AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!

Asia Cup 2022: ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ.

Asia Cup 2022: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!
Team India
TV9 Web
| Edited By: |

Updated on:Aug 23, 2022 | 2:50 PM

Share

ಏಷ್ಯಾಕಪ್ 2022 (Asia Cup 2022) ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ (Team India) ಆಘಾತ ಎದುರಾಗಿದೆ. ಮೊದಲ ಪಂದ್ಯಕ್ಕೆ ದಿನಗಳು ಮಾತ್ರ ಉಳಿದಿರುವಾಗ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಯುಎಇನಲ್ಲಿ ಆಗಸ್ಟ್ 27 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಇದೀಗ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸೋಂಕಿಗೆ ಒಳಗಾಗಿರುವ ಅವರು ಕ್ವಾರಂಟೈನ್​ನಲ್ಲಿ ಉಳಿಯಲ್ಲಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್​ ನೆಗೆಟಿವ್ ಬಂದರೆ ಮಾತ್ರ ಅವರು ದುಬೈಗೆ ತೆರಳಿದ್ದಾರೆ. ಅತ್ತ ಮುಂದಿನ ಭಾನುವಾರ ಭಾರತ-ಪಾಕಿಸ್ತಾನ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ಹೊರಗುಳಿಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಲಿದೆ.

ಈಗಾಗಲೇ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಇದೀಗ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ ದಿನಗಳ ಹಿಂದೆಯಷ್ಟೇ ಮುಕ್ತಾಯವಾಗಿರುವ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಹಾಗೂ ಐರ್ಲೆಂಡ್ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಲಕ್ಷ್ಮಣ್ ಕಾಣಿಸಿಕೊಂಡಿದ್ದರು. ಒಂದು ವೇಳೆ ಏಷ್ಯಾಕಪ್​ನಿಂದ ರಾಹುಲ್ ದ್ರಾವಿಡ್ ಹೊರಗುಳಿದರೆ ಲಕ್ಷ್ಮಣ್ ಭಾರತ ತಂಡದೊಂದಿಗೆ ಪ್ರಯಾಣಿಸಲಿದ್ದಾರೆ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

Published On - 10:54 am, Tue, 23 August 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!