AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಇಂದಿನ ಪಂದ್ಯದಲ್ಲಿ ಕಾರ್ತಿಕ್ ಆಡ್ತಾರ? ಪ್ರಶ್ನೆಗೆ ಕೋಚ್ ದ್ರಾವಿಡ್ ಮಹತ್ವದ ಉತ್ತರ

India vs Bangladesh, T20 World Cup:; ದಿನೇಶ್ ಕಾರ್ತಿಕ್ ಇಂಜುರಿಗೆ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ತಂಡದ ಕೋಚ್ ರಾಹುಲ್ ದ್ರಾವಿಡ್ ಈ ಬಗ್ಗೆ ಮಾತನಾಡಿದ್ದು ಏನು ಹೇಳಿದರು ಕೇಳಿ.

Rahul Dravid: ಇಂದಿನ ಪಂದ್ಯದಲ್ಲಿ ಕಾರ್ತಿಕ್ ಆಡ್ತಾರ? ಪ್ರಶ್ನೆಗೆ ಕೋಚ್ ದ್ರಾವಿಡ್ ಮಹತ್ವದ ಉತ್ತರ
Rahul Dravid and Dinesh Karthik
TV9 Web
| Edited By: |

Updated on: Nov 02, 2022 | 8:31 AM

Share

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಇಂದು ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ತಂಡಗಳು ಮುಖಾಮುಖಿ ಆಗುತ್ತಿದ್ದು ಅಡಿಲೇಡ್​ ಓವಲ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಪಾಯಿಂಟ್ ಟೇಬಲ್​ನಲ್ಲಿ ಉಭಯ ತಂಡಗಳು ನಾಲ್ಕು ಅಂಕ ಪಡೆದು ರನ್​ರೇಟ್ ಆಧಾರದ ಮೇಲೆ ಭಾರತ ದ್ವಿತೀಯ ಸ್ಥಾನದಲ್ಲಿದ್ದರೆ, ಬಾಂಗ್ಲಾ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಸೆಮಿ ಫೈನಲ್​​ಗೆ ಪ್ರವೇಶ ಪಡೆಯಲು ಎರಡೂ ತಂಡಕ್ಕೆ ಈ ಪಂದ್ಯ ಮಹತ್ವದ್ದಾಗಿದೆ. ಇದರ ನಡುವೆ ರೋಹಿತ್ (Rohit Sharma) ಪಡೆಗೆ ಇಂಜುರಿ ಸಮಸ್ಯೆ ಕೂಡ ಕಾಡುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮಧ್ಯೆ ದಿನೇಶ್ ಕಾರ್ತಿಕ್ (Dinesh Karthik) ಕೀಪಿಂಗ್ ಮಾಡುವಾಗ ಬೆನ್ನು ನೋವು ಕಾಣಿಸಿಕೊಂಡ ಪರಿಣಾಮ ಅರ್ಧದಲ್ಲೇ ಪೆವಿಲಿಯನ್​ಗೆ ತೆರಳಿದರು. ಇಂದಿನ ಪಂದ್ಯಕ್ಕೆ ಇವರ ಲಭ್ಯತೆ ಬಗ್ಗೆ ಅನುಮಾನವಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಫೀಲ್ಡಿಂಗ್ ಮಾಡುವಾಗ 16ನೇ ಓವರ್​​ ವೇಳೆ ದೇಹದ ಹಿಂಭಾಗ ಜೋರಾಗಿ ನೋವು ಕಾಣಿಸಿಕೊಂಡಿದೆ. ಈ ಸಂದರ್ಭ ಕಾರ್ತಿಕ್​ಗೆ ಕೀಪಿಂಗ್ ಕೂಡ ಮಾಡಲಾಗಿಲ್ಲ. ಹೀಗಾಗಿ ಮೈದಾನ ತೊರೆದು ಇವರ ಬದಲು ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದರು. ಆದರೆ, ಕಾರ್ತಿಕ್ ಇಂಜುರಿಗೆ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ತಂಡದ ಕೋಚ್ ರಾಹುಲ್ ದ್ರಾವಿಡ್ ಈ ಬಗ್ಗೆ ಮಾತನಾಡಿದ್ದು ಏನು ಹೇಳಿದರು ಕೇಳಿ.

”ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬೌನ್ಸರ್ ಚೆಂಡನ್ನು ಹಿಡಿಯಲು ಹೋಗಿ ದಿನೇಶ್ ಕಾರ್ತಿಕ್ ಬೆನ್ನು ನೋವಿಗೆ ಗುರಿಯಾಗಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಈಗ ಗುಣಮುಖರಾಗುತ್ತಿದ್ದು ಚೆನ್ನಾಗಿದ್ದಾರೆ. ಅಭ್ಯಾಸದ ವೇಳೆಯೂ ದಿನೇಶ್ ಕಾರ್ತಿಕ್ ವರ್ಕೌಟ್ ಮಾಡಿದ್ದಾರೆ. ಸದ್ಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಇರುವ ಕಾರ್ತಿಕ್ ಆಡುವ ಬಗ್ಗೆ ಸಕರಾತ್ಮಕವಾಗಿದ್ದು ಬುಧವಾರ ಬೆಳಗ್ಗೆ ಲಭ್ಯತೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ,” ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
IND vs BAN: ಭಾರತಕ್ಕೆ ಇಂದು ಬಾಂಗ್ಲಾದೇಶ ಸವಾಲು: ರೋಹಿತ್ ಪಡೆಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ
Image
ENG vs NZ: 152 ಕಿ.ಮೀ ವೇಗದ ಎಸೆತವನ್ನು ಅಷ್ಟೇ ವೇಗವಾಗಿ ಸಿಕ್ಸರ್​ಗಟ್ಟಿದ ಕಿವೀಸ್ ಬ್ಯಾಟರ್..! ವಿಡಿಯೋ
Image
IND vs BAN: ಭಾರತ- ಬಾಂಗ್ಲಾ ಪಂದ್ಯಕ್ಕೆ ಮಳೆ ಕಾಟ ಖಚಿತ! ಮ್ಯಾಚ್ ರದ್ದಾದರೆ ಉಭಯ ತಂಡಗಳಿಗೂ ಸಂಕಷ್ಟ
Image
ENG vs NZ: ಕಿವೀಸ್ ಕಿವಿ ಹಿಂಡಿದ ಆಂಗ್ಲರು; ಕಾಂಗರೂಗಳು ಕೊನೆಯ ಪಂದ್ಯ ಗೆದ್ದರೂ ಸೇಮಿಸ್​ಗೇರುವುದು ಕಷ್ಟ..!

ಇದೇವೇಳೆ ಕೆ.ಎಲ್ ರಾಹುಲ್ ಕಳಪೆ ಆಟದಿಂದ ಅವರನ್ನು ಪ್ಲೇಯಿಂಗ್ ಇಲವೆನ್‌ನಿಂದ ಕೈ ಬಿಡಬೇಕು ಎಂದು ಕೇಳಿಬರುತ್ತಿರುವ ಮಾತಿಗೆ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದಾರೆ. ”ಕೆ.ಎಲ್‌ ರಾಹುಲ್ ಒಬ್ಬ ಅದ್ಭುತ ಆಟಗಾರ, ಆತ ಬಲಿಷ್ಠವಾಗಿ ಕಂಬ್ಯಾಕ್ ಮಾಡುತ್ತಾನೆ ಎಂದು ನಮಗೆ ನಂಬಿಕೆಯಿದೆ. ಈ ಪಿಚ್‌ಗಳು ವಿಶ್ವದ ಯಾವುದೇ ಬ್ಯಾಟರ್‌ಗಳಿಗೆ ಸವಾಲನ್ನು ಒಡ್ಡುತ್ತವೆ. ಯಾರು ಓಪನಿಂಗ್ ಮಾಡಬೇಕು ಎಂಬುದರ ಕುರಿತು ನನಗೆ ಹಾಗೂ ರೋಹಿತ್‌ಗೆ ಯಾವುದೇ ಅನುಮಾನವಿಲ್ಲ. ಕೆ.ಎಲ್ ರಾಹುಲ್ ಓಪನಿಂಗ್ ಮಾಡಿದ್ರೆ ಎಷ್ಟು ಪರಿಣಾಮ ಇರುತ್ತದೆ ಎಂದು ತಿಳಿದಿದೆ,” ಎಂಬುದು ದ್ರಾವಿಡ್ ಮಾತು.

ನಾವು ವಿಶ್ವಕಪ್ ಗೆಲ್ಲಲು ಬಂದಿಲ್ಲ ಎಂದ ಶಕಿಬ್:

ಬಾಂಗ್ಲಾದೇಶ ತಂಡದ ನಾಯಕ ಶಕಿಬ್ ಅಲ್ ಹಸನ್ ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ”ಟಿ20 ವಿಶ್ವಕಪ್‌ ಗೆಲ್ಲಲು ನಾವು ಇಲ್ಲಿಗೆ ಬಂದಿಲ್ಲ, ಆದರೆ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲು ಬಂದಿದ್ದಾರೆ. ನಾವು ಭಾರತ ತಂಡವನ್ನು ಸೋಲಿಸಿದರೆ ನಿಜಕ್ಕೂ ಒಂದು ಸಾಧನೆ. ಪ್ರತಿಯೊಂದು ಪಂದ್ಯವೂ ನಮಗೆ ಮುಖ್ಯವಾಗಿದೆ. ನಾವು ಅದೇ ವಿಧಾನದೊಂದಿಗೆ ಆಡಲು ಬಯಸುತ್ತೇವೆ. ಯಾವುದೇ ವಿರೋಧದ ಮೇಲೆ ನಾವು ಗಮನ ನೀಡುವುದಿಲ್ಲ. ನಾವು ನಮ್ಮ ಯೋಜನೆಗಳಿಗೆ ಬದ್ಧರಾಗಿ ಆಡಲು ಬಯಸುತ್ತೇವೆ,” ಎಂದು ಶಕಿಬ್ ಹೇಳಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ