AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajath Patidar: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಸಿಎಸ್​ಕೆಗೆ ಟಾಂಗ್ ಕೊಟ್ಟ ರಜತ್ ಪಾಟಿದಾರ್: ಏನಂದ್ರು ನೋಡಿ

CSK vs RCB, IPL 2025: ಐಪಿಎಲ್ 2025 ರಲ್ಲಿ ಶುಕ್ರವಾರ ಚೆಪಾಕ್ನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು 50 ರನ್‌ಗಳಿಂದ ಸೋಲಿಸಿತು. ಈ ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಪಂದ್ಯದ ಕುರಿತು ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Rajath Patidar: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಸಿಎಸ್​ಕೆಗೆ ಟಾಂಗ್ ಕೊಟ್ಟ ರಜತ್ ಪಾಟಿದಾರ್: ಏನಂದ್ರು ನೋಡಿ
Rajat Patidar Post Match Csk Vs Rcb
Vinay Bhat
|

Updated on: Mar 29, 2025 | 8:10 AM

Share

ಬೆಂಗಳೂರು (ಮಾ. 28): 17 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು (CSK vs RCB) ಸೋಲಿಸಿದ ಸಾಧನೆ ಮಾಡಿದೆ. 2008 ರ ನಂತರ ಆರ್‌ಸಿಬಿ ಈ ಸಾಧನೆ ಮಾಡಿದೆ. ಮಾರ್ಚ್ 28 ರಂದು ನಡೆದ ಐಪಿಎಲ್ 2025ರ ಎಂಟನೇ ಪಂದ್ಯದಲ್ಲಿ, ನಾಯಕ ರಜತ್ ಪಾಟಿದಾರ್ ಅವರ ಅರ್ಧಶತಕ ಮತ್ತು ಶಿಸ್ತಿನ ಬೌಲಿಂಗ್ ಪ್ರದರ್ಶನದ ಬಲದಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 50 ರನ್‌ಗಳಿಂದ ಸೋಲಿಸಿತು. ಆರ್‌ಸಿಬಿ ಏಳು ವಿಕೆಟ್‌ಗೆ 196 ರನ್ ಗಳಿಸಿದರೆ, ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎಂಟು ವಿಕೆಟ್‌ಗೆ 146 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಪಂದ್ಯದ ಕುರಿತು ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಮೈದಾನದಲ್ಲಿ ನಾವು ಕಲೆಹಾಕಿದ್ದು ಉತ್ತಮ ಮೊತ್ತವಾಗಿತ್ತು. ಚೆಂಡು ಸ್ವಲ್ಪ ನಿಂತು ಬರುತ್ತಿತ್ತು ಮತ್ತು ಬ್ಯಾಟ್ಸ್‌ಮನ್‌ಗಳಿಗೆ ಇದು ಸುಲಭವಾಗಿರಲಿಲ್ಲ ಎಂದು ಹೇಳಿದರು. ಇದೇವೇಳೆ ಇಲ್ಲಿ ಅನೇಕ ಅಭಿಮಾನಿಗಳಿರುವ ಕಾರಣ ಚೆನ್ನೈ ವಿರುದ್ಧ ಚೆಪಾಕ್‌ನಲ್ಲಿ ಆಡುವುದು ಯಾವಾಗಲೂ ವಿಶೇಷವಾಗಿರುತ್ತದೆ ಎಂದು ಟಾಂಗ್ ನೀಡಿದರು. ಬಳಿಕ ಸಿಎಸ್​ಕೆ ಮಾತ್ರವಲ್ಲ, ಪ್ರತಿಯೊಂದು ತಂಡದ ವಿರುದ್ಧವೂ ಅವರ ತವರು ಮೈದಾನದಲ್ಲಿ ಆಡುವುದು ವಿಶೇಷ ಎಂದರು.

ಈ ಪಿಚ್​ನಲ್ಲಿ ಟಾರ್ಗೆಟ್ ಬೆನ್ನಟ್ಟುವುದು ಸುಲಭವಲ್ಲ ಎಂದು ನಮಗೆ ತಿಳಿದಿತ್ತು. ಹೀಗಾಗಿ ನಾವು ಸುಮಾರು 200 ರನ್‌ಗಳ ಗುರಿ ಇಟ್ಟುಕೊಂಡಿದ್ದೆವು. ನಾನು ಆ ಮೊತ್ತ ತಲುಪುವ ವರೆಗೆ ಪ್ರತಿ ಚೆಂಡನ್ನು ಬಿಗ್ ಹಿಟ್​ಗೆ ಪ್ರಯತ್ನಿಸುವುದು ನನ್ನ ಗುರಿಯಾಗಿತ್ತು. ನಾವು ಬ್ಯಾಟಿಂಗ್ ಲೈನ್ ಅಪ್ ಅನ್ನು ಬದಲಾಯಿಸಿಲ್ಲ, ಅದು ಕಳೆದ ಪಂದ್ಯದಂತೆಯೇ ಇತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಆರ್​ಸಿಬಿ ಫ್ಯಾನ್ಸ್ ಹಾವಳಿಗೆ 1 ವಾರ ಸೋಶಿಯಲ್ ಮೀಡಿಯಾಗೆ ರಾಯುಡು ಗುಡ್​ಬೈ
Image
ಸಿಎಸ್​ಕೆಗೆ ಅವರ ನೆಲದಲ್ಲೇ ಅಟ್ಟಾಡಿಸಿ ಹೊಡೆದ ಆರ್​ಸಿಬಿ
Image
ಆರ್​ಸಿಬಿ ಆಟಗಾರನನ್ನು ಗೇಲಿ ಮಾಡಿದ ಸಿಎಸ್​ಕೆ; ವೈರಲ್ ವಿಡಿಯೋ
Image
ಬಲಿಷ್ಠ ತಂಡಗಳ ನಡುವಿನ ಪಂದ್ಯದ ದಿನಾಂಕದಲ್ಲಿ ಬದಲಾವಣೆ

CSK vs RCB: ಸೋತರೂ ಖುಷಿಯಿದೆ: ಸಿಎಸ್​ಕೆ ನಾಯಕನ ಶಾಕಿಂಗ್ ಹೇಳಿಕೆ

ಸ್ಪಿನ್ನರ್‌ಗಳಿಗೆ ಟ್ರ್ಯಾಕ್ ಸಾಕಷ್ಟು ಸಹಾಯಕವಾಗಿತ್ತು. ನಾವು ಸ್ಪಿನ್ನರ್‌ಗಳನ್ನು ಮೊದಲೇ ಬಳಸಲು ಬಯಸಿದ್ದೆವು ಮತ್ತು ಲಿವಿಂಗ್‌ಸ್ಟೋನ್ ಬಂದು ಬೌಲಿಂಗ್ ಮಾಡಿದ ರೀತಿ ಅತ್ಯುತ್ತಮವಾಗಿತ್ತು. ಹ್ಯಾಜಲ್‌ವುಡ್‌ನ ಮೊದಲ ಓವರ್ ಮತ್ತು ಹೊಸ ಚೆಂಡಿನ ಬೌಲಿಂಗ್ ಇದು ಪಂದ್ಯದ ಗತಿಯನ್ನು ಬದಲಾಯಿಸುವ ಕ್ಷಣವಾಗಿತ್ತು. ಏಕೆಂದರೆ ಪವರ್‌ಪ್ಲೇನಲ್ಲಿ ನಾವು 2-3 ವಿಕೆಟ್‌ಗಳನ್ನು ಪಡೆದಿದ್ದೇವೆ ಎಂದು ನಾನು ಭಾವಿಸುತ್ತೇನೆ, ಅವರು ಹಾರ್ಡ್ ಲೆಂಗ್ತ್ ಅನ್ನು ಸ್ಥಿರವಾಗಿ ಹೇಗೆ ಬೌಲಿಂಗ್ ಮಾಡಿದರು ಎಂಬುದನ್ನು ನೋಡುವುದು ಒಂದು ಅದ್ಭುತ ಎಂಬುದು ರಜತ್ ಪಾಟಿದರ್ ಮಾತು.

ಆರ್​ಸಿಬಿ ನಾಯಕ ರಜತ್ ಪಾಟಿದಾರ್ (51) ಅವರ ಅದ್ಭುತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 196 ರನ್ ಗಳಿಸುವ ಮೂಲಕ ಆತಿಥೇಯರಿಗೆ ಕಠಿಣ ಸವಾಲು ಒಡ್ಡಿತು. ತಂಡದ ಪರ ಆರಂಭಿಕ ಆಟಗಾರ ಫಿಲ್ ಸಾಲ್ಟ್ 16 ಎಸೆತಗಳಲ್ಲಿ 32 ರನ್, ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ 31 ರನ್ ಮತ್ತು ದೇವದತ್ ಪಡಿಕ್ಕಲ್ 14 ಎಸೆತಗಳಲ್ಲಿ 27 ರನ್ ಗಳಿಸಿದರು. ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಗಳಿಸಿ ತಂಡವನ್ನು ದೊಡ್ಡ ಸ್ಕೋರ್‌ನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ