AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ

Rahul Dravid Son Anvay Dravid:  ರಾಹುಲ್ ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದಾರೆ. ಇದೀಗ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ನಾಯಕನಾಗಿ ಎಂಬುದು ವಿಶೇಷ.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ
Rahul Dravid - Anvay Dravid
ಝಾಹಿರ್ ಯೂಸುಫ್
|

Updated on:Oct 07, 2025 | 9:36 AM

Share

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾನುವಾರವಷ್ಟೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿ ಪಡೆದಿದ್ದ ಅನ್ವಯ್​ಗೆ ಇದೀಗ ನಾಯಕತ್ವ ಒಲಿದಿದೆ.

ಅಕ್ಟೋಬರ್ 9 ರಿಂದ 17 ರವರೆಗೆ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ವಿನೂ ಮಂಕಡ್ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದ ನಾಯಕರಾಗಿ ಅನ್ವಯ್ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ. 

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಿಯೂ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಶಾಂತ ಸ್ವಭಾವದಿಂದ ಗಮನ ಸೆಳೆದಿರುವ ಅನ್ವಯ್ ವಿನೂ ಮಂಕಡ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೆ, ಕೆಲ ವರ್ಷಗಳ ಕಾಲ ಅವರನ್ನೇ ನಾಯಕನ್ನಾಗಿ ಮುಂದುವರೆಸುವ ಸಾಧ್ಯತೆಯಿದೆ. ಅದರಲ್ಲೂ ಅಂಡರ್-19 ತಂಡದಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರು ರಣಜಿ ತಂಡಕ್ಕೆ ಆಯ್ಕೆಯಾಗಬಹುದು.

ಹೀಗಾಗಿ ಮುಂಬರುವ ಅಂಡರ್-19 ಟೂರ್ನಿಗಳು ಅನ್ವಯ್ ದ್ರಾವಿಡ್ ಅವರ ಕೆರಿಯರ್​ನಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎನ್ನಬಹುದು.

ಅನ್ವಯ್ ದ್ರಾವಿಡ್​ಗೆ ಕೆಎಸ್​ಸಿಎ ಪ್ರಶಸ್ತಿ:

ಬಾರಿಯ ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಕರ್ನಾಟಕ ಅಂಡರ್-16 ತಂಡದ ಪರ ಕಣಕ್ಕಿಳಿದಿದ್ದ ಅನ್ವಯ್ ಎಂಟು ಇನಿಂಗ್ಸ್ಗಳಿಂದ ಒಟ್ಟು 459 ರನ್ ಕಲೆಹಾಕಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ ಎರಡು ಭರ್ಜರಿ ಶತಕಗಳು ಮೂಡಿ ಬಂದಿವೆ. ಇದರ ನಡುವೆ 48 ಸಿಕ್ಸ್ ಹಾಗೂ ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 91.80 ಸರಾಸರಿಯಲ್ಲಿ ರನ್​ಗಳಿಸಿ ಈ ಬಾರಿಯ ವಿಜಯ ಮರ್ಚೆಂಟ್ ಟೂರ್ನಿಯಲ್ಲಿ ಕರ್ನಾಟಕ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಭರ್ಜರಿ ಪ್ರದರ್ಶನ ಫಲವಾಗಿ ಕರ್ನಾಟಕದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅಂದಹಾಗೆ ಅನ್ವಯ್ ದ್ರಾವಿಡ್ ಈ ಪ್ರಶಸ್ತಿ ಪಡೆದಿರುವುದು ಇದೇ ಮೊದಲೇನಲ್ಲ. 2024 ರಲ್ಲಿ ನಡೆದ ವಿಜಯ್ ಮರ್ಚೆಂಟ್ ಟೂರ್ನಿಯಲ್ಲಿ ಒಟ್ಟು 357 ರನ್​ಗಳಿಸಿ ಕಳೆದ ವರ್ಷವೇ ಈ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಮತ್ತೊಮ್ಮೆ ಕರ್ನಾಟಕದ ಕಿರಿಯ ಬ್ಯಾಟರ್ ಅವಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧದ ಸರಣಿಗೆ 2 ತಂಡಗಳನ್ನು ಪ್ರಕಟಿಸಿದ ಆಸ್ಟ್ರೇಲಿಯಾ

ಹೀಗೆ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಅನ್ವಯ್ ದ್ರಾವಿಡ್ ಅವರನ್ನು ಇದೀಗ ಕರ್ನಾಟಕ ಅಂಡರ್-19 ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ವಿನೂ ಮಂಕಡ್ ಟೂರ್ನಿಗೆ ಕರ್ನಾಟಕ ತಂಡ ಈ ಕೆಳಗಿನಂತಿದೆ…

ಕರ್ನಾಟಕ ಅಂಡರ್-19 ತಂಡ : ಅನ್ವಯ್ ದ್ರಾವಿಡ್ (ನಾಯಕ, ವಿಕೆಟ್ ಕೀಪರ್ ), ನಿತೀಶ್ ಆರ್ಯ, ಆದರ್ಶ್ ಡಿ ಅರಸ್ , ಎಸ್ ಮಣಿಕಾಂತ್ (ಉಪನಾಯಕ), ಪ್ರಣೀತ್ ಶೆಟ್ಟಿ , ವಾಸವ್ ವೆಂಕಟೇಶ್ , ಅಕ್ಷತ್ ಪ್ರಭಾಕರ್, ಸಿ ವೈಭವ್, ಕುಲದೀಪ್ ಸಿಂಗ್ ಪುರೋಹಿತ್, ರತನ್ ಬಿಆರ್ , ವೈಭವ್ ಶರ್ಮಾ, ಕೆಎ ತೇಜಸ್ , ಅಥರ್ವ್ ಮಾಳವಿಯಾ, ಸನ್ನಿ ಕಾಂಚಿ, ರೆಹಾನ್ ಮೊಹಮ್ಮದ್ (ವಿಕೆಟ್ ಕೀಪರ್).

Published On - 9:35 am, Tue, 7 October 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ