹುಲ್ ಈಗ ಹೇಳಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ಸೋಮವಾರ ಆರಂಭವಾಗಲಿರುವ ಎರಡನೇ ಟೆಸ್ಟ್‌ಗೆ ಮುನ್ನ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕೊಹ್ಲಿ ಪತ್ರಿಕಾಗೋಷ್ಠಿಗೆ ಏಕೆ ಹಾಜರಾಗುತ್ತಿಲ್ಲ ಎಂದು ರಾಹುಲ್‌ಗೆ ಪ್ರಶ್ನಿಸಲಾಯಿತು. ಇದಕ್ಕೆ ಉತ್ತರಿಸಿದ ರಾಹುಲ್, “ಅದೇನಿಲ್ಲ… ನಾನು ಅದನ್ನು ನಿರ್ಧರಿಸುವುದಿಲ್ಲ. ಈಗ ಅವರ 100 ನೇ ಟೆಸ್ಟ್ ನಡೆಯಲಿದೆ, ಆಗ ವಿರಾಟ್ ಪತ್ರಿಕಾಗೋಷ್ಠಿಗೆ ಬರುತ್ತಾರೆ. ಆಗ ನೀವು ಅವರಿಗೆ ಪ್ರಶ್ನೆಗಳನ್ನು ಕೇಳಬಹುದು, ಅವರು ಪಂದ್ಯದ ಸಮಯದಲ್ಲಿ ಬ್ಯುಸಿಯಾಗಿರುತ್ತಾರೆ. ಹಾಗಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿಲ್ಲ. ಆದರೆ ಅವರ 100ನೇ ಟೆಸ್ಟ್ ಪಂದ್ಯದ್ದು ಅವರು ಖಂಡಿತವಾಗಿ ಮಾಧ್ಯಮಗಳ ಮುಂದೆ ಬರಲಿದ್ದಾರೆ ಎಂದರು.

100ನೇ ಟೆಸ್ಟ್ ಯಾವಾಗ ನಡೆಯಲಿದೆ? ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿಯೇ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 100 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಅವರು ಇಲ್ಲಿಯವರೆಗೆ 98 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಪಂದ್ಯ ಅವರ ವೃತ್ತಿಜೀವನದ 99 ನೇ ಟೆಸ್ಟ್ ಪಂದ್ಯವಾಗಿದೆ. ಇದಾದ ಬಳಿಕ ಈ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಕೇಪ್‌ಟೌನ್‌ನಲ್ಲಿ ನಡೆಯಲಿದೆ. ಈ ಪಂದ್ಯ ಕೊಹ್ಲಿ ವೃತ್ತಿ ಜೀವನದ 100ನೇ ಟೆಸ್ಟ್ ಪಂದ್ಯವಾಗಿದೆ. ನಾವು ಅವರ ಈವರೆಗಿನ ಅಂಕಿಅಂಶಗಳನ್ನು ನೋಡಿದರೆ, ಕೊಹ್ಲಿ 98 ಪಂದ್ಯಗಳಲ್ಲಿ 7854 ರನ್ ಗಳಿಸಿದ್ದಾರೆ, ಇದರಲ್ಲಿ 27 ಶತಕಗಳು ಮತ್ತು ಅರ್ಧ ಶತಕಗಳು ಸೇರಿವೆ. ಆದರೆ, ಕೊಹ್ಲಿ ಕಳೆದ ಎರಡು ವರ್ಷಗಳಿಂದ ಟೆಸ್ಟ್​ನಲ್ಲಿ ಶತಕ ಬಾರಿಸಿರಲಿಲ್ಲ. ಹೊಸ ವರ್ಷದಲ್ಲಿ ಕೊಹ್ಲಿ ಬರಗಾಲಕ್ಕೆ ಕಡಿವಾಣ ಬೀಳಲಿದೆ. ಕೋಚ್ ರಾಹುಲ್ ದ್ರಾವಿಡ್ ಕೂಡ ಇದನ್ನು ನಂಬಿದ್ದಾರೆ. ಕೊಹ್ಲಿಯ ಶತಕವು ಬ್ಯಾಟ್‌ನೊಂದಿಗೆ ಹತ್ತಿರದಲ್ಲಿದೆ ಎಂದು ಅವರು ಹೇಳಿದರು.

ಉತ್ತಮ ಆರಂಭವನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂಬುದು ನನಗೆ ತಿಳಿದಿದೆ ಎಂದು ಕೋಚ್ ಹೇಳಿದರು. ಆದರೆ ಅವರ ಬ್ಯಾಟ್ ಅತಿ ಶೀಘ್ರದಲ್ಲಿ ದೊಡ್ಡ ಸ್ಕೋರ್ ಪಡೆಯಲಿದೆ ಎಂದು ನಾನು ಭಾವಿಸುತ್ತೇನೆ, ಮುಂದಿನ ಪಂದ್ಯದಲ್ಲಿ ಅದು ಆಗದಿರಬಹುದು ಆದರೆ ಅದು ಶೀಘ್ರದಲ್ಲೇ ಸಂಭವಿಸುತ್ತದೆ ಎಂದಿದ್ದಾರೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!