AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟಿಷ್ ಹೈ ಕಮಿಷನರ್​ ಅಲೆಕ್ಸ್ ಎಲ್ಲಿಸ್​ಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್: ವಿಡಿಯೋ ವೈರಲ್

ಕ್ರಿಕೆಟ್​ ವಾಲ್​ ಎಂದೆ ಖ್ಯಾತಿಯಾದ ರಾಹುಲ್​ ದ್ರಾವಿಡ್​ರನ್ನು ಭೇಟಿ ಮಾಡಿರುವ ಬ್ರಿಟಿಷ್​ ರಾಯಭಾರಿ ರಾಹುಲ್​ರಿಂದ ಕನ್ನಡ ಕಲಿಯಲು ಪ್ರಯತ್ನ ಪಟ್ಟಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.

ಬ್ರಿಟಿಷ್ ಹೈ ಕಮಿಷನರ್​ ಅಲೆಕ್ಸ್ ಎಲ್ಲಿಸ್​ಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್: ವಿಡಿಯೋ ವೈರಲ್
Rahul Dravid and Alex Ellis
TV9 Web
| Edited By: |

Updated on: Aug 09, 2021 | 11:10 AM

Share

ಇತ್ತೀಚೆಗೆ ಭಾರತದ ಬ್ರಿಟಿಷ್​ ರಾಯಭಾರಿ ಅಲೆಕ್ಸ್​​ ಎಲ್ಲಿಸ್ ಅವರು​ ಬೆಂಗಳೂರಿಗೆ ಬಂದು ಮೈಸೂರು ಮಸಾಲೆ ದೋಸೆ ಸಖತ್ತಾಗಿದೆ ಎಂದು ಕನ್ನಡದಲ್ಲಿ ಬರೆದುಕೊಂಡಿದ್ದರು. ಈ ವಿಷಯ ಭರ್ಜರಿ ವೈರಲ್ ಆಗಿತ್ತು. ಸದ್ಯ ಮತ್ತೆ ಬ್ರಿಟಿಷ್​ ರಾಯಭಾರಿ ಅಲೆಕ್ಸ್​​ ಎಲ್ಲಿಸ್​ ಸುದ್ದಿಯಲ್ಲಿದ್ದು, ಕ್ರಿಕೆಟ್​ ದಂತಹಂಥೆ ರಾಹುಲ್​ ದ್ರಾವಿಡ್​ರಿಂದ ಕನ್ನಡ ಪಾಠ ಕಲಿತಿದ್ದಾರೆ.

ಸಧ್ಯಕ್ಕೆ ದಕ್ಷಿಣ ಭಾರತದ ಪ್ರವಾಸದಲ್ಲಿರುವ ಅವರು, ಕನ್ನಡಿಗರ ಮನ ಗೆಲ್ಲುತ್ತಿದ್ದಾರೆ. ಪ್ರತಿಯೊಬ್ಬ ರಾಜತಾಂತ್ರಿಕ ಅಧಿಕಾರಿಗಳು ದೇಶದ ಪ್ರವಾಸ ಮಾಡುವುದು ಸಾಮಾನ್ಯ. ಆದರೆ ಎಲ್ಲಿಸ್ ಮಾತ್ರ ಬೇರೆಯವರಂತೆ ಕೇವಲ ಪ್ರವಾಸ ಮಾಡದೆ, ಕರ್ನಾಟಕದ  ಸಂಸ್ಕೃತಿ, ಆಹಾರ, ಭಾಷೆ ಇತ್ಯಾದಿಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕ್ರಿಕೆಟ್​ ವಾಲ್​ ಎಂದೆ ಖ್ಯಾತಿಯಾದ ರಾಹುಲ್​ ದ್ರಾವಿಡ್​ರನ್ನು ಭೇಟಿ ಮಾಡಿರುವ ಬ್ರಿಟಿಷ್​ ರಾಯಭಾರಿ ರಾಹುಲ್​ರಿಂದ ಕನ್ನಡ ಕಲಿಯಲು ಪ್ರಯತ್ನ ಪಟ್ಟಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಅವರು ಟ್ವಿಟ್ಟರ್​ನಲ್ಲಿ, ಇಂದು ನಾವು ಬೆಂಗಳೂರಿನಲ್ಲಿ ದಕ್ಷಿಣದಲ್ಲಿದ್ದೇವೆ. ರಾಹುಲ್ ದ್ರಾವಿಡ್​ಗಿಂತ ಬೇರೆ ಉತ್ತಮ ಕೋಚ್ ಬೇಕಾ. ಅವರು ನನಗೆ ಕನ್ನಡದಲ್ಲಿ ಹಲವಾರು ಪದಗಳನ್ನು ಕಲಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ರಾಹುಲ್ ದ್ರಾವಿಡ್ ಎಲ್ಲೆಸ್ ಅವರಿಗೆ “ಬೇಗ ಓಡು” ಅಂದರೆ ಕನ್ನಡದಲ್ಲಿ ವೇಗವಾಗಿ ಓಡಿ ಎಂಬುದನ್ನ ಕಲಿಸಿದ್ದಾರೆ. ಇದಕ್ಕೆ ಅವರು ಎಲ್ಲಿಸ್‌, ‘ಬೇಗ ಓಡಿ’ ಒಂದು ರನ್‌ ಎಂದು ನಗುವಿನ ಚಟಾಕಿ ಹಾರಿಸಿದರು.

ಎಲ್ಲಿಸ್ ಅವರು ಕರ್ನಾಟಕದ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಹ  ಭೇಟಿ ಮಾಡಿ  ಕರ್ನಾಟಕದ ಹೊಸ ಸಿಎಂ ಭೇಟಿ ಮಾಡಿದ  ಮೊದಲ ರಾಜತಾಂತ್ರಿಕ ಅಧಿಕಾರಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯರು ಅತೀ ಹೆಚ್ಚು ಪ್ರೀತಿಸುವ ಟೀಮ್ ಇಂಡಿಯಾ ಪ್ಲೇಯರ್ಸ್ ಇವರಂತೆ: ಈ ಪಟ್ಟಿಯಲ್ಲಿಲ್ಲ ಧೋನಿ, ಕೊಹ್ಲಿ

Tokyo Olympics: ಪದಕಕ್ಕೆ ಮುತ್ತಿಟ್ಟ ಭಾರತೀಯರಿಗೆ ಇಂದು ಸಂಜೆ ಪ್ರಧಾನಿ ಮೋದಿಯಿಂದ ಸನ್ಮಾನ

(Rahul Dravid teaches Kannada to British High Commissioner to India Alex Ellis in Bengaluru)

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ