AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajeshwari Gayakwad: ಸೂಪರ್ ಮಾರ್ಕೆಟ್​ನಲ್ಲಿ ಹಲ್ಲೆ ಮಾಡಿದ ರಾಜೇಶ್ವರಿ ಗಾಯಕ್ವಾಡ್​; ದಾಂದಲೆ ವಿಡಿಯೋ ವೈರಲ್​

ಉಮದಿ ಸೂಪರ್ ಮಾರ್ಕೆಟ್ ಮಾಲೀಕ‌ ಮಲ್ಲಿಕಾರ್ಜುನ, ಅವರ ಪುತ್ರ ಪ್ರಶಾಂತ ಹಾಗೂ‌ ಕೆಲಸಗಾರರ ಮೇಲೆ ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

Rajeshwari Gayakwad: ಸೂಪರ್ ಮಾರ್ಕೆಟ್​ನಲ್ಲಿ ಹಲ್ಲೆ ಮಾಡಿದ ರಾಜೇಶ್ವರಿ ಗಾಯಕ್ವಾಡ್​; ದಾಂದಲೆ ವಿಡಿಯೋ ವೈರಲ್​
rajeshwari gayakwad
TV9 Web
| Updated By: Digi Tech Desk|

Updated on:Dec 01, 2022 | 11:11 AM

Share

ವಿಜಯಪುರ (ಡಿ. 01): ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ (Rajeshwari Gayakwad) ಹಾಗೂ ಬೆಂಬಲಿಗರು ನಗರದ ಉಮದಿ ಸೂಪರ್ ಬಜಾರಿನಲ್ಲಿ ಗಲಾಟೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಿಜಯಪುರ (Vijayapura) ‌ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ನಲ್ಲಿ ಬುಧವಾರ ಈ ಘಟನೆ ನಡೆದಿದೆ. ಉಮದಿ ಸೂಪರ್ ಮಾರ್ಕೆಟ್ (Super Market) ಮಾಲೀಕ‌ ಮಲ್ಲಿಕಾರ್ಜುನ, ಅವರ ಪುತ್ರ ಪ್ರಶಾಂತ ಹಾಗೂ‌ ಕೆಲಸಗಾರರ ಮೇಲೆ ಹಲ್ಲೆ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಬುಧವಾರ ಸಂಜೆ ಸ್ನೇಹಿತೆಯೊಂದಿಗೆ ರಾಜೇಶ್ವರಿ ಉಮದಿ ಸೂಪರ್ ಬಜಾರಿಗೆ ಬಂದಿದ್ದರು. ಈ ಸಂದರ್ಭ ಕಾಸ್ಮೆಟಿಕ್ ಖರೀಧಿ ಮಾಡುವ ವೇಳೆ ಕೆಲಸಗಾರರು ಹಾಗೂ ರಾಜೇಶ್ವರಿ ಗಾಯಕ್ವಾಡ್ ಮದ್ಯೆ ಮಾತಿನ ಚಕಮಕಿ ನಡೆದಿದೆ. ಕಾಸ್ಮೆಟಿಕ್ ಬಾಟಲ್​ಗಳನ್ನು ತೆರೆದು ನೋಡುತ್ತಿದ್ದ ರಾಜೇಶ್ವರಿ ಅವರಿಗೆ ಅಲ್ಲಿನ ಮಹಿಳಾ ಕೆಲಸಗಾರರು ಪ್ರಶ್ನೆ ಮಾಡಿದ್ದಾರೆ. ಕಾಸ್ಮೆಟಿಕ್ ಬಾಟಲ್​ಗಳನ್ನು ಓಪನ್ ಮಾಡಬೇಡಿ. ಓಪನ್ ಮಾಡಿದ ಬಾಟಲ್​ಗಳನ್ನು ಬೇರೆಯವರು ಖರೀಧಿ ಮಾಡಲ್ಲಾ ಎಂದಿದ್ದಾರೆ. ಈ ವಿಚಾರಕ್ಕೆ ಗಲಾಟೆ ನಡೆದಿದೆ.

ಇದನ್ನೂ ಓದಿ
Image
Abu Dhabi T10 League: 30 ಎಸೆತಗಳಲ್ಲಿ 83 ರನ್​: ಟಿ10 ಲೀಗ್​ನಲ್ಲಿ ಪಾಕ್ ಆಟಗಾರನ ಸಿಡಿಲಬ್ಬರ
Image
Viswanathan Anand: ಚೆಸ್‌ನಲ್ಲಿ ವಂಚನೆ ಆನ್‌ಲೈನ್ ಪಂದ್ಯಾವಳಿಗಳಿಗೆ ಸೀಮಿತವಾಗಿದೆ: ವಿಶ್ವನಾಥನ್ ಆನಂದ್
Image
ದೇಶಕ್ಕಿಂತ ದುಡ್ಡು ಮುಖ್ಯ: ಲೀಗ್​ ಕ್ರಿಕೆಟ್​ನ ಹಿಂದೆ ಬಿದ್ದಿರುವ ಆಟಗಾರರು..!
Image
ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ಬರೆದ 20ರ ಹರೆಯ ಅಫ್ಘಾನ್ ಬ್ಯಾಟರ್

ಈ ಸಂದರ್ಭ ಸೂಪರ್ ಬಜಾರಿನ ಮಾಲೀಕ ಮಲ್ಲಿಕಾರ್ಜುನ ಆಗಮಿಸಿ ಕಾಸ್ಮೆಟಿಕ್ ಬಾಟಲ್ ಓಪನ್ ಮಾಡಬೇಡಿ. ಓಪನ್ ಮಾಡಿಯೇ ಖರೀದಿ ಮಾಡೋದಾದರೆ ನಮ್ಮಲ್ಲಿ ಅದಕ್ಕೆ ಅವಕಾಶವಿಲ್ಲಾ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಜೇಶ್ವರಿ ಗಾಯಕ್ವಾಡ್ ಏರು ಧ್ವನಿಯಲ್ಲಿ ಮಾತನಾಡಿ ಬೆಂಬಲಿಗರಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರಂತೆ. 8 ರಿಂದ 10 ಜನ ಯುವಕರು ಆಗಮಿಸಿ ಸೂಪರ್ ಬಜಾರಿನ ಮಾಲೀಕ ಮಲ್ಲಿಕಾರ್ಜುನ ಹಾಗೂ ಅವರ ಪುತ್ರ ಪ್ರಶಾಂತ ಹಾಗೂ ಕೆಲಸಗಾರರ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಶಾಂತ ಉಮದಿ ಕೈಗೆ, ತೋಳು ಹಾಗೂ ಬೆನ್ನಿಗೆ ಗಾಯವಾಗಿದೆಯಂತೆ.

IND vs BAN; ನ್ಯೂಜಿಲೆಂಡ್ ಪ್ರವಾಸ ಮುಗಿಯಿತು: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

ಹಲ್ಲೆ ಮಾಡಿ ರಾಜೇಶ್ವರಿ ಹಾಗೂ ಸಹಚಚರು ಅಲ್ಲಿಂದ ತೆರಳಿದ್ದಾರೆ. ಗಲಾಟೆ ಹಾಗೂ ಹಲ್ಲೆಯ ವಿಡಿಯೋ ಸೂಪರ್ ಬಜಾರಿನಲ್ಲಿರುವ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ. ಘಟನೆಯ ಸುದ್ದಿ ತಿಳಿದ ಆದರ್ಶ ನಗರ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಯತೀಶ್ ಹಾಗೂ ಇತರರು ಆಗಮಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಆದರೆ ಘಟನೆ ಕುರಿತು ಉಮದಿ ಸೂಪರ್ ಬಜಾರಿ ಮಾಲೀಕ ಮಲ್ಲಿಕಾರ್ಜುನ ಹಾಗೂ ಅವರ ಪುತ್ರ ಪ್ರಶಾಂತ ದೂರು ನೀಡಿಲ್ಲಾ.

ಈ ಘಟನೆಯ ಬಗ್ಗೆ ಹೇಳಿಕೆ ನೀಡದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರು ಗಾಯಕ್ವಾಡ್, ದಾಂದಲೆ ಹಾಗೂ ಹಲ್ಲೆ ಮಾಡಿರೋ ಆರೋಪವನ್ನು ನಿರಾಕರಿಸಿದ್ದಾರೆ. ಉಜಮದಿ ಸೂಪರ್ ಬಜಾರಿನ ಕೆಲಸಗಾರರೇ ನನ್ನ ಜೊತೆಗೆ ವಾಗ್ವಾದ ನಡೆಸಿ ಅನುಚಿತವಾಗಿ ವರ್ತನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಹೆಚ್ಚಿನ ಕ್ರೀಡಾ ಸುದದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 am, Thu, 1 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ