AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AUS A: ಆರ್​​ಸಿಬಿ ನಾಯಕ ರಜತ್ ಪಾಟಿದರ್​ಗೆ ನಾಯಕತ್ವ; ಏಕದಿನ ಸರಣಿಗೆ ಭಾರತ ತಂಡ ಪ್ರಕಟ

India A Squad Announced for Australia A ODI Series: ಭಾರತ ಕ್ರಿಕೆಟ್ ತಂಡವು ಏಷ್ಯಾಕಪ್​ನಲ್ಲಿ ಆಡುತ್ತಿರುವಾಗ, ಬಿಸಿಸಿಐ ಆಸ್ಟ್ರೇಲಿಯಾ ಎ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ಎ ತಂಡವನ್ನು ಆಯ್ಕೆ ಮಾಡಿದೆ. ರಜತ್ ಪಾಟಿದಾರ್ ಮೊದಲ ಪಂದ್ಯಕ್ಕೆ ನಾಯಕನಾಗಿ ಮತ್ತು ತಿಲಕ್ ವರ್ಮಾ ಉಳಿದ ಎರಡು ಪಂದ್ಯಗಳಿಗೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಪ್ರಭಾಸಿಮ್ರಾನ್ ಸಿಂಗ್, ರಿಯಾನ್ ಪರಾಗ್ ಮತ್ತು ಅಭಿಷೇಕ್ ಶರ್ಮಾ ಸೇರಿದಂತೆ ಹಲವು ಪ್ರತಿಭಾನ್ವಿತ ಆಟಗಾರರು ತಂಡದಲ್ಲಿದ್ದಾರೆ. ಈ ಸರಣಿಯು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 5, 2025 ರವರೆಗೆ ಕಾನ್ಪುರದಲ್ಲಿ ನಡೆಯಲಿದೆ.

IND A vs AUS A: ಆರ್​​ಸಿಬಿ ನಾಯಕ ರಜತ್ ಪಾಟಿದರ್​ಗೆ ನಾಯಕತ್ವ; ಏಕದಿನ ಸರಣಿಗೆ ಭಾರತ ತಂಡ ಪ್ರಕಟ
Rajat Patidar
ಪೃಥ್ವಿಶಂಕರ
|

Updated on:Sep 14, 2025 | 6:51 PM

Share

ಒಂದೆಡೆ ಟೀಂ ಇಂಡಿಯಾ ಏಷ್ಯಾಕಪ್​ನಲ್ಲಿ ಆಡುತ್ತಿದ್ದರೆ, ಮತ್ತೊಂದೆಡೆ ಬಿಸಿಸಿಐ (BCCI) ಹಿರಿಯ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ಎ ವಿರುದ್ಧದ (India A vs Australia A) ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಈ ಸರಣಿಯು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 5, 2025 ರವರೆಗೆ ಕಾನ್ಪುರದ ಐತಿಹಾಸಿಕ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸರಣಿ ಮೊದಲ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ವಾಸ್ತವವಾಗಿ ರಜತ್ ತಮ್ಮ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಚಾಂಪಿಯನ್ ಮಾಡಿದ್ದರು. ಇದೀಗ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿಯೂ ಕೇಂದ್ರ ತಂಡದ ನಾಯಕತ್ವವಹಿಸಿರುವ ರಜತ್ ತಂಡವನ್ನು ಚಾಂಪಿಯನ್​ ಪಟ್ಟದತ್ತ ಕೊಂಡೊಯ್ದಿದ್ದಾರೆ. ಹೀಗಾಗಿ ರಜತ್​ಗೆ ಭಾರತ ಎ ತಂಡದ ನಾಯಕತ್ವ ನೀಡಲು ಬಿಸಿಸಿಐ ತೀರ್ಮಾನಿಸಿದೆ.

ರಜತ್ ಪಾಟಿದಾರ್​ಗೆ ನಾಯಕತ್ವ

ಈ ಸರಣಿಯ ಆರಂಭಿಕ ಪಂದ್ಯಕ್ಕೆ ರಜತ್ ಪಾಟಿದಾರ್ ಅವರನ್ನು ನಾಯಕರನ್ನಾಗಿ ಘೋಷಿಸಲಾಗಿದೆ. ಉಳಿದಂತೆ ಸರಣಿಯ ಕೊನೆಯ 2 ಪಂದ್ಯಗಳಲ್ಲಿ ತಿಲಕ್ ವರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ವಾಸ್ತವವಾಗಿ, ಸರಣಿಯ ಮೊದಲ ಪಂದ್ಯದಲ್ಲಿ ತಿಲಕ್ ವರ್ಮಾ ತಂಡದ ಭಾಗವಾಗಿರುವುದಿಲ್ಲ. ಇದರಿಂದಾಗಿ ರಜತ್ ಪಾಟಿದಾರ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಅಭಿಷೇಕ್ ಶರ್ಮಾ, ಪ್ರಭ್ಸಿಮ್ರಾನ್ ಸಿಂಗ್ ಮತ್ತು ರಿಯಾನ್ ಪರಾಗ್ ಅವರಂತಹ ಸ್ಟಾರ್ ಆಟಗಾರರು ಸಹ ಈ ಸರಣಿಯ ಭಾಗವಾಗಲಿದ್ದಾರೆ.

ಭಾರತ ಎ ತಂಡ

ಮೊದಲ ಏಕದಿನ ಪಂದ್ಯಕ್ಕೆ ಭಾರತ ಎ ತಂಡ: ರಜತ್ ಪಾಟಿದಾರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್ನೀತ್ ಸಿಂಗ್, ಯುಧ್ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೊರೆಲ್, ಪ್ರಿಯಾಂಶ್ ಆರ್ಯ, ಸಿಮರ್ಜೀತ್ ಸಿಂಗ್.

ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಿಗೆ ಭಾರತ ಎ ತಂಡ: ತಿಲಕ್ ವರ್ಮಾ (ನಾಯಕ), ರಜತ್ ಪಾಟಿದಾರ್ (ಉಪನಾಯಕ), ಅಭಿಷೇಕ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಜ್, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್ನೀತ್ ಸಿಂಗ್, ಯುಧ್ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೊರೆಲ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Sun, 14 September 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?