AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ

Rahul Dravid Son Anvay Dravid:  ರಾಹುಲ್ ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದಾರೆ. ಇದೀಗ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ನಾಯಕನಾಗಿ ಎಂಬುದು ವಿಶೇಷ.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ
Rahul Dravid - Anvay Dravid
ಝಾಹಿರ್ ಯೂಸುಫ್
|

Updated on:Oct 07, 2025 | 9:36 AM

Share

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾನುವಾರವಷ್ಟೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿ ಪಡೆದಿದ್ದ ಅನ್ವಯ್​ಗೆ ಇದೀಗ ನಾಯಕತ್ವ ಒಲಿದಿದೆ.

ಅಕ್ಟೋಬರ್ 9 ರಿಂದ 17 ರವರೆಗೆ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ವಿನೂ ಮಂಕಡ್ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದ ನಾಯಕರಾಗಿ ಅನ್ವಯ್ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ. 

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಿಯೂ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಶಾಂತ ಸ್ವಭಾವದಿಂದ ಗಮನ ಸೆಳೆದಿರುವ ಅನ್ವಯ್ ವಿನೂ ಮಂಕಡ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೆ, ಕೆಲ ವರ್ಷಗಳ ಕಾಲ ಅವರನ್ನೇ ನಾಯಕನ್ನಾಗಿ ಮುಂದುವರೆಸುವ ಸಾಧ್ಯತೆಯಿದೆ. ಅದರಲ್ಲೂ ಅಂಡರ್-19 ತಂಡದಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರು ರಣಜಿ ತಂಡಕ್ಕೆ ಆಯ್ಕೆಯಾಗಬಹುದು.

ಹೀಗಾಗಿ ಮುಂಬರುವ ಅಂಡರ್-19 ಟೂರ್ನಿಗಳು ಅನ್ವಯ್ ದ್ರಾವಿಡ್ ಅವರ ಕೆರಿಯರ್​ನಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎನ್ನಬಹುದು.

ಅನ್ವಯ್ ದ್ರಾವಿಡ್​ಗೆ ಕೆಎಸ್​ಸಿಎ ಪ್ರಶಸ್ತಿ:

ಬಾರಿಯ ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಕರ್ನಾಟಕ ಅಂಡರ್-16 ತಂಡದ ಪರ ಕಣಕ್ಕಿಳಿದಿದ್ದ ಅನ್ವಯ್ ಎಂಟು ಇನಿಂಗ್ಸ್ಗಳಿಂದ ಒಟ್ಟು 459 ರನ್ ಕಲೆಹಾಕಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ ಎರಡು ಭರ್ಜರಿ ಶತಕಗಳು ಮೂಡಿ ಬಂದಿವೆ. ಇದರ ನಡುವೆ 48 ಸಿಕ್ಸ್ ಹಾಗೂ ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 91.80 ಸರಾಸರಿಯಲ್ಲಿ ರನ್​ಗಳಿಸಿ ಈ ಬಾರಿಯ ವಿಜಯ ಮರ್ಚೆಂಟ್ ಟೂರ್ನಿಯಲ್ಲಿ ಕರ್ನಾಟಕ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಭರ್ಜರಿ ಪ್ರದರ್ಶನ ಫಲವಾಗಿ ಕರ್ನಾಟಕದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅಂದಹಾಗೆ ಅನ್ವಯ್ ದ್ರಾವಿಡ್ ಈ ಪ್ರಶಸ್ತಿ ಪಡೆದಿರುವುದು ಇದೇ ಮೊದಲೇನಲ್ಲ. 2024 ರಲ್ಲಿ ನಡೆದ ವಿಜಯ್ ಮರ್ಚೆಂಟ್ ಟೂರ್ನಿಯಲ್ಲಿ ಒಟ್ಟು 357 ರನ್​ಗಳಿಸಿ ಕಳೆದ ವರ್ಷವೇ ಈ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಮತ್ತೊಮ್ಮೆ ಕರ್ನಾಟಕದ ಕಿರಿಯ ಬ್ಯಾಟರ್ ಅವಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧದ ಸರಣಿಗೆ 2 ತಂಡಗಳನ್ನು ಪ್ರಕಟಿಸಿದ ಆಸ್ಟ್ರೇಲಿಯಾ

ಹೀಗೆ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಅನ್ವಯ್ ದ್ರಾವಿಡ್ ಅವರನ್ನು ಇದೀಗ ಕರ್ನಾಟಕ ಅಂಡರ್-19 ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ವಿನೂ ಮಂಕಡ್ ಟೂರ್ನಿಗೆ ಕರ್ನಾಟಕ ತಂಡ ಈ ಕೆಳಗಿನಂತಿದೆ…

ಕರ್ನಾಟಕ ಅಂಡರ್-19 ತಂಡ : ಅನ್ವಯ್ ದ್ರಾವಿಡ್ (ನಾಯಕ, ವಿಕೆಟ್ ಕೀಪರ್ ), ನಿತೀಶ್ ಆರ್ಯ, ಆದರ್ಶ್ ಡಿ ಅರಸ್ , ಎಸ್ ಮಣಿಕಾಂತ್ (ಉಪನಾಯಕ), ಪ್ರಣೀತ್ ಶೆಟ್ಟಿ , ವಾಸವ್ ವೆಂಕಟೇಶ್ , ಅಕ್ಷತ್ ಪ್ರಭಾಕರ್, ಸಿ ವೈಭವ್, ಕುಲದೀಪ್ ಸಿಂಗ್ ಪುರೋಹಿತ್, ರತನ್ ಬಿಆರ್ , ವೈಭವ್ ಶರ್ಮಾ, ಕೆಎ ತೇಜಸ್ , ಅಥರ್ವ್ ಮಾಳವಿಯಾ, ಸನ್ನಿ ಕಾಂಚಿ, ರೆಹಾನ್ ಮೊಹಮ್ಮದ್ (ವಿಕೆಟ್ ಕೀಪರ್).

Published On - 9:35 am, Tue, 7 October 25

Follow Us
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ