AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಾವಲೋಕನ ಮಾಡಿಕೊಳ್ಳಿ.. ಸತತ 9 ಪಂದ್ಯಗಳಲ್ಲಿ ವಿಫಲ: ತನ್ನ ಶಿಷ್ಯನ ಆಟದಿಂದ ನಿರಾಸೆಗೊಂಡರ ಗುರು ದ್ರಾವಿಡ್?

ಏಕದಿನ ಪಂದ್ಯಗಳಲ್ಲಿ ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿತು ಮತ್ತು ಅವರು 46 ರನ್ ಗಳಿಸಿದರು. ಮೊದಲ ಟಿ 20 ಯಲ್ಲಿ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದರು ಆದರೆ ಕಳೆದ ಎರಡು ಪಂದ್ಯಗಳಲ್ಲಿ ಪಿಚ್ ಬ್ಯಾಟಿಂಗ್ ಮಾಡುವುದು ಕಷ್ಟಕರವಾಗಿತ್ತು.

ಆತ್ಮಾವಲೋಕನ ಮಾಡಿಕೊಳ್ಳಿ.. ಸತತ 9 ಪಂದ್ಯಗಳಲ್ಲಿ ವಿಫಲ: ತನ್ನ ಶಿಷ್ಯನ ಆಟದಿಂದ ನಿರಾಸೆಗೊಂಡರ ಗುರು ದ್ರಾವಿಡ್?
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on: Jul 30, 2021 | 5:41 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ 20 ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ತುಂಬಾ ಕಳಪೆಯಾಗಿತ್ತು. ಭಾರತದ ಬ್ಯಾಟ್ಸ್‌ಮನ್​ಗಳು ವಾನಿಂದು ಹಸರಂಗಾ ಸ್ಪಿನ್‌ ಮೋಡಿಗೆ ಸಿಲುಕಿಕೊಂಡರು. ಸೋಲಿನ ನಂತರ, ತಂಡದ ತರಬೇತುದಾರ ರಾಹುಲ್ ದ್ರಾವಿಡ್ ಅವರ ಶಿಷ್ಯರೊಬ್ಬರ ಬಗ್ಗೆ ತುಂಬಾ ನಿರಾಶೆಗೊಂಡಿದ್ದಾರೆ. ಈ ಸರಣಿಯಲ್ಲಿ ಆ ಆಟಗಾರನ ಸಾಧನೆ ಐಪಿಎಲ್‌ನಲ್ಲಿ ಬಲವಾಗಿ ಕಾಣುವಷ್ಟು ಪರಿಣಾಮಕಾರಿಯಾಗಿರಲಿಲ್ಲ. ಆದಾಗ್ಯೂ, ರಾಹುಲ್ ಸಂಜು ಸ್ಯಾಮ್ಸನ್ ಅವರನ್ನು ಸಮರ್ಥಿಸಿಕೊಂಡರು. ಜೊತೆಗೆ ಪಿಚ್​ನಲ್ಲಿ ಬ್ಯಾಟಿಂಗ್ ಮಾಡಲು ತುಂಬಾ ಕಷ್ಟಕರವಾಗಿತ್ತು ಎಂದಿದ್ದಾರೆ.

ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟ್ಸ್‌ಮನ್‌ ಆಗಿ ಹೊರಹೊಮ್ಮಲು ಸಾಕಷ್ಟು ಸಮಯವಿತ್ತು. ಈ ಹೊತ್ತಿಗೆ ಅವರಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಲು ಸಾಕಷ್ಟು ಅವಕಾಶ ಸಿಕ್ಕಿತು. ಆದರೆ ಅವರು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಸ್ಯಾಮ್ಸನ್ ಕಳೆದ ವರ್ಷದಿಂದ ಸತತ ಒಂಬತ್ತು ಟಿ 20 ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ. ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್ ತಂಡದ ಕೋಚ್ ಆಗಿದ್ದಾಗ ಸಂಜು ಸ್ಯಾಮ್ಸನ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದರು.

ಬ್ಯಾಟಿಂಗ್ ಮಾಡಲು ಸುಲಭವಾದ ಪಿಚ್ ಅಲ್ಲ ಇದು ಬ್ಯಾಟಿಂಗ್ ಮಾಡಲು ಸುಲಭವಾದ ಪಿಚ್ ಅಲ್ಲ. ಏಕದಿನ ಪಂದ್ಯಗಳಲ್ಲಿ ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿತು ಮತ್ತು ಅವರು 46 ರನ್ ಗಳಿಸಿದರು. ಮೊದಲ ಟಿ 20 ಯಲ್ಲಿ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದರು ಆದರೆ ಕಳೆದ ಎರಡು ಪಂದ್ಯಗಳಲ್ಲಿ ಪಿಚ್ ಬ್ಯಾಟಿಂಗ್ ಮಾಡುವುದು ಕಷ್ಟಕರವಾಗಿತ್ತು. ಹೌದು, ನೀವು ಸರಣಿಯನ್ನು ನೋಡಿದರೆ, ನಾವು ಸ್ವಲ್ಪ ನಿರಾಶೆಗೊಳ್ಳುತ್ತೇವೆ. ಏಕದಿನ ಸರಣಿಯ ಒಂದು ಪಂದ್ಯದಲ್ಲಿ ಸ್ಯಾಮ್ಸನ್ 46 ರನ್ ಗಳಿಸಿದ್ದರು, ಆದರೆ ಶ್ರೀಲಂಕಾ ವಿರುದ್ಧದ ಮೂರು ಟಿ 20 ಪಂದ್ಯಗಳಲ್ಲಿ ಕೇವಲ 34 ರನ್ ಗಳಿಸಿದರು.

ಬ್ಯಾಟ್ಸ್‌ಮನ್‌ಗಳ ಪ್ರದರ್ಶನದಿಂದ ಕೋಚ್ ನಿರಾಶೆಗೊಂಡಿಲ್ಲ ಶ್ರೀಲಂಕಾ ವಿರುದ್ಧ ಟಿ 20 ಐ ಸರಣಿ ಸೋಲಿನ ನಂತರ, ಭಾರತೀಯ ತಂಡದ ಕೋಚ್ ರಾಹುಲ್ ದ್ರಾವಿಡ್ ಹೊಸ ಪೀಳಿಗೆಯ ಯುವ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ತಿಳಿ ಹೇಳಿದ್ದಾರೆ. ಎಲ್ಲಾ ವಿಕೆಟ್​ಗಳು ಫ್ಲಾಟ್​ ಆಗಿರುವುದಿಲ್ಲ. ಕಡಿಮೆ ರನ್​ ಗಳಿಸುವ ಪಿಚ್‌ಗಳಲ್ಲಿ ಆಡುವ ಕೌಶಲ್ಯವನ್ನು ಕಲಿಯಬೇಕು. ಯುವ ಬ್ಯಾಟ್ಸ್‌ಮನ್‌ಗಳ ಪ್ರದರ್ಶನದಿಂದ ನಿರಾಶೆಗೊಂಡಿದ್ದೀರಾ ಎಂದು ಕೇಳಿದಕ್ಕೆ, ದ್ರಾವಿಡ್ ಇಲ್ಲ ಎಂದು ಉತ್ತರಿಸಿದರು.

ಅವರೆಲ್ಲರೂ ಯುವಕರು ಹಾಗಾಗಿ ನಾನು ನಿರಾಶೆಗೊಳ್ಳುವುದಿಲ್ಲ. ಅವರು ಅನುಭವದಿಂದ ಕಲಿಯುತ್ತಾರೆ. ಅಂತಹ ಪರಿಸ್ಥಿತಿಗಳನ್ನು ಎದುರಿಸುವುದರಿಂದ ಮತ್ತು ಬೌಲಿಂಗ್‌ನಿಂದ ಕಲಿಯುತ್ತಾರೆ. ಶ್ರೀಲಂಕಾ ತಂಡದ ಬೌಲಿಂಗ್ ತುಂಬಾ ಚೆನ್ನಾಗಿದೆ. ಪ್ರತಿ ಪಿಚ್ ಸಮತಟ್ಟಾಗುವುದಿಲ್ಲ ಎಂದು ಅವರು ಕಲಿಯಬೇಕಾಯಿತು. ಈ ರೀತಿಯ ಪಿಚ್‌ಗಳಲ್ಲಿ 130-140 ರನ್ ಗಳಿಸಲು ನಾವು ಕಲಿಯಬೇಕಾಗಿದೆ. ಇದು ಯುವ ಆಟಗಾರರಿಗೆ ಉತ್ತಮ ಪಾಠವಾಗಿದೆ. ಅವರು ತಮ್ಮ ಪ್ರದರ್ಶನವನ್ನು ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು ಉತ್ತಮ ತಂತ್ರವನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ