AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​ಮನ್ ಗಿಲ್ ನಾಯಕನಾಗಲು ರಾಹುಲ್ ದ್ರಾವಿಡ್ ಕಾರಣ..!

India Test Squad For England Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಲೀಡ್ಸ್​ನಲ್ಲಿ ನಡದರೆ, ಎರಡನೇ ಪಂದ್ಯವು ಬರ್ಮಿಂಗ್​ಹ್ಯಾಮ್​​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯಕ್ಕೆ ಲಾರ್ಡ್ಸ್​ ಮೈದಾನವು ಆತಿಥ್ಯವಹಿಸಲಿದೆ. ಹಾಗೆಯೇ 4ನೇ ಮತ್ತು 5ನೇ ಪಂದ್ಯಗಳು ಮ್ಯಾಂಚೆಸ್ಟರ್​ ಹಾಗೂ ಲಂಡನ್​ನಲ್ಲಿ ನಡೆಯಲಿದೆ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ.

ಶುಭ್​ಮನ್ ಗಿಲ್ ನಾಯಕನಾಗಲು ರಾಹುಲ್ ದ್ರಾವಿಡ್ ಕಾರಣ..!
Shubman Gill - Rahul Dravid
ಝಾಹಿರ್ ಯೂಸುಫ್
|

Updated on: May 25, 2025 | 11:32 AM

Share

ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಗಿಲ್ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದು, ಈ ಮೂಲಕ ಟೀಮ್ ಇಂಡಿಯಾವನ್ನು ಟೆಸ್ಟ್​ನಲ್ಲಿ ಮುನ್ನಡೆಸಿದ 37ನೇ ಕ್ಯಾಪ್ಟನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್​ನಲ್ಲಿ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಇದಾಗ್ಯೂ ಗಿಲ್​ಗೆ ಪಟ್ಟ ಕಟ್ಟಲು ಮುಖ್ಯ ಕಾರಣ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಎಂದು ವರದಿಯಾಗಿದೆ.

ರಾಹುಲ್ ದ್ರಾವಿಡ್ ಅವರ ಸೂಚನೆ ಮೇರೆಗೆ ಶುಭ್​ಮನ್ ಗಿಲ್​ ಅವರಿಗೆ ಬಿಸಿಸಿಐ ನಾಯಕತ್ವವನ್ನು ನೀಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಆಯ್ಕೆ ಸಮಿತಿ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿತ್ತು. ಈ ವೇಳೆ ಆಯ್ಕೆ ಸಮಿತಿ ಸದಸ್ಯರು ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಂದ ಕೆಲ ಸಲಹೆಗಳನ್ನು ಪಡೆದಿದ್ದಾರೆ.

ಭಾರತ ತಂಡದ ಟೆಸ್ಟ್ ನಾಯಕತ್ವವನ್ನು ರಿಷಭ್ ಪಂತ್ ಅಥವಾ ಶುಭ್​ಮನ್ ಗಿಲ್​ಗೆ ನೀಡುವ ಬಗ್ಗೆ ಆಯ್ಕೆ ಸಮಿತಿಯಲ್ಲಿ ಚರ್ಚೆಗಳು ಮುಂದುವರೆದಿತ್ತು. ಈ ವೇಳೆ ರಾಹುಲ್ ದ್ರಾವಿಡ್ ಅವರ ಅಭಿಪ್ರಾಯವನ್ನು ಕೇಳಲಾಗಿದೆ. ಇತ್ತ ದ್ರಾವಿಡ್, ಶುಭ್​ಮನ್ ಗಿಲ್ ಅವರಲ್ಲಿನ ನಾಯಕತ್ವದ ಗುಣಗಳ ಬಗ್ಗೆ ವಿವರಿಸಿ ತಿಳಿಸಿದ್ದಾರೆ. ಹೀಗಾಗಿ ಅಂತಿಮವಾಗಿ ಶುಭ್​ಮನ್ ಗಿಲ್ ಅವರನ್ನು ಕ್ಯಾಪ್ಟನ್ ಮಾಡಲು ನಿರ್ಧರಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಲಾಗಿದೆ.

ರಾಹುಲ್ ದ್ರಾವಿಡ್ ಅವರಿಗೆ ಅಂಡರ್-19 ತಂಡದಿಂದಲೂ ಶುಭ್​ಮನ್ ಗಿಲ್ ಚಿರಪರಿಚಿತ. ದ್ರಾವಿಡ್ ಭಾರತ ಕಿರಿಯರ ತಂಡದ ಕೋಚ್ ಆಗಿದ್ದ ವೇಳೆ ಗಿಲ್ ನಾಯಕರಾಗಿದ್ದರು. ಹೀಗಾಗಿ ನಾಯಕನಾಗಿ ಗಿಲ್ ಅವರ ಸಾಮರ್ಥ್ಯದ ಬಗ್ಗೆ ಅವರಿಗೆ ಉತ್ತಮ ಅರಿವಿತ್ತು. ಇದೇ ಕಾರಣದಿಂದಾಗಿ ಶುಭ್​ಮನ್ ಗಿಲ್ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂದು ರಾಹುಲ್ ದ್ರಾವಿಡ್ ತಿಳಿಸಿದ್ದರು. ಹೀಗಾಗಿಯೇ ಯುವ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದೆವು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಶುಭ್​ಮನ್ ಗಿಲ್ ನಾಯಕತ್ವ:

ಶುಭ್​ಮನ್ ಗಿಲ್ ಈ ಹಿಂದೆ ಅಂಡರ್-19 ಭಾರತ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದರ ಜೊತೆಗೆ ರಣಜಿ ಕ್ರಿಕೆಟ್​ನಲ್ಲಿ ಪಂಜಾಬ್ ತಂಡದ ಕಪ್ತಾನನಾಗಿಯೂ ಕಣಕ್ಕಿಳಿದಿದ್ದರು. ಇದೀಗ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ: IPL 2025: ನಾಯಕನಾಗಿ ಕಣಕ್ಕಿಳಿಯದಿದ್ರು ರಜತ್ ಪಾಟಿದಾರ್​ಗೆ 24 ಲಕ್ಷ ರೂ. ದಂಡ

ಅಂದರೆ ಶುಭ್​ಮನ್ ಗಿಲ್​ಗೆ ನಾಯಕತ್ವದ ಅನುಭವ ಇದೆ. ಈ ಅನುಭವದೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.