ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ!

IPL 2026 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 168 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ!
Rajat Patidar

Updated on: May 11, 2026 | 7:55 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ 2 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಈ ಗೆಲುವಿಗೆ ನಾವು ಅರ್ಹರಲ್ಲ ಎಂದೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಆರ್​ಸಿಬಿ ನಾಯಕ, “ಇವತ್ತಿನ ಪಂದ್ಯ ಬಹಳ ರೋಚಕವಾಗಿತ್ತು. ತಂಡದ ಪರವಾಗಿ ಅದ್ಭುತವಾಗಿ ಆಡಿದ ಕೃಣಾಲ್ ಪಾಂಡ್ಯ ಅವರೇ ನಿಜವಾದ ಮ್ಯಾನ್ ಆಫ್ ದಿ ಮ್ಯಾಚ್. ತಂಡದ ಪ್ಲ್ಯಾನ್ ಪ್ರಕಾರ ಅವರಿಗೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಎಂದು ” ಎಂದು ರಜತ್ ಪಾಟಿದಾರ್ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಭೂವನೇಶ್ವರ್ ಕುಮಾರ್ ಅದ್ಭುತ ಬೌಲಿಂಗ್ ಮಾಡಿದ್ದರು. ಈ ಬಗ್ಗೆ ಮಾತನಾಡಿದ ರಜತ್,  “ಭುವಿ ಅವರ ಬೌಲಿಂಗ್ ನಿಯಂತ್ರಣ ನಂಬಲಸಾಧ್ಯ. ಪಿಚ್ ಎರಡು ರೀತಿಯಲ್ಲಿ ವರ್ತಿಸುತ್ತಿದ್ದರೂ ಅವರು ಚೆಂಡನ್ನು ಬಳಸಿದ ರೀತಿ ಅದ್ಭುತವಾಗಿತ್ತು. ಇಂತಹ ಪಿಚ್‌ನಲ್ಲಿ ಅವರನ್ನು ಎದುರಿಸುವುದು ಯಾವುದೇ ಬ್ಯಾಟರ್‌ಗೆ ಕಷ್ಟದ ಕೆಲಸ,” ಎಂದು ಮೆಚ್ಚುಗೆ ಸೂಚಿಸಿದರು.

 ಗೆಲುವಿಗೆ ನಾವು ಅರ್ಹವಲ್ಲ!

ಇನ್ನು ಈ ಪಂದ್ಯ ಗೆದ್ದರೂ ಸಹ ರಜತ್ ಪಾಟಿದಾರ್ ತಮ್ಮ ಬ್ಯಾಟರ್‌ಗಳ ಮೇಲೆ ತೀವ್ರ ಅಸಮಾಧಾನ ಹೊರಹಾಕಿದರು. “ಬೌಲರ್‌ಗಳು ಎದುರಾಳಿಗಳನ್ನು 166 ರನ್‌ಗಳಿಗೆ ಕಟ್ಟಿಹಾಕುವ ಮೂಲಕ ಅದ್ಭುತ ಕೆಲಸ ಮಾಡಿದ್ದರು. ನಮ್ಮಲ್ಲಿರುವಂತಹ ಪ್ರತಿಭಾವಂತ ಬ್ಯಾಟಿಂಗ್ ಪಡೆಯು ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಬೇಕಿತ್ತು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾವು ಗೆದ್ದಿರಬಹುದು. ಆದರೆ ಆಡಿದ ರೀತಿಗೆ ನಾವು ಈ ಗೆಲುವಿಗೆ ಅರ್ಹರಲ್ಲ. ಪರಿಸ್ಥಿತಿ ಯಾವುದೇ ಇರಲಿ, ಇಂತಹ ಮೊತ್ತವನ್ನು ನಾವು ಸುಲಭವಾಗಿ ಚೇಸ್ ಮಾಡಬೇಕಿತ್ತು,” ಎಂದರು.

ಇದನ್ನೂ ಓದಿ: RCB ಗೆಲುವಿನ ಬೆನ್ನಲ್ಲೇ ಐಪಿಎಲ್​​ನಿಂದ 2 ತಂಡಗಳು ಔಟ್!

ಅಂದರೆ ಅದ್ಭುತ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ ಸುಲಭ ಗುರಿಯನ್ನು ಕೊನೆಯ ಎಸೆತದಲ್ಲಿ ಚೇಸ್ ಮಾಡಿ ಗೆದ್ದಿರುವುದು ನಮ್ಮ ಬ್ಯಾಟಿಂಗ್ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹೀಗಾಗಿ ಈ ಪಂದ್ಯವನ್ನು ನಾವು ಗೆದ್ದರೂ, ನಾವು ಆಡಿದ ರೀತಿಗೆ ಈ ಗೆಲುವಿಗೆ ನಾವು ಅರ್ಹರಲ್ಲ ಎಂಬುದನ್ನು ರಜತ್ ಪಾಟಿದಾರ್ ಎಂದು ರಜತ್ ಪಾಟಿದಾರ್ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆಯಾಗಿ, ರಜತ್ ಪಾಟಿದಾರ್ ಅವರ ಈ ನೇರ ನುಡಿಗಳು ತಂಡದಲ್ಲಿನ ಆತ್ಮಾವಲೋಕನದ ಅಗತ್ಯತೆಯನ್ನು ಎತ್ತಿ ತೋರಿಸಿವೆ. ಗೆಲುವಿನ ಸಂಭ್ರಮದ ನಡುವೆಯೂ ತಪ್ಪುಗಳನ್ನು ತಿದ್ದಿಕೊಳ್ಳುವ ಅವರ ಈ ನಡೆ ಮುಂಬರುವ ಪಂದ್ಯಗಳಲ್ಲಿ ತಂಡಕ್ಕೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Published On - 7:55 am, Mon, 11 May 26

Follow Us