AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ U19 ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ಆಯ್ಕೆ..!

Rahul Dravid: ರಾಹುಲ್ ದ್ರಾವಿಡ್ ಅವರ ಇಬ್ಬರು ಮಕ್ಕಳು ತಂದೆಯ ಹಾದಿಯಲ್ಲಿ ಸಾಗಿದ್ದಾರೆ. ಹಿರಿಯ ಮಗ ಸಮಿತ್ ಹಾಗೂ ಕಿರಿಯ ಮಗ ಅನ್ವಯ್ ಕ್ರಿಕೆಟನ್ನು ಆಯ್ಕೆ ಮಾಡಿಕೊಂಡಿದ್ದು, ಇದೀಗ ತಂದೆಯಂತೆ ಕ್ರೀಡಾ ಅಂಗಳದಲ್ಲಿ ಸಾಧನೆ ಮಾಡಲು ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ.

ಕರ್ನಾಟಕ U19 ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ಆಯ್ಕೆ..!
Rahul Dravid-Samit Dravid
TV9 Web
| Edited By: |

Updated on:Sep 23, 2023 | 9:27 PM

Share

ಪ್ರಸ್ತುತ ಭಾರತ ತಂಡದ ಮುಖ್ಯ ಕೋಚ್ ಮತ್ತು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕರ್ನಾಟಕ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಮುಂಬರುವ ವಿನೂ ಮಂಕಡ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿರುವ ಕರ್ನಾಟಕದ 15 ಸದಸ್ಯರ ತಂಡದಲ್ಲಿ 17 ವರ್ಷದ ಸಮಿತ್ ಸ್ಥಾನ ಪಡೆದಿದ್ದಾರೆ.

ಇನ್ನು ಕರ್ನಾಟಕ ಅಂಡರ್ 19 ತಂಡವನ್ನು ಧೀರಜ್ ಗೌಡ ಮುನ್ನಡೆಸಲಿದ್ದು, ಧ್ರುವ್ ಪ್ರಭಾಕರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಹರ್ಷಿಲ್ ಧರ್ಮಾನಿ ಹಾಗೂ ಯುವರಾಜ್ ಅರೋರ ಆಯ್ಕೆಯಾಗಿದ್ದಾರೆ.

ತಂದೆಯ ಹಾದಿಯಲ್ಲಿ ಮಕ್ಕಳು:

ರಾಹುಲ್ ದ್ರಾವಿಡ್ ಅವರ ಇಬ್ಬರು ಮಕ್ಕಳು ತಂದೆಯ ಹಾದಿಯಲ್ಲಿ ಸಾಗಿದ್ದಾರೆ. ಹಿರಿಯ ಮಗ ಸಮಿತ್ ಹಾಗೂ ಕಿರಿಯ ಮಗ ಅನ್ವಯ್ ಕ್ರಿಕೆಟನ್ನು ಆಯ್ಕೆ ಮಾಡಿಕೊಂಡಿದ್ದು, ಇದೀಗ ತಂದೆಯಂತೆ ಕ್ರೀಡಾ ಅಂಗಳದಲ್ಲಿ ಸಾಧನೆ ಮಾಡಲು ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ.

ಈ ವರ್ಷ ಜನವರಿಯಲ್ಲಿ ನಡೆದ 14 ವರ್ಷದೊಳಗಿನವರ ಅಂತರ ವಲಯ ಟೂರ್ನಿಯಲ್ಲಿ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್ 14 ತಂಡವನ್ನು ಮುನ್ನಡೆಸಿದ್ದರು. ಇದಕ್ಕೂ ಮುನ್ನ 2019-20ರ ಅಂತರ ವಲಯ ಪಂದ್ಯಗಳಲ್ಲಿ ಅನ್ವಯ್ 2 ದ್ವಿಶತಕ ಬಾರಿಸಿ ಮಿಂಚಿದ್ದರು. ಇದೀಗ ಸಮಿತ್ ದ್ರಾವಿಡ್ ಕೂಡ ಅಂಡರ್ 19 ತಂಡದ ಮೂಲಕ ಮಿಂಚಲು ರೆಡಿಯಾಗಿದ್ದಾರೆ.

ವಿನೂ ಮಂಕಡ್ ಟ್ರೋಫಿ 2023:

ಈ ಬಾರಿಯ ವಿನೂ ಮಂಕಡ್ ಟೂರ್ನಿಯು ಅಕ್ಟೋಬರ್ 12 ರಿಂದ ಶುರುವಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ 19 ವರ್ಷದೊಳಗಿನವರ ಈ ಪಂದ್ಯಾವಳಿಯ ಫೈನಲ್ ಮ್ಯಾಚ್ ಅಕ್ಟೋಬರ್ 20 ರಂದು ನಡೆಯಲಿದೆ.

ಇದನ್ನೂ ಓದಿ: ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಕರ್ನಾಟಕ ಅಂಡರ್ 19 ತಂಡ: ಧೀರಜ್ ಜೆ. ಗೌಡ (ನಾಯಕ), ಧುರ್ವ್ ಪ್ರಭಾಕರ್ (ಉಪನಾಯಕ), ಕಾರ್ತಿಕ್ ಎಸ್​ಯು, ಶಿವಂ ಸಿಂಗ್, ಹರ್ಷಿಲ್ ಧರ್ಮಾನಿ (ವಿಕೆಟ್ ಕೀಪರ್), ಸಮಿತ್ ದ್ರಾವಿಡ್, ಯುವರಾಜ್ ಅರೋರಾ (ವಿಕೆಟ್ ಕೀಪರ್), ಹಾರ್ದಿಕ್ ರಾಜ್, ಆರವ್ ಮಹೇಶ್, ಆದಿತ್ಯ ನಾಯರ್, ಧನುಷ್ ಗೌಡ, ಶಿಖರ್ ಶೆಟ್ಟಿ, ಸಮರ್ಥ್ ನಾಗರಾಜ್, ಕಾರ್ತಿಕೇಯ ಕೆ.ಪಿ, ನಿಶ್ಚಿತ್ ಪೈ.

Published On - 9:23 pm, Sat, 23 September 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ