AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajat Patidar: ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ ರಜತ್ ಪಾಟಿದಾರ್

India A vs England Lions: ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಅಭಿಮನ್ಯು ಈಶ್ವರನ್ ಹಾಗೂ ರಜತ್ ಪಾಟಿದಾರ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 73 ರನ್ ಪೇರಿಸಿ ಅಭಿಮನ್ಯು ಈಶ್ವರನ್ (32) ಔಟಾದರು. ಮತ್ತೊಂದೆಡೆ ಅದ್ಭುತ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ ಇಂಗ್ಲೆಂಡ್ ಲಯನ್ಸ್ ಬೌಲರ್​ಗಳ ಬೆಂಡೆತ್ತಿದರು.

Rajat Patidar: ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ ರಜತ್ ಪಾಟಿದಾರ್
Rajat Patidar
TV9 Web
| Edited By: |

Updated on: Jan 13, 2024 | 11:57 AM

Share

ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್​ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಬ್ಯಾಟರ್ ರಜತ್ ಪಾಟಿದಾರ್ (Rajat Patidar) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಎರಡು ದಿನಗಳ ಈ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಲಯನ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಯನ್ಸ್ ಪರ ಡಾನ್ ಮೌಸ್ಲಿ (60) ಅರ್ಧಶತಕ ಬಾರಿಸಿದರು.

ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ಲಯನ್ಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 233 ರನ್​ಗಳಿಸಿ ಆಲೌಟ್ ಆಯಿತು. ಭಾರತ ಎ ಪರ ಮಾನವ್ ಸುತಾರ್ 3 ವಿಕೆಟ್ ಕಬಳಿಸಿದರೆ, ಆಕಾಶ್ ದೀಪ್ 2 ವಿಕೆಟ್ ಪಡೆದರು. ಇನ್ನು ವಿಧ್ವತ್ ಕಾವೇರಪ್ಪ, ತುಷಾರ್ ದೇಶಪಾಂಡೆ, ಪುಲ್ಕಿತ್ ನಾರಂಗ್ ತಲಾ ಒಂದೊಂದು ವಿಕೆಟ್ ಉರುಳಿಸಿದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಅಭಿಮನ್ಯು ಈಶ್ವರನ್ ಹಾಗೂ ರಜತ್ ಪಾಟಿದಾರ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 73 ರನ್ ಪೇರಿಸಿ ಅಭಿಮನ್ಯು ಈಶ್ವರನ್ (32) ಔಟಾದರು. ಮತ್ತೊಂದೆಡೆ ಅದ್ಭುತ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ ಇಂಗ್ಲೆಂಡ್ ಲಯನ್ಸ್ ಬೌಲರ್​ಗಳ ಬೆಂಡೆತ್ತಿದರು. ಅಲ್ಲದೆ 131 ಎಸೆತಗಳಲ್ಲಿ ಪೂರೈಸಿದರು. ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಮುಂದಾದ ರಜತ್ ಪಾಟಿದಾರ್ 141 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 111 ರನ್ ಬಾರಿಸಿ ಔಟಾದರು.

ರಜತ್ ಪಾಟಿದಾರ್ ಅವರ ಈ ಭರ್ಜರಿ ಶತಕದ ನೆರವಿನಿಂದ ಭಾರತ ಎ ತಂಡವು 54 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 257 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಸರ್ಫರಾಝ್ ಖಾನ್ (71) ಹಾಗೂ ಕೆಎಸ್ ಭರತ್ (25) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಭಾರತ ಎ ತಂಡ: ಅಭಿಮನ್ಯು ಈಶ್ವರನ್ (ನಾಯಕ) , ಸಾಯಿ ಸುದರ್ಶನ್ , ರಜತ್ ಪಾಟಿದಾರ್ , ಪ್ರದೋಶ್ ಪಾಲ್ , ಸರ್ಫರಾಜ್ ಖಾನ್ , ಶ್ರೀಕರ್ ಭರತ್ , ಧ್ರುವ್ ಜುರೆಲ್ (​ವಿಕೆಟ್ ಕೀಪರ್) , ಮಾನವ್ ಸುತಾರ್ , ತುಷಾರ್ ದೇಶಪಾಂಡೆ , ನವದೀಪ್ ಸೈನಿ , ಆಕಾಶ್ ದೀಪ್ , ಪುಲ್ಕಿತ್ ನಾರಂಗ್ , ವಿಧ್ವತ್ ಕಾವೇರಪ್ಪ.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ರೋಹಿತ್ ಶರ್ಮಾರ ದಾಖಲೆ ಬ್ರೇಕ್

ಇಂಗ್ಲೆಂಡ್ ಲಯನ್ಸ್ ತಂಡ: ಕೀಟನ್ ಜೆನ್ನಿಂಗ್ಸ್ , ಅಲೆಕ್ಸ್ ಲೀಸ್ , ಜೋಶ್ ಬೊಹಾನನ್ (ನಾಯಕ) , ಡ್ಯಾನ್ ಮೌಸ್ಲಿ , ಆಲಿವರ್ ಪ್ರೈಸ್ , ಜೇಮ್ಸ್ ರೆವ್ (ವಿಕೆಟ್ ಕೀಪರ್) , ಕೇಸಿ ಆಲ್ಡ್ರಿಡ್ಜ್ , ಟಾಮ್ ಲಾವ್ಸ್ , ಬ್ರೈಡನ್ ಕಾರ್ಸೆ , ಜೇಮ್ಸ್ ಕೋಲ್ಸ್ , ಜ್ಯಾಕ್ ಕಾರ್ಸನ್ , ಮ್ಯಾಥ್ಯೂ ಫಿಶರ್ , ಕ್ಯಾಲಮ್ ಪಾರ್ಕಿನ್ಸನ್, ಮ್ಯಾಥ್ಯೂ ಪೊಟ್ಸ್​, ಒಲಿವರ್ ರಾಬಿನ್ಸನ್.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು