AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ

Rahul Dravid Son Anvay Dravid:  ರಾಹುಲ್ ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದಾರೆ. ಇದೀಗ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ನಾಯಕನಾಗಿ ಎಂಬುದು ವಿಶೇಷ.

ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ
Rahul Dravid - Anvay Dravid
ಝಾಹಿರ್ ಯೂಸುಫ್
|

Updated on:Oct 07, 2025 | 9:36 AM

Share

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾನುವಾರವಷ್ಟೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿ ಪಡೆದಿದ್ದ ಅನ್ವಯ್​ಗೆ ಇದೀಗ ನಾಯಕತ್ವ ಒಲಿದಿದೆ.

ಅಕ್ಟೋಬರ್ 9 ರಿಂದ 17 ರವರೆಗೆ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ವಿನೂ ಮಂಕಡ್ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದ ನಾಯಕರಾಗಿ ಅನ್ವಯ್ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ. 

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಿಯೂ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಶಾಂತ ಸ್ವಭಾವದಿಂದ ಗಮನ ಸೆಳೆದಿರುವ ಅನ್ವಯ್ ವಿನೂ ಮಂಕಡ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೆ, ಕೆಲ ವರ್ಷಗಳ ಕಾಲ ಅವರನ್ನೇ ನಾಯಕನ್ನಾಗಿ ಮುಂದುವರೆಸುವ ಸಾಧ್ಯತೆಯಿದೆ. ಅದರಲ್ಲೂ ಅಂಡರ್-19 ತಂಡದಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರು ರಣಜಿ ತಂಡಕ್ಕೆ ಆಯ್ಕೆಯಾಗಬಹುದು.

ಹೀಗಾಗಿ ಮುಂಬರುವ ಅಂಡರ್-19 ಟೂರ್ನಿಗಳು ಅನ್ವಯ್ ದ್ರಾವಿಡ್ ಅವರ ಕೆರಿಯರ್​ನಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎನ್ನಬಹುದು.

ಅನ್ವಯ್ ದ್ರಾವಿಡ್​ಗೆ ಕೆಎಸ್​ಸಿಎ ಪ್ರಶಸ್ತಿ:

ಬಾರಿಯ ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಕರ್ನಾಟಕ ಅಂಡರ್-16 ತಂಡದ ಪರ ಕಣಕ್ಕಿಳಿದಿದ್ದ ಅನ್ವಯ್ ಎಂಟು ಇನಿಂಗ್ಸ್ಗಳಿಂದ ಒಟ್ಟು 459 ರನ್ ಕಲೆಹಾಕಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ ಎರಡು ಭರ್ಜರಿ ಶತಕಗಳು ಮೂಡಿ ಬಂದಿವೆ. ಇದರ ನಡುವೆ 48 ಸಿಕ್ಸ್ ಹಾಗೂ ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 91.80 ಸರಾಸರಿಯಲ್ಲಿ ರನ್​ಗಳಿಸಿ ಈ ಬಾರಿಯ ವಿಜಯ ಮರ್ಚೆಂಟ್ ಟೂರ್ನಿಯಲ್ಲಿ ಕರ್ನಾಟಕ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಭರ್ಜರಿ ಪ್ರದರ್ಶನ ಫಲವಾಗಿ ಕರ್ನಾಟಕದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅಂದಹಾಗೆ ಅನ್ವಯ್ ದ್ರಾವಿಡ್ ಈ ಪ್ರಶಸ್ತಿ ಪಡೆದಿರುವುದು ಇದೇ ಮೊದಲೇನಲ್ಲ. 2024 ರಲ್ಲಿ ನಡೆದ ವಿಜಯ್ ಮರ್ಚೆಂಟ್ ಟೂರ್ನಿಯಲ್ಲಿ ಒಟ್ಟು 357 ರನ್​ಗಳಿಸಿ ಕಳೆದ ವರ್ಷವೇ ಈ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಮತ್ತೊಮ್ಮೆ ಕರ್ನಾಟಕದ ಕಿರಿಯ ಬ್ಯಾಟರ್ ಅವಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧದ ಸರಣಿಗೆ 2 ತಂಡಗಳನ್ನು ಪ್ರಕಟಿಸಿದ ಆಸ್ಟ್ರೇಲಿಯಾ

ಹೀಗೆ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಅನ್ವಯ್ ದ್ರಾವಿಡ್ ಅವರನ್ನು ಇದೀಗ ಕರ್ನಾಟಕ ಅಂಡರ್-19 ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ವಿನೂ ಮಂಕಡ್ ಟೂರ್ನಿಗೆ ಕರ್ನಾಟಕ ತಂಡ ಈ ಕೆಳಗಿನಂತಿದೆ…

ಕರ್ನಾಟಕ ಅಂಡರ್-19 ತಂಡ : ಅನ್ವಯ್ ದ್ರಾವಿಡ್ (ನಾಯಕ, ವಿಕೆಟ್ ಕೀಪರ್ ), ನಿತೀಶ್ ಆರ್ಯ, ಆದರ್ಶ್ ಡಿ ಅರಸ್ , ಎಸ್ ಮಣಿಕಾಂತ್ (ಉಪನಾಯಕ), ಪ್ರಣೀತ್ ಶೆಟ್ಟಿ , ವಾಸವ್ ವೆಂಕಟೇಶ್ , ಅಕ್ಷತ್ ಪ್ರಭಾಕರ್, ಸಿ ವೈಭವ್, ಕುಲದೀಪ್ ಸಿಂಗ್ ಪುರೋಹಿತ್, ರತನ್ ಬಿಆರ್ , ವೈಭವ್ ಶರ್ಮಾ, ಕೆಎ ತೇಜಸ್ , ಅಥರ್ವ್ ಮಾಳವಿಯಾ, ಸನ್ನಿ ಕಾಂಚಿ, ರೆಹಾನ್ ಮೊಹಮ್ಮದ್ (ವಿಕೆಟ್ ಕೀಪರ್).

Published On - 9:35 am, Tue, 7 October 25

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್