AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿರಥ ಮಹಾರಥರಿಗೆ ಸಾಧ್ಯವಾಗಿಲ್ಲ: ರಜತ್ ಪಾಟಿದಾರ್ ಬೆಸ್ಟ್ ಕ್ಯಾಪ್ಟನ್ ಎನ್ನಲು ಇಷ್ಟೇ ಸಾಕು

IPL 2025 MI vs RCB: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ವರ್ಷಗಳ ಬಳಿಕ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆಪಾಕ್ ಮೈದಾನದಲ್ಲಿ ಆರ್​ಸಿಬಿ 17 ವರ್ಷಗಳ ವರ್ಷಗಳ ಗೆಲುವಿನ ರುಚಿ ನೋಡಿತ್ತು.

ಅತಿರಥ ಮಹಾರಥರಿಗೆ ಸಾಧ್ಯವಾಗಿಲ್ಲ: ರಜತ್ ಪಾಟಿದಾರ್ ಬೆಸ್ಟ್ ಕ್ಯಾಪ್ಟನ್ ಎನ್ನಲು ಇಷ್ಟೇ ಸಾಕು
Rajat Patidar
ಝಾಹಿರ್ ಯೂಸುಫ್
|

Updated on: Apr 08, 2025 | 2:04 PM

Share

IPL 2025: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ವಿರುದ್ಧ ಜಯ, ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಗೆಲುವು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ವಿಜಯ. ಈ ಮೂರು ಅಮೋಘ ಗೆಲುವುಗಳನ್ನು RCB ತಂಡದ ನಾಯಕ ರಜತ್ ಪಾಟಿದಾರ್ ಕೇವಲ 4 ಪಂದ್ಯಗಳಲ್ಲೇ ನೋಡಿದ್ದಾರೆ.

ವಿಶೇಷ ಎಂದರೆ ಇಂತಹದೊಂದು ಗೆಲುವುಗಳು ಐಪಿಎಲ್​ನಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ಬಹುತೇಕರ ಪಾಲಿಗೆ ಮರೀಚಿಕೆಯಾಗಿತ್ತು. ಅದರಲ್ಲೂ ಯಶಸ್ವಿ ನಾಯಕರು ಎನಿಸಿಕೊಂಡ ಕೆಲ ಕ್ಯಾಪ್ಟನ್​ಗಳು ಈ ಮೂರು ಸ್ಟೇಡಿಯಂನಲ್ಲಿ ಒಂದೇ ಸೀಸನ್​ನಲ್ಲಿ ಗೆಲುವಿನ ರುಚಿ ನೋಡಿರಲಿಲ್ಲ ಎಂಬುದೇ ಸತ್ಯ.

  • ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಯಕರಾಗಿ ಕಾಣಿಸಿಕೊಂಡ ಸೌರವ್ ಗಂಗೂಲಿ, ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ, ಕುಮಾರ್ ಸಂಗಾಕ್ಕರ, ಶ್ರೇಯಸ್ ಅಯ್ಯರ್, ಡೇನಿಯಲ್ ವೆಟ್ಟೋರಿ ಹಾಗೂ ದಿನೇಶ್ ಕಾರ್ತಿಕ್ ಎಂದಿಗೂ ಗೆಲುವಿನ ನಗೆ ಬೀರಲಿಲಿಲ್ಲ.
  • ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಡೇವಿಡ್ ವಾರ್ನರ್​, ಜಾರ್ಜ್​ ಬೈಲಿ, ರಾಹುಲ್ ದ್ರಾವಿಡ್, ಪ್ಯಾಟ್ ಕಮಿನ್ಸ್, ಫಾಫ್ ಡುಪ್ಲೆಸಿಸ್, ಝಹೀರ್ ಖಾನ್ ಹಾಗೂ ಕೆಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಿಳಿದ ತಂಡಗಳು ಕೆಕೆಆರ್ ತಂಡವನ್ನು ಒಮ್ಮೆಯೂ ಮಣಿಸಿಲ್ಲ.
  • ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಾಯಕರಾಗಿ ಕಾಣಿಸಿಕೊಂಡಿದ್ದ ಡೇವಿಡ್ ವಾರ್ನರ್, ರಿಷಭ್ ಪಂತ್, ಫಾಫ್ ಡುಪ್ಲೆಸಿಸ್, ದಿನೇಶ್ ಕಾರ್ತಿಕ್, ಆ್ಯಡಂ ಗಿಲ್‌ಕ್ರಿಸ್ಟ್, ರವಿಚಂದ್ರನ್ ಅಶ್ವಿನ್, ಪ್ಯಾಟ್ ಕಮ್ಮಿನ್ಸ್ ಒಮ್ಮೆಯೂ ಗೆಲುವಿನೊಂದಿಗೆ ಮರಳಿಲ್ಲ.

ಅಂದರೆ ಐಪಿಎಲ್​ನಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ಬಹುತೇಕ ಕ್ಯಾಪ್ಟನ್​ಗಳ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವುಗಳನ್ನು ರಜತ್ ಪಾಟಿದಾರ್ ಮೊದಲ 4 ಪಂದ್ಯಗಳಲ್ಲೇ ನೋಡಿದ್ದಾರೆ. ಅದು ಸಹ ಐಪಿಎಲ್​ನ 3 ಚಾಂಪಿಯನ್ಸ್ ತಂಡಗಳನ್ನು ಅವರದ್ದೇ ತವರು ಮೈದಾನದಲ್ಲಿ ಸೋಲಿಸುವ ಮೂಲಕ ಎಂಬುದು ವಿಶೇಷ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಈ ಗೆಲುವುಗಳೊಂದಿಗೆ ರಜತ್ ಪಾಟಿದಾರ್ ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ಅಧ್ಯಾಯ ಬರೆಯಲು ಹೊರಟ್ಟಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಕಡೆಯಿಂದ ಚೊಚ್ಚಲ ಟ್ರೋಫಿ ನಿರೀಕ್ಷಿಸಬಹುದು.

ಹ್ಯಾಟ್ರಿಕ್ ಸಾಧಕರು:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಒಂದೇ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳನ್ನು ತವರಿನಲ್ಲಿ ಸೋಲಿಸಿದ ಏಕೈಕ ನಾಯಕ ಡೇವಿಡ್ ಹಸ್ಸಿ.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

2012 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ತಂಡವನ್ನು ಮುನ್ನಡೆಸಿದ್ದ ಹಸ್ಸಿ ಈ ಮೂರು ಬಲಿಷ್ಠ ತಂಡಗಳನ್ನು ಅವರದ್ದೇ ತವರಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ್ದರು. ಇದೀಗ ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕನಾಗಿ ರಜತ್ ಪಾಟಿದಾರ್ ಹೊರಹೊಮ್ಮಿದ್ದಾರೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ