AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಕೊಹ್ಲಿ, ರಾಹುಲ್ ಅಲ್ಲ: ಈ ಬ್ಯಾಟರ್ ಅಬ್ಬರಿಸಿದರೆ ಭಾರತಕ್ಕೆ ಗೆಲುವು ಖಚಿತ ಎಂದ ದ್ರಾವಿಡ್

South Africa vs India: ಭಾರತ ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಆಟದ ಬಗ್ಗೆ ಮಾತನಾಡಿದ್ದಾರೆ.

Rahul Dravid: ಕೊಹ್ಲಿ, ರಾಹುಲ್ ಅಲ್ಲ: ಈ ಬ್ಯಾಟರ್ ಅಬ್ಬರಿಸಿದರೆ ಭಾರತಕ್ಕೆ ಗೆಲುವು ಖಚಿತ ಎಂದ ದ್ರಾವಿಡ್
Rahul Dravid IND vs SA
TV9 Web
| Updated By: Vinay Bhat|

Updated on: Jan 03, 2022 | 9:40 AM

Share

ಸೆಂಚುರಿಯನ್ ಪಿಚ್‍ನಲ್ಲಿ ನಡೆದ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 113 ರನ್‍ಗಳಿಂದ ಜಯ ಸಾಧಿಸುವ ಮೂಲಕ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವ ಸುವರ್ಣಾಕಾಶ ಭಾರತ ಸೃಷ್ಟಿಮಾಡಿಕೊಂಡಿದೆ. ವಿರಾಟ್ ಕೊಹ್ಲಿ (Virat Kohli) ತಮ್ಮ ಬ್ಯಾಟಿಂಗ್‍ನಿಂದ ರನ್‍ಗಳ ಸುರಿಮಳೆಯನ್ನು ಸುರಿಸಲು ಸತತ ವಿಫಲರಾಗುತ್ತಿದ್ದರೂ ತಮ್ಮ ನಾಯಕತ್ವದಿಂದ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಈಗ ಜೋಹಾನ್ಸ್‍ಬರ್ಗ್‍ನ ವೆಂಡರಸ್ ಪಿಚ್‍ನಲ್ಲಿ 2 ಟೆಸ್ಟ್ ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಮೊದಲ ಭಾರತ ಹಾಗೂ ಏಷ್ಯಾನ್ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಲು ಹೊರಟಿದ್ದಾರೆ. ಇಂದು ಎರಡನೇ ಕದನಕ್ಕೆ ಚಾಲನೆ ದೊರೆಯಲಿದೆ. ಇದಕ್ಕೂ ಟೀಮ್ ಇಂಡಿಯಾ (Team India) ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ದ್ವಿತೀಯ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಚೇತೇಶ್ವರ್ ಪೂಜಾರ ಆಟದ ಬಗ್ಗೆ ಮಾತನಾಡಿದ್ದಾರೆ. ಸದ್ಯ ಸತತ ಕಳಪೆ ಆಟದಿಂದ ಬಳಲುತ್ತಿರುವ ಪೂಜಾರ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಹೀಗಿರುವಾಗ ದ್ರಾವಿಡ್ ಅವರು ಪೂಜಾರ ಯಾವಾಗ ದೊಡ್ಡ ರನ್ ಕಲೆಹಾಕುತ್ತಾರೋ ಆಗ ಭಾರತಕ್ಕೆ ಗೆಲುವು ಖಚಿತ ಎಂದು ಹೇಳಿದ್ದಾರೆ.

“ಪೂಜಾರ ತನ್ನ ಕೈಲಾದಷ್ಟು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ರನ್ ಗಳಿಸುವ ದಾಹ ಅವರಲ್ಲಿದೆ. ಇದು ಚಿಂತಿಸುವ ವಿಚಾರವಲ್ಲ ಬದಲಾಗಿ ಇದು ಅವರು ಬ್ಯಾಟಿಂಗ್ ಮಾಡುವ ಕ್ರಮಾಂಕದ ಬಗ್ಗೆ. ಆದರೆ, ಅವರು ಯಾವಾಗ ದೊಡ್ಡ ಸ್ಕೋರ್ ಸ್ಕೋರ್ ಮಾಡ್ತಾರೋ ಆಗ ಭಾರತಕ್ಕೆ ಕಯ ಕಟ್ಟಿಟ್ಟ ಬುತ್ತಿ,” ಎಂದು ದ್ರಾವಿಡ್ ಹೇಳಿದ್ದಾರೆ.

ಇನ್ನು ಇದೇವೇಳೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆಯೂ ಮಾತನಾಡಿದ ದ್ರಾವಿಡ್, “ಕೊಹ್ಲಿಯ ಶತಕವು ಬ್ಯಾಟ್‌ನೊಂದಿಗೆ ಹತ್ತಿರದಲ್ಲಿದೆ. ಉತ್ತಮ ಆರಂಭವನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂಬುದು ನನಗೆ ತಿಳಿದಿದೆ. ಆದರೆ ಅವರ ಬ್ಯಾಟ್ ಅತಿ ಶೀಘ್ರದಲ್ಲಿ ದೊಡ್ಡ ಸ್ಕೋರ್ ಪಡೆಯಲಿದೆ ಎಂದು ನಾನು ಭಾವಿಸುತ್ತೇನೆ, ಮುಂದಿನ ಪಂದ್ಯದಲ್ಲಿ ಅದು ಆಗದಿರಬಹುದು ಆದರೆ ಅದು ಶೀಘ್ರದಲ್ಲೇ ಸಂಭವಿಸುತ್ತದೆ,” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಾಧ್ಯಮಗೋಷ್ಠಿಯಿಂದ ವಿರಾಟ್ ಕೊಹ್ಲಿ ಯಾಕೆ ದೂರ ಎಂಬುದರ ಗುಟ್ಟನ್ನು ದ್ರಾವಿಡ್ ಬಿಚ್ಚಿಟ್ಟಿದ್ದಾರೆ. “ಈ ಸರಣಿಯ ಮೂರನೇ ಪಂದ್ಯವು ವಿರಾಟ್‌ಗೆ 100ನೇ ಟೆಸ್ಟ್ ಪಂದ್ಯವಾಗಲಿದೆ. ಆಗ ಅವರು ಮಾಧ್ಯಮಗೋಷ್ಠಿಗೆ ಹಾಜರಾಗಲಿದ್ದಾರೆ. ಆಗ ಅವರ ನೂರನೇ ಪಂದ್ಯದ ಕುರಿತು ನೀವೆಲ್ಲರೂ ಪ್ರಶ್ನೆಗಳನ್ನು ಕೇಳಬಹುದು. ತಂಡಕ್ಕೆ ವಿರಾಟ್ ಯಾವಾಗಲೂ ಆಧಾರಸ್ತಂಭವೇ ಆಗಿದ್ದಾರೆ. ಅವರು ತಂಡದ ಆಟಗಾರರ ಸ್ಥೈರ್ಯವನ್ನು ಉನ್ನತ ಮಟ್ಟದಲ್ಲಿರುವಂತೆ ನೋಡಿಕೊಳ್ಳುತ್ತಾರೆ. ಎಲ್ಲರನ್ನೂ ಹುರಿದುಂಬಿಸುತ್ತ ತಂಡದಲ್ಲಿ ಶಕ್ತಿ ಪ್ರವಹಿಸುವಂತೆ ಮಾಡುತ್ತಾರೆ. ಅವರಿರುವುದರಿಂದ ನನ್ನ ಕೆಲಸ ಸುಲಭ,” ಎಂದು ದ್ರಾವಿಡ್ ಹೇಳಿದರು.

India vs South Africa: ಎರಡನೇ ಟೆಸ್ಟ್ ಆರಂಭಕ್ಕೆ ಇದೆಯೇ ಮಳೆಯ ಕಾಟ?: ಜೋಹನ್ಸ್​​ಬರ್ಗ್​​ ವಾತಾವರಣ ಹೇಗಿದೆ?

South Africa vs India: ಇಂದಿನಿಂದ ಭಾರತ-ಆಫ್ರಿಕಾ ಎರಡನೇ ಟೆಸ್ಟ್ ಆರಂಭ: ಐತಿಹಾಸಿಕ ಸಾಧನೆ ಮಾಡುತ್ತಾ ವಿರಾಟ್ ಕೊಹ್ಲಿ ಪಡೆ?

(Rahul Dravid said in the pre-match press conference When Pujara scores big India wins)

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?