AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋದಲ್ಲೇ ಉಳಿದ ರಾಹುಲ್: ತಂಡದಿಂದ ಹೊರಬಿದ್ದ 8 ಆಟಗಾರರು ಯಾರ್ಯಾರು ಗೊತ್ತಾ?

IPL 2024: ನಾಯಕ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿಯನ್ನು ತೊರೆಯುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ಆ ಎಲ್ಲಾ ವದಂತಿಗಳಿಗೆ ಲಕ್ನೋ ಸೂಪರ್ ಜೈಂಟ್ಸ್ ಆಡಳಿತ ಮಂಡಳಿ ಎಳ್ಳು ನೀರು ಬಿಟ್ಟಿದೆ. ತಂಡದಿಂದ ಬಿಡುಗಡೆ ಮಾಡಿರುವ ಹಾಗೂ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲಕ್ನೋದಲ್ಲೇ ಉಳಿದ ರಾಹುಲ್: ತಂಡದಿಂದ ಹೊರಬಿದ್ದ 8 ಆಟಗಾರರು ಯಾರ್ಯಾರು ಗೊತ್ತಾ?
ಕೆಎಲ್ ರಾಹುಲ್
ಗಂಗಾಧರ​ ಬ. ಸಾಬೋಜಿ
|

Updated on:Nov 26, 2023 | 8:34 PM

Share

ಇಂಡಿಯನ್​ ಪ್ರೀಮಿಯರ್​ ಲೀಗ್ (IPL) 2024ರ ಮಿನಿ ಹರಾಜಿಗೂ ಎಲ್ಲಾ 10 ತಂಡಗಳು ತಮ್ಮ ತಮ್ಮ ತಂಡಗಳಲ್ಲಿ ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ವಾಸ್ತವವಾಗಿ ಈ ಹಿಂದೆ ನಾಯಕ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿಯನ್ನು ತೊರೆಯುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ಆ ಎಲ್ಲಾ ವದಂತಿಗಳಿಗೆ ಲಕ್ನೋ ಸೂಪರ್ ಜೈಂಟ್ಸ್ ಆಡಳಿತ ಮಂಡಳಿ ಎಳ್ಳು ನೀರು ಬಿಟ್ಟಿದೆ. ರಾಹುಲ್​ರನ್ನು ತಂಡದ ನಾಯಕನಾಗಿ ಮುಂದುವರೆಸಿರುವ ಫ್ರಾಂಚೈಸಿ, ತಂಡದಿಂದ ಬಿಡುಗಡೆ ಮಾಡಿರುವ ಹಾಗೂ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೆಎಲ್ ರಾಹುಲ್​ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಿಳ್ಳಲಿದ್ದಾರೆಂದು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು. ಆದರೆ ಫ್ರಾಂಚೈಸಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಾಗದದ ಮೇಲೆ ಕೆಎಲ್ ರಾಹುಲ್ ಅವರ ಹೆಸರನ್ನು ಬರೆದಿರುವ ಒಂದು ಪೋಸ್ಟ್​ನ್ನು ಹಂಚಿಕೊಂಡಿತ್ತು. ಆ ಮೂಲಕ ಸುಳ್ಳು ಸುದ್ದಿಯನ್ನು ತಳ್ಳಿಹಾಕಿದೆ.

ಸ್ಟಾರ್​​ ಬ್ಯಾಟರ್​ ದೇವದತ್​ ಪಡಿಕ್ಕಲ್​ ಅವರನ್ನು ಡಿಸೆಂಬರ್​ 19ರಂದು ನಡೆಯಲಿರುವ ಮಿನಿ ಹರಾಜಿಗೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಆ ಮೂಲಕ ಅವೇಶ್ ಖಾನ್ ಅವರನ್ನು ಕೈಬಿಟ್ಟಿದೆ.

ಲಕ್ನೋ ಸೂಪರ್​ ಜೈಂಟ್ಸ್

ಬಿಡುಗಡೆಯಾದ ಆಟಗಾರರು: ಜಯದೇವ್ ಉನದ್ಕಟ್, ಡೇನಿಯಲ್ ಸ್ಯಾಮ್ಸ್, ಮನನ್ ವೋಹ್ರಾ, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪಿತ್ ಗುಲೇರಿಯಾ, ಸೂರ್ಯಾಂಶ್ ಶೆಡ್ಗೆ, ಕರುಣ್ ನಾಯರ್.

ಇದನ್ನೂ ಓದಿ: IPL 2024: ಹರಾಜಿಗೂ ಮುನ್ನ ಎಲ್ಲಾ 10 ತಂಡಗಳು ಉಳಿಸಿಕೊಂಡ, ಬಿಡುಗಡೆಗೊಳಿಸಿದ ಆಟಗಾರರ ಪೂರ್ಣ ಪಟ್ಟಿ ಇಲ್ಲಿದೆ

ಉಳಿಸಿಕೊಂಡ ಆಟಗಾರರ ಪಟ್ಟಿ: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೆ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಪ್ರೇರಕ್ ಮಂಕಡ್, ಯುಧ್ವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯಿ, ಯಾಶ್ ಥಾಕಿ , ಅಮಿತ್ ಮಿಶ್ರಾ, ನವೀನ್-ಉಲ್-ಹಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:33 pm, Sun, 26 November 23

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ