AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​ಮನ್ ಗಿಲ್ ನಾಯಕನಾಗಲು ರಾಹುಲ್ ದ್ರಾವಿಡ್ ಕಾರಣ..!

India Test Squad For England Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಲೀಡ್ಸ್​ನಲ್ಲಿ ನಡದರೆ, ಎರಡನೇ ಪಂದ್ಯವು ಬರ್ಮಿಂಗ್​ಹ್ಯಾಮ್​​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯಕ್ಕೆ ಲಾರ್ಡ್ಸ್​ ಮೈದಾನವು ಆತಿಥ್ಯವಹಿಸಲಿದೆ. ಹಾಗೆಯೇ 4ನೇ ಮತ್ತು 5ನೇ ಪಂದ್ಯಗಳು ಮ್ಯಾಂಚೆಸ್ಟರ್​ ಹಾಗೂ ಲಂಡನ್​ನಲ್ಲಿ ನಡೆಯಲಿದೆ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ.

ಶುಭ್​ಮನ್ ಗಿಲ್ ನಾಯಕನಾಗಲು ರಾಹುಲ್ ದ್ರಾವಿಡ್ ಕಾರಣ..!
Shubman Gill - Rahul Dravid
ಝಾಹಿರ್ ಯೂಸುಫ್
|

Updated on: May 25, 2025 | 11:32 AM

Share

ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಗಿಲ್ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದು, ಈ ಮೂಲಕ ಟೀಮ್ ಇಂಡಿಯಾವನ್ನು ಟೆಸ್ಟ್​ನಲ್ಲಿ ಮುನ್ನಡೆಸಿದ 37ನೇ ಕ್ಯಾಪ್ಟನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್​ನಲ್ಲಿ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಇದಾಗ್ಯೂ ಗಿಲ್​ಗೆ ಪಟ್ಟ ಕಟ್ಟಲು ಮುಖ್ಯ ಕಾರಣ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಎಂದು ವರದಿಯಾಗಿದೆ.

ರಾಹುಲ್ ದ್ರಾವಿಡ್ ಅವರ ಸೂಚನೆ ಮೇರೆಗೆ ಶುಭ್​ಮನ್ ಗಿಲ್​ ಅವರಿಗೆ ಬಿಸಿಸಿಐ ನಾಯಕತ್ವವನ್ನು ನೀಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಆಯ್ಕೆ ಸಮಿತಿ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿತ್ತು. ಈ ವೇಳೆ ಆಯ್ಕೆ ಸಮಿತಿ ಸದಸ್ಯರು ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಂದ ಕೆಲ ಸಲಹೆಗಳನ್ನು ಪಡೆದಿದ್ದಾರೆ.

ಭಾರತ ತಂಡದ ಟೆಸ್ಟ್ ನಾಯಕತ್ವವನ್ನು ರಿಷಭ್ ಪಂತ್ ಅಥವಾ ಶುಭ್​ಮನ್ ಗಿಲ್​ಗೆ ನೀಡುವ ಬಗ್ಗೆ ಆಯ್ಕೆ ಸಮಿತಿಯಲ್ಲಿ ಚರ್ಚೆಗಳು ಮುಂದುವರೆದಿತ್ತು. ಈ ವೇಳೆ ರಾಹುಲ್ ದ್ರಾವಿಡ್ ಅವರ ಅಭಿಪ್ರಾಯವನ್ನು ಕೇಳಲಾಗಿದೆ. ಇತ್ತ ದ್ರಾವಿಡ್, ಶುಭ್​ಮನ್ ಗಿಲ್ ಅವರಲ್ಲಿನ ನಾಯಕತ್ವದ ಗುಣಗಳ ಬಗ್ಗೆ ವಿವರಿಸಿ ತಿಳಿಸಿದ್ದಾರೆ. ಹೀಗಾಗಿ ಅಂತಿಮವಾಗಿ ಶುಭ್​ಮನ್ ಗಿಲ್ ಅವರನ್ನು ಕ್ಯಾಪ್ಟನ್ ಮಾಡಲು ನಿರ್ಧರಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಲಾಗಿದೆ.

ರಾಹುಲ್ ದ್ರಾವಿಡ್ ಅವರಿಗೆ ಅಂಡರ್-19 ತಂಡದಿಂದಲೂ ಶುಭ್​ಮನ್ ಗಿಲ್ ಚಿರಪರಿಚಿತ. ದ್ರಾವಿಡ್ ಭಾರತ ಕಿರಿಯರ ತಂಡದ ಕೋಚ್ ಆಗಿದ್ದ ವೇಳೆ ಗಿಲ್ ನಾಯಕರಾಗಿದ್ದರು. ಹೀಗಾಗಿ ನಾಯಕನಾಗಿ ಗಿಲ್ ಅವರ ಸಾಮರ್ಥ್ಯದ ಬಗ್ಗೆ ಅವರಿಗೆ ಉತ್ತಮ ಅರಿವಿತ್ತು. ಇದೇ ಕಾರಣದಿಂದಾಗಿ ಶುಭ್​ಮನ್ ಗಿಲ್ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂದು ರಾಹುಲ್ ದ್ರಾವಿಡ್ ತಿಳಿಸಿದ್ದರು. ಹೀಗಾಗಿಯೇ ಯುವ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದೆವು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಶುಭ್​ಮನ್ ಗಿಲ್ ನಾಯಕತ್ವ:

ಶುಭ್​ಮನ್ ಗಿಲ್ ಈ ಹಿಂದೆ ಅಂಡರ್-19 ಭಾರತ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದರ ಜೊತೆಗೆ ರಣಜಿ ಕ್ರಿಕೆಟ್​ನಲ್ಲಿ ಪಂಜಾಬ್ ತಂಡದ ಕಪ್ತಾನನಾಗಿಯೂ ಕಣಕ್ಕಿಳಿದಿದ್ದರು. ಇದೀಗ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ: IPL 2025: ನಾಯಕನಾಗಿ ಕಣಕ್ಕಿಳಿಯದಿದ್ರು ರಜತ್ ಪಾಟಿದಾರ್​ಗೆ 24 ಲಕ್ಷ ರೂ. ದಂಡ

ಅಂದರೆ ಶುಭ್​ಮನ್ ಗಿಲ್​ಗೆ ನಾಯಕತ್ವದ ಅನುಭವ ಇದೆ. ಈ ಅನುಭವದೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್