AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸತತ 5 ಸಿಕ್ಸ್ ಸಿಡಿಸಿದ ಮುಂಬೈ ಇಂಡಿಯನ್ಸ್ ಆಟಗಾರ..!

Ramandeep Singh: ಈ ಬಾರಿಯ ಟೂರ್ನಿಯಲ್ಲಿ ಅವರಿಗೆ ಒಂದೇ ಒಂದು ಅವಕಾಶ ಕೂಡ ಸಿಕ್ಕಿರಲಿಲ್ಲ. ಇದೀಗ ದೇಶೀಯ ಅಂಗಳದಲ್ಲಿ ಅಬ್ಬರಿಸುವ ಮೂಲಕ ರಮಣ್​ದೀಪ್ ಸಿಂಗ್ ಮುಂಬರುವ ಐಪಿಎಲ್​ನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

VIDEO: ಸತತ 5 ಸಿಕ್ಸ್ ಸಿಡಿಸಿದ ಮುಂಬೈ ಇಂಡಿಯನ್ಸ್ ಆಟಗಾರ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 20, 2023 | 5:49 PM

Share

ಮೊಹಾಲಿಯಲ್ಲಿ ನಡೆಯುತ್ತಿರುವ ಶೇರ್-ಎ-ಪಂಜಾಬ್ ಟಿ20 ಕಪ್‌ನಲ್ಲಿ ಒಂದೇ ಓವರ್​ನಲ್ಲಿ 5 ಸಿಕ್ಸ್ ಸಿಡಿಸುವ ಮೂಲಕ ರಮಣ್​ದೀಪ್ ಸಿಂಗ್ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ರಮಣ್​ದೀಪ್ ಸಿಂಗ್ ಈ ಟೂರ್ನಿಯಲ್ಲಿ ಅಗ್ರಿ ಕಿಂಗ್ ನೈಟ್ಸ್ ಪರ ಕಣಕ್ಕಿಳಿದಿದ್ದರು. ಬುಧವಾರ ನಡೆದ ಈ ಪಂದ್ಯದಲ್ಲಿ BLV ಬ್ಲಾಸ್ಟರ್ಸ್ ಹಾಗೂ ಅಗ್ರಿ ಕಿಂಗ್ ನೈಟ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಬಿಎಲ್​ವಿ ಬ್ಲಾಸ್ಟರ್ಸ್ ತಂಡವು 20 ಓವರ್‌ಗಳಲ್ಲಿ 194 ರನ್ ಕಲೆಹಾಕಿತು.

ಈ ಬೃಹತ್ ಮೊತ್ತ ಬೆನ್ನತ್ತಿದ ಅಗ್ರಿ ಕಿಂಗ್ ನೈಟ್ಸ್ ಪರ ರಮಣ್​ದೀಪ್ ಸಿಂಗ್ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಅದರಲ್ಲೂ ಆಫ್-ಸ್ಪಿನ್ನರ್ ಕ್ರಿಶನ್ ಅಲಂಗ್ ಎಸೆದ 13ನೇ ಓವರ್​ನ 5 ಎಸೆತಗಳಲ್ಲಿ ಸತತ 5 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದರು. ಇನ್ನು 6ನೇ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ ಒಟ್ಟು 31 ರನ್ ಚಚ್ಚಿದರು.

ಈ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ರಮಣ್​ದೀಪ್ ಸಿಂಗ್ ಕೇವಲ 28 ಎಸೆತಗಳಲ್ಲಿ 63 ರನ್ ಗಳಿಸಿದರು. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಗ್ರಿ ಕಿಂಗ್ ನೈಟ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್​ಗಳಿಸಿ 3 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಇನ್ನು ರಮಣ್​ದೀಪ್ ಸಿಂಗ್ ಅವರ ಈ ಭರ್ಜರಿ ಬ್ಯಾಟಿಂಗ್ ವಿಡಿಯೋವನ್ನು ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:IPL 2023: ಐಪಿಎಲ್​ನ ಅತ್ಯಂತ ಜನಪ್ರಿಯ ಆಟಗಾರರ ಪಟ್ಟಿ ಪ್ರಕಟ..!

ಮುಂಬೈ ಇಂಡಿಯನ್ಸ್ ಆಟಗಾರ:

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ 5 ಪಂದ್ಯಗಳನ್ನಾಡಿರುವ ರಮಣ್​ದೀಪ್ ಸಿಂಗ್ ಇದುವರೆಗೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿಲ್ಲ. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಅವರಿಗೆ ಒಂದೇ ಒಂದು ಅವಕಾಶ ಕೂಡ ಸಿಕ್ಕಿರಲಿಲ್ಲ. ಇದೀಗ ದೇಶೀಯ ಅಂಗಳದಲ್ಲಿ ಅಬ್ಬರಿಸುವ ಮೂಲಕ ರಮಣ್​ದೀಪ್ ಸಿಂಗ್ ಮುಂಬರುವ ಐಪಿಎಲ್​ನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ