ಭಾರತ ಅಂಡರ್ 19 ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ

India's U19 Squad: ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಿರಿಯರ ಬಳಗವನ್ನು ಹೆಸರಿಸಲಾಗಿದೆ. ಈ ತಂಡಗಳಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿದ್ದಾರೆ.

ಭಾರತ ಅಂಡರ್ 19 ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ
Samit Dravid
Follow us
| Updated By: ಝಾಹಿರ್ ಯೂಸುಫ್

Updated on: Aug 31, 2024 | 11:01 AM

ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಭಾರತ ಅಂಡರ್ 19 ತಂಡವನ್ನು ಪ್ರಕಟಿಸಲಾಗಿದೆ. ಏಕದಿನ ಹಾಗೂ ಟೆಸ್ಟ್ (4 ದಿನದಾಟ) ಸರಣಿಗಾಗಿ ಆಯ್ಕೆ ಮಾಡಲಾದ ಈ ತಂಡಗಳಲ್ಲಿ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಸುಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ಸಮಿತ್ ಅವರಲ್ಲದೆ ಕರ್ನಾಟಕದ ಯುವ ಆಟಗಾರರಾದ ಕಾರ್ತಿಕೇಯ ಕೆಪಿ, ಸಮರ್ಥ್ ಎನ್ ಹಾಗೂ ಹಾರ್ದಿಕ್ ರಾಜ್ ಕೂಡ ಕಿರಿಯರ ಟೀಮ್​ ಇಂಡಿಯಾಗೆ ಆಯ್ಕೆಯಾಗಿರುವುದು ವಿಶೇಷ.

15 ಸದಸ್ಯರ ಏಕದಿನ ತಂಡದ ನಾಯಕರಾಗಿ ಉತ್ತರ ಪ್ರದೇಶದ ಯುವ ಆಟಗಾರ ಮೊಹಮ್ಮದ್ ಅಮಾನ್ ಆಯ್ಕೆಯಾಗಿದ್ದು, ಇನ್ನು ಉಪನಾಯಕನಾಗಿ ಗುಜರಾತ್​ನ ರುದ್ರ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಟೆಸ್ಟ್ ತಂಡದ ನಾಯಕತ್ವವನ್ನು ಮಧ್ಯ ಪ್ರದೇಶದ ಸೋಹಮ್ ಪಟವರ್ಧನ್​ಗೆ ನೀಡಲಾಗಿದ್ದು, ಉಪನಾಯಕನಾಗಿ ಪಂಜಾಬ್​ನ ವಿಹಾನ್ ಮಲ್ಹೋತ್ರಾ ಆಯ್ಕೆಯಾಗಿದ್ದಾರೆ. ಅದರಂತೆ ಭಾರತ ಅಂಡರ್ 19 ತಂಡಗಳು ಈ ಕೆಳಗಿನಂತಿವೆ…

ಭಾರತ ಅಂಡರ್ 19 ಏಕದಿನ ತಂಡ:

  • ರುದ್ರ ಪಟೇಲ್ (ಗುಜರಾತ್)
  • ಸಾಹಿಲ್ ಪರಾಖ್ (ಮಹಾರಾಷ್ಟ್ರ)
  • ಕಾರ್ತಿಕೇಯ ಕೆಪಿ (ಕರ್ನಾಟಕ)
  • ಮೊಹಮ್ಮದ್ ಅಮಾನ್- ನಾಯಕ (ಉತ್ತರ ಪ್ರದೇಶ)
  • ಕಿರಣ್ ಚೋರ್ಮಲೆ (ಮಹಾರಾಷ್ಟ್ರ)
  • ಅಭಿಗ್ಯಾನ್ ಕುಂದು- ವಿಕೆಟ್ ಕೀಪರ್ (ಮುಂಬೈ)
  • ಹರ್ವಂಶ್ ಸಿಂಗ್ ಪಂಗಾಲಿಯಾ- ವಿಕೆಟ್ ಕೀಪರ್ (ಸೌರಾಷ್ಟ್ರ)
  • ಸಮಿತ್ ದ್ರಾವಿಡ್ (ಕರ್ನಾಟಕ)
  • ಯುಧಾಜಿತ್ ಗುಹಾ (ಪಶ್ಚಿಮ ಬಂಗಾಳ)
  • ಸಮರ್ಥ ಎನ್ (ಕರ್ನಾಟಕ)
  • ನಿಖಿಲ್ ಕುಮಾರ್ (ಚಂಡೀಗಢ)
  • ಚೇತನ್ ಶರ್ಮಾ (ರಾಜಸ್ಥಾನ್)
  • ಹಾರ್ದಿಕ್ ರಾಜ್ (ಕರ್ನಾಟಕ)
  • ರೋಹಿತ್ ರಾಜಾವತ್ (ಮಧ್ಯ ಪ್ರದೇಶ)
  • ಮೊಹಮ್ಮದ್ ಇನಾನ್ (ಕೇರಳ)

ಇದನ್ನೂ ಓದಿ: Joe Root: ಜೋ ರೂಟ್ ಸೆಂಚುರಿಗೆ ಹಿಟ್​ಮ್ಯಾನ್ ದಾಖಲೆ ಬ್ರೇಕ್

ಭಾರತ ಅಂಡರ್ 19 ಟೆಸ್ಟ್ (4 ದಿನದಾಟ) ತಂಡ:

  • ವೈಭವ್ ಸೂರ್ಯವಂಶಿ (ಬಿಹಾರ)
  • ನಿತ್ಯ ಪಾಂಡ್ಯ (ಬಿಹಾರ)
  • ವಿಹಾನ್ ಮಲ್ಹೋತ್ರಾ (ಪಂಜಾಬ್)
  • ಸೋಹಮ್ ಪಟವರ್ಧನ್- ನಾಯಕ (ಮಧ್ಯ ಪ್ರದೇಶ)
  • ಕಾರ್ತಿಕೇಯ ಕೆಪಿ (ಕರ್ನಾಟಕ)
  • ಸಮಿತ್ ದ್ರಾವಿಡ್ (ಕರ್ನಾಟಕ)
  • ಅಭಿಗ್ಯಾನ್ ಕುಂದು- ವಿಕೆಟ್ ಕೋಪರ್ (ಮುಂಬೈ)
  • ಹರ್ವಂಶ್ ಸಿಂಗ್ ಪಂಗಾಲಿಯಾ- ವಿಕೆಟ್ ಕೀಪರ್ (ಸೌರಾಷ್ಟ್ರ)
  • ಚೇತನ್ ಶರ್ಮಾ (ರಾಜಸ್ಥಾನ್),
  • ಸಮರ್ಥ್ ಎನ್ (ಕರ್ನಾಟಕ)
  • ಆದಿತ್ಯ ರಾವತ್ (ಉತ್ತರಾಖಂಡ್)
  • ನಿಖಿಲ್ ಕುಮಾರ್ (ಚಂಡೀಗಢ್)
  • ಅನ್ಮೋಲ್ಜೀತ್ ಸಿಂಗ್ (ಪಂಜಾಬ್)
  • ಆದಿತ್ಯ ಸಿಂಗ್ (ಉತ್ತರ ಪ್ರದೇಶ)
  • ಮೊಹಮ್ಮದ್ ಇನಾನ್ (ಕೇರಳ).

ಭಾರತ-ಆಸ್ಟ್ರೇಲಿಯಾ ಅಂಡರ್-19 ಸರಣಿಯ ವೇಳಾಪಟ್ಟಿ

ದಿನಾಂಕ  ಪಂದ್ಯ ಸ್ಥಳ ಸಮಯ
ಸೆಪ್ಟೆಂಬರ್ 21 ಮೊದಲ ಏಕದಿನ ಪುದುಚೇರಿ 9:30 AM
ಸೆಪ್ಟೆಂಬರ್ 23 ಎರಡನೇ ಏಕದಿನ ಪುದುಚೇರಿ 9:30 AM
ಸೆಪ್ಟೆಂಬರ್ 26 ಮೂರನೇ ಏಕದಿನ ಪುದುಚೇರಿ 9:30 AM
ಸೆಪ್ಟೆಂಬರ್ 30- ಅಕ್ಟೋಬರ್ 3 ಮೊದಲ ಟೆಸ್ಟ್ (4 ದಿನ) ಚೆನ್ನೈ 9:30 AM
ಅಕ್ಟೋಬರ್ 3 – ಅಕ್ಟೋಬರ್ 10 ಎರಡನೇ ಟೆಸ್ಟ್ (4 ದಿನ) ಚೆನ್ನೈ 9:30 AM
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್