Maharaja Trophy T20: ಕರ್ನಾಟಕ ಟಿ20 ಲೀಗ್​ಗೆ ಸಮಿತ್ ದ್ರಾವಿಡ್ ಎಂಟ್ರಿ

Maharaja Trophy T20: 2022 ರಿಂದ ಶುರುವಾದ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವು ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು 2023 ರಲ್ಲಿ ಜರುಗಿದ ದ್ವಿತೀಯ ಸೀಸನ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಯಶಸ್ವಿಯಾಗಿತ್ತು. ಇದೀಗ ಮೂರನೇ ಸೀಸನ್​ ಆಯೋಜನೆಗೆ ವೇದಿಕೆ ಸಿದ್ಧವಾಗಿದೆ.

Maharaja Trophy T20: ಕರ್ನಾಟಕ ಟಿ20 ಲೀಗ್​ಗೆ ಸಮಿತ್ ದ್ರಾವಿಡ್ ಎಂಟ್ರಿ
ಸಮಿತ್-ರಾಹುಲ್ ದ್ರಾವಿಡ್
Follow us
|

Updated on:Jul 27, 2024 | 8:20 AM

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಲೀಗ್​ಗೆ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಸಮಿತ್ ಅವರನ್ನು ಮೈಸೂರು ವಾರಿಯರ್ಸ್ ಫ್ರಾಂಚೈಸಿ ಖರೀದಿಸಿದೆ. ಆಲ್​ರೌಂಡರ್ ಆಗಿರುವ 18 ವರ್ಷದ ಸಮಿತ್ ದ್ರಾವಿಡ್ ಈ ಹಿಂದೆ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ 2023-24 ಕೂಚ್ ಬೆಹಾರ್ ಟ್ರೋಫಿ ಗೆದ್ದ ಕರ್ನಾಟಕ ಕಿರಿಯರ ತಂಡದ ಭಾಗವಾಗಿದ್ದರು.

ಇದೇ ಮೊದಲ ಬಾರಿಗೆ ಮಹಾರಾಜ ಟ್ರೋಫಿ ಟಿ20 ಲೀಗ್ ಹರಾಜಿಗೆ ಹೆಸರು ನೀಡಿದ್ದ ರಾಹುಲ್ ದ್ರಾವಿಡ್ ಪುತ್ರನನ್ನು ಮೈಸೂರು ವಾರಿಯರ್ಸ್ ಫ್ರಾಂಚೈಸಿಯು 50 ಸಾವಿರ ರೂ. ನೀಡಿ ಖರೀದಿಸಿದೆ. ಅದರಂತೆ ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಲೀಗ್​ನಲ್ಲಿ ಕರುಣ್ ನಾಯರ್ ಮುಂದಾಳತ್ವದ ಮೈಸೂರು ವಾರಿಯರ್ಸ್ ತಂಡವನ್ನು ಸಮಿತ್ ದ್ರಾವಿಡ್ ಪ್ರತಿನಿಧಿಸಲಿದ್ದಾರೆ.

ಮೈಸೂರು ವಾರಿಯರ್ಸ್ ತಂಡ: ಕರುಣ್ ನಾಯರ್ (ನಾಯಕ), ಕಾರ್ತಿಕ್ ಸಿಎ, ಮನೋಜ್ ಭಾಂಡಗೆ, ಕಾರ್ತಿಕ್ ಎಸ್ ಯು, ಜಗದೀಶ್ ಸುಚಿತ್, ಕೃಷ್ಣಪ್ಪ ಗೌತಮ್, ವಿದ್ಯಾಧರ್ ಪಾಟೀಲ್, ವೆಂಕಟೇಶ್ ಎಂ, ಹರ್ಷಿಲ್ ಧರ್ಮಾನಿ, ಗೌತಮ್ ಮಿಶ್ರಾ, ಧನುಷ್ ಗೌಡ, ಸಮಿತ್ ದ್ರಾವಿಡ್, ದೀಪಕ್ ದೇವಾಡಿಗ, ಸುಮಿತ್ ಕುಮಾರ್, ಸ್ಮಯನ್ ಶ್ರೀವಾಸ್ತವ, ಜಾಸ್ಪರ್ ಇಜೆ , ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸರ್ಫರಾಝ್ ಅಶ್ರಫ್.

ದುಬಾರಿ ಆಟಗಾರ ಯಾರು?

ಮಹಾರಾಜ ಟ್ರೋಫಿ ಟಿ20 ಲೀಗ್​ನ ಹರಾಜಿನಲ್ಲಿ ಈ ಬಾರಿ ದುಬಾರಿ ಮೊತ್ತಕ್ಕೆ ಬಿಡ್ ಆಗಿರುವುದು ವಿಕೆಟ್ ಕೀಪರ್ ಬ್ಯಾಟರ್ ಎಲ್​ಆರ್​ ಚೇತನ್. ಕಳೆದ ಸೀಸನ್​ನಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವನ್ನು ಪ್ರತಿನಿಧಿಸಿದ್ದ ಚೇತನ್ ಅವರನ್ನು ಈ ಬಾರಿ 8.2 ಲಕ್ಷ ರೂ. ನೀಡಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಖರೀದಿಸಿದೆ. ಹಾಗೆಯೇ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರನ್ನು 7.6 ಲಕ್ಷ ರೂ.ಗೆ ಮಂಗಳೂರು ಡ್ರಾಗನ್ಸ್ ಫ್ರಾಂಚೈಸಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಮಹಾರಾಜ ಟ್ರೋಫಿ ಯಾವಾಗ ಶುರು?

2024ರ ಮಹಾರಾಜ ಟ್ರೋಫಿಯ ಸೆಪ್ಟೆಂಬರ್ 15 ರಿಂದ ಶುರುವಾಗಲಿದ್ದು, ಅಕ್ಟೋಬರ್ 1 ರವರೆಗೆ ನಡೆಯಲಿದೆ. ಈ ಟೂರ್ನಿಯ ಎಲ್ಲಾ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ.

Published On - 8:19 am, Sat, 27 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್