AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajat Patidar: ಪಂದ್ಯ ಮುಗಿದ ಬಳಿಕ ಬೇಸರದ ಮಾತುಗಳನ್ನಾಡಿದ ರಜತ್ ಪಟಿದಾರ್: ಏನು ಹೇಳಿದ್ರು ಕೇಳಿ

Post-Match Presentation Ceremony, LSG vs RCB: ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಬೌಲರ್​ಗಳ ಬೆಂಡೆತ್ತಿ ಆಕರ್ಷಕ ಚೊಚ್ಚಲ ಶತಕ ಸಿಡಿಸಿದ ರಜತ್ ಪಟಿದಾರ್ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.ಪಂದ್ಯ ಮುಗಿದ ಬಳಿಕ ಮಾತನಾಡಿದ ರಜತ್ ಏನು ಹೇಳಿದರು ಕೇಳಿ.

Rajat Patidar: ಪಂದ್ಯ ಮುಗಿದ ಬಳಿಕ ಬೇಸರದ ಮಾತುಗಳನ್ನಾಡಿದ ರಜತ್ ಪಟಿದಾರ್: ಏನು ಹೇಳಿದ್ರು ಕೇಳಿ
Rajat Patidar post-match presentation, LSG vs RCB
TV9 Web
| Updated By: Vinay Bhat|

Updated on:May 26, 2022 | 9:21 AM

Share

ಐಪಿಎಲ್ ಇತಿಹಾಸದ ಎಲಿಮಿನೇಟರ್ ಪಂದ್ಯದಲ್ಲಿ ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಾ ಬಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಐಪಿಎಲ್ 2022 ರ (IPL 2022) ಮೊದಲ ಅಗ್ನಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದೆ. ಲಖನೌ ಸೂಪರ್ ಜೇಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ (LSG vs RCB) ಬೊಂಬಾಟ್ ಪ್ರದರ್ಶನ ನೀಡಿ 14 ರನ್​ಗಳಿಂದ ಜಯ ಸಾಧಿಸಿ ಕ್ವಾಲಿಫೈಯರ್-2 ಗೆ ಲಗ್ಗೆಯಿಟ್ಟಿದೆ. ಬೆಂಗಳೂರು ಈ ಪಂದ್ಯದಲ್ಲಿ ಗೆಲುವು ಸಾಧಿಸಲು ರಜತ್ ಪಟಿದಾರ್ (Rajat Patidar) ಎಂದರೆ ತಪ್ಪಾಗಲಾರದು. ಮೊದಲ ಓವರ್​ನಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಕಳೆದುಕೊಂಡಾಗ ಕ್ರೀಸ್​​ಗೆ ಬಂದ ಇವರು ಲಖನೌ ಬೌಲರ್​ಗಳ ಬೆಂಡೆತ್ತಿ ಆಕರ್ಷಕ ಚೊಚ್ಚಲ ಶತಕ ಸಿಡಿಸಿ ಅಬ್ಬರಿಸಿದರು. ಆರ್​ಸಿಬಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು. ಕೇವಲ 54 ಎಸೆತಗಳಲ್ಲಿ 12 ಫೋರ್ ಹಾಗೂ 7 ಅಮೋಘ ಸಿಕ್ಸರ್​ಗಳನ್ನು ಸಿಡಿಸಿ ಅಜೇಯ 112 ರನ್ ಗಳಿಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ರಜತ್ ಏನು ಹೇಳಿದರು ಕೇಳಿ.

ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ಮಾತನಾಡಿದ ಪಟಿದಾರ್ ಮಹತ್ವದ ಹೇಳಿಕೆ ನೀಡಿದರು. ಮೊದಲಿಗೆ ತನ್ನ ಆಟದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಇವರು, “ನಾನು ಬಾಲ್​ಗೆ ಟೈಮ್ ಮಾಡುವಾಗ ನನ್ನ ಗಮನ ಪೂರ್ತಿ ಅದರ ಮೇಲೆ ಮಾತ್ರ ಇರುತ್ತಿತ್ತು. ಪವರ್ ಪ್ಲೇಯ ಕೊನೆಯ ಓವರ್​​ ಅನ್ನು ಕ್ರುನಾಲ್ ಪಾಂಡ್ಯ ಬೌಲಿಂಗ್ ಮಾಡಿದಾಗ ನನ್ನ ಉದ್ದೇಶ ಸ್ಪಷ್ಟವಾಗಿತ್ತು. ಹಾಗೂ ಆತ್ಮವಿಶ್ವಾಸದಿಂದ ಇದ್ದೆ. ಈ ವಿಕೆಟ್ ಮಾತ್ರ ಅದ್ಭುತವಾಗಿತ್ತು. ಅದಕ್ಕಾಗಿ ನನಗೆ ಕೆಲ ಅತ್ಯುತ್ತಮ ಹೊಡೆತ ಸಿಡಿಸಲು ಕಾರಣವಾಯಿತು. ಡಾಟ್ ಬಾಲ್ ಅನ್ನು ಸರಿಯಾಗಿ ಎದುರಿಸುವ ಸಾಮರ್ಥ್ಯ ನನ್ನಲ್ಲಿರುವ ಕಾರಣ ನಾನು ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ,” ಎಂದು ಹೇಳಿದ್ದಾರೆ.

Rajat Patidar: ಪಟಿದಾರ್ ಶತಕವನ್ನು ತನ್ನ ಶತಕದಂತೆ ಸಂಭ್ರಮಿಸಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

ಇದನ್ನೂ ಓದಿ
Image
LSG vs RCB Match Report: ಆರ್​ಸಿಬಿ ಸಾಂಘಿಕ ಹೋರಾಟಕ್ಕೆ ಮಣಿದ ಲಕ್ನೋ; ಮುಂದಿನ ಎದುರಾಳಿ ರಾಜಸ್ಥಾನ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022 Eliminator: LSG vs RCB ಪಂದ್ಯಕ್ಕೆ ವರುಣನ ಅಡ್ಡಿ: ಹೀಗೆ ನಡೆಯಲಿದೆ ಮ್ಯಾಚ್
Image
LSG vs RCB IPL 2022 Eliminator Highlights: ರಜತ್ ಅಬ್ಬರದ ಶತಕ; 2ನೇ ಕ್ವಾಲಿಫೈಯರ್​ಗೆ ಆರ್​ಸಿಬಿ ಎಂಟ್ರಿ

ಐಪಿಎಲ್ 2021ರ ಬಳಿಕ ಏನಾಯಿತು ಎಂಬ ಬಗ್ಗೆ ಪಟಿದಾರ್ ಬೇಸರದ ಮಾತುಗಳನ್ನು ಆಡಿದರು. “ಐಪಿಎಲ್ 2021ರ ಬಳಿಕ ನಾನು ನನ್ನ ಕ್ಷಬ್​ನಲ್ಲಿ ಸತತವಾಗಿ ಕ್ರಿಕೆಟ್ ಆಡುತ್ತಿದ್ದೆ, ಅದರಲ್ಲೇ ಬ್ಯುಸಿ ಇರುತ್ತಿದ್ದೆ. 2021 ರ ಐಪಿಎಲ್ ನಂತರ ನನ್ನನ್ನು ಯಾರೂ ಆಯ್ಕೆ ಮಾಡಿಲ್ಲ. ಆದರೆ, ಅದು ನನ್ನ ಕೈಯಲ್ಲಿ ಕೂಡ ಇಲ್ಲ,” ಎಂದು ಹೇಳಿದ್ದಾರೆ. ಪಟಿದಾರ್ ಐಪಿಎಲ್ 2022ರ ಹರಾಜಿನಲ್ಲೂ ಸೇಲ್ ಆಗದೆ ಉಳಿದಿದ್ದರು. ಆದರೆ, ಟೂರ್ನಿ ಆರಂಭವಾದ ಬಳಿಕ ಲವಿತ್ ಸಿಸ್ನೋಡಿಯಾ ಗಾಯಾಕ್ಕೆ ತುತ್ತಾದ ಪರಿಣಾಮ ಇವರ ಬದಲಿಗೆ ಆರ್‌ಸಿಬಿ ತಂಡವನ್ನು ರಜತ್ ಸೇರಿಕೊಂಡರು. ಅಚಾನಕ್ ಆಗಿ ತಂಡ ಸೇರಿಕೊಂಡ ಇವರು ಈ ಮಟ್ಟಿಗೆ ಬ್ಯಾಟಿಂಗ್ ಆಡಿ ತಂಡದ ಗೆಲುವಿಗೆ ಮುಖ್ಯ ಕೊಡುಗೆ ನೀಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಇನ್ನು ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮತ್ತೊಬ್ಬ ಆಟಗಾರ ಹರ್ಷಲ್ ಪಟೇಲ್ ಮಾತನಾಡಿ, “ಇಂಜುರಿಗೆ ತುತ್ತಾಗಿದ್ದರೂ ನನ್ನ ಬೆರಳುಗಳು ಈಗ ಸರಿಯಾಗಿವೆ. 24 ಎಸೆತಗಳಲ್ಲಿ ಹಾಕಿದ್ದು ಸಂತಸ ನೀಡಿದೆ. ನಾನು ಬೌಲಿಂಗ್​ನಲ್ಲಿ ಇನ್ನೂ ಉತ್ತಮವಾಗಿ ಹೇಗೆ ಮಾಡಬಹುದು ಎಂಬ ಯೋಚನೆ ನನ್ನ ತಲೆಯಲ್ಲಿ ಓಡುತ್ತಲೇ ಇತ್ತು. ನಾನು ನನ್ನ ಬೌಲಿಂಗ್ ಬಗ್ಗೆ ಹಿಂದಿನ ದಿನದಲ್ಲಿ ಗಮನಿಸಿದ್ದೆ. ನನ್ನ ಹಾರ್ಡ್ ಲೆಂತ್ ಬಾಲ್ 7.5 ಪರ್ ಓವರ್​ಗೆ ಇರುತ್ತಿತ್ತು. ಸ್ಟಾಯಿನಿಸ್​ಗೆ ವೈಡ್ ಬಾಲ್ ಹಾಕಲು ನಿರ್ಧರಿಸಿದೆ. ಆದರೆ, ಅದು ಸರಿಯಾದ ರೀತಿಯಲ್ಲಿ ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ ಮೊದಲ ಎರಡು ಓವರ್​​​ನಲ್ಲಿ ನಾನು ಹೇಗೆ ಬೌಲಿಂಗ್ ಮಾಡಿದೆನೊ ಅದೇರೀತಿ ಮಾಡಲು ನಿರ್ಧರಿಸಿದೆ,” ಎಂದು ಹೇಳಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:21 am, Thu, 26 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?