AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್ ಮಾಡಿದ್ದು ಸರಿಯಲ್ಲ, ಪ್ರಧಾನಿ ಮಾತಿಗೂ ಕಿಮ್ಮತ್ತಿಲ್ಲ! ಇದನ್ನು ಐಸಿಸಿ ಮುಂದಿಡಲಿದ್ದೇವೆ; ಪಾಕ್​ ಕ್ರಿಕೆಟ್ ಮಂಡಳಿ

ಕಿವಿ ಮಂಡಳಿಯ ಈ ನಿರ್ಧಾರದ ನಂತರ, ರಾಜಾ ಅವರ ಆಕ್ರೋಶ ಭುಗಿಲೆದ್ದಿತು. ನ್ಯೂಜಿಲೆಂಡ್​ನ ಈ ನಿರ್ಧಾರವನ್ನು ಐಸಿಸಿಯಲ್ಲಿ ಪ್ರಶ್ನಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ನ್ಯೂಜಿಲೆಂಡ್ ಮಾಡಿದ್ದು ಸರಿಯಲ್ಲ, ಪ್ರಧಾನಿ ಮಾತಿಗೂ ಕಿಮ್ಮತ್ತಿಲ್ಲ! ಇದನ್ನು ಐಸಿಸಿ ಮುಂದಿಡಲಿದ್ದೇವೆ; ಪಾಕ್​ ಕ್ರಿಕೆಟ್ ಮಂಡಳಿ
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷ ಮತ್ತು ಮಾಜಿ ನಾಯಕ ರಮೀಜ್ ರಾಜಾ
TV9 Web
| Edited By: |

Updated on: Sep 17, 2021 | 7:22 PM

Share

ಪಾಕಿಸ್ತಾನದಲ್ಲಿ ಕ್ರಿಕೆಟ್ ಮತ್ತೊಮ್ಮೆ ದೊಡ್ಡ ಹಿನ್ನಡೆ ಅನುಭವಿಸಿದೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡ ತನ್ನ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದೆ. ಶುಕ್ರವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಕಿವಿ ತಂಡ ಈ ನಿರ್ಧಾರ ಕೈಗೊಂಡಿದೆ. ಭದ್ರತಾ ಕಾರಣಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ (NZC) ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನ್ಯೂಜಿಲ್ಯಾಂಡ್ ಸರ್ಕಾರ ಮತ್ತು ನ್ಯೂಜಿಲ್ಯಾಂಡ್ ಕ್ರಿಕೆಟ್​ನ ಭದ್ರತಾ ಸಲಹೆಗಾರರ ​​ಸಲಹೆಯನ್ನು ಅನುಸರಿಸಿ ಪಾಕಿಸ್ತಾನದ ಪ್ರವಾಸವನ್ನು ರದ್ದುಗೊಳಿಸುವುದಾಗಿ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರವಾಸದಲ್ಲಿ ನ್ಯೂಜಿಲೆಂಡ್ ಮೂರು ಏಕದಿನ ಮತ್ತು ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಿತ್ತು. ಆದರೆ ಈ ಪ್ರವಾಸದಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಾಗುವುದಿಲ್ಲ. ನ್ಯೂಜಿಲ್ಯಾಂಡ್‌ನ ಈ ನಿರ್ಧಾರದ ಮೇಲೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷ ಮತ್ತು ಮಾಜಿ ನಾಯಕ ರಮೀಜ್ ರಾಜಾ ಕೋಪಗೊಂಡಿದ್ದಾರೆ. ನ್ಯೂಜಿಲೆಂಡ್ ಕ್ರಿಕೆಟ್ ಮಾಡಿದ ಮೋಸವನ್ನು ಐಸಿಸಿ ಮುಂದೆ ಇಡಲಾಗುವುದು ಎಂದು ರಾಜಾ ಹೇಳಿದ್ದಾರೆ.

ಸೀಮಿತ ಓವರ್‌ಗಳ ಸರಣಿಯ ಮೊದಲ ಏಕದಿನ ಪಂದ್ಯವು ಶುಕ್ರವಾರ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಸಮಯಕ್ಕೆ ಸರಿಯಾಗಿ ಆರಂಭವಾಗಲಿಲ್ಲ ಜೊತೆಗೆ ಆಟಗಾರರಿಗೂ ಸಹ ಹೋಟೆಲ್​ನಿಂದ ಬೊರಬರದಂತೆ ಆದೇಶ ಹೊರಡಿಸಲಾಯಿತು. ಇದರ ನಂತರ, ನ್ಯೂಜಿಲ್ಯಾಂಡ್ ಕ್ರಿಕೆಟ್ ಮುಖ್ಯ ಕಾರ್ಯನಿರ್ವಾಹಕ ಡೇವಿಡ್ ವೈಟ್ ಹೇಳಿಕೆಯನ್ನು ನೀಡಿದ್ದು, ನ್ಯೂಜಿಲೆಂಡ್ ಸರ್ಕಾರದಿಂದ ಬಂದ ಆದೇಶದ ನಂತರ ಪ್ರವಾಸವನ್ನು ಮುಂದುವರಿಸಲು ಸಾಧ್ಯವಿಲ್ಲ. ಇದು ಪಿಸಿಬಿಗೆ ಒಂದು ಹೊಡೆತ ಎಂದು ನಾನು ಭಾವಿಸುತ್ತೇನೆ. ಇಲ್ಲಿ ಆಟಗಾರರ ಸುರಕ್ಷತೆಯು ಅತ್ಯುನ್ನತವಾಗಿದೆ ಆದರೆ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ ಎಂದರು.

ರಾಜಾ ನ್ಯೂಜಿಲೆಂಡ್ ಮೇಲೆ ಕೋಪಗೊಂಡರು ಕಿವಿ ಮಂಡಳಿಯ ಈ ನಿರ್ಧಾರದ ನಂತರ, ರಾಜಾ ಅವರ ಆಕ್ರೋಶ ಭುಗಿಲೆದ್ದಿತು. ನ್ಯೂಜಿಲೆಂಡ್​ನ ಈ ನಿರ್ಧಾರವನ್ನು ಐಸಿಸಿಯಲ್ಲಿ ಪ್ರಶ್ನಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ರಾಜಾ ಟ್ವೀಟ್, ಇದು ತುಂಬಾ ಕೆಟ್ಟ ದಿನವಾಗಿದೆ. ನಮ್ಮ ಆಟಗಾರರು ಮತ್ತು ಅಭಿಮಾನಿಗಳ ಬಗ್ಗೆ ನನಗೆ ಬೇಸರವಾಗಿದೆ. ಭದ್ರತೆಯ ಬಗ್ಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಪ್ರವಾಸದಿಂದ ಹಿಂದೆ ಸರಿಯುವುದು, ಅದೂ ಕೂಡ ಮಾಹಿತಿಯನ್ನು ಹಂಚಿಕೊಳ್ಳದೆ, ನಿರಾಶಾದಾಯಕವಾಗಿದೆ. ನ್ಯೂಜಿಲೆಂಡ್ ಯಾವ ಜಗತ್ತಿನಲ್ಲಿ ವಾಸಿಸುತ್ತಿದೆ ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಹೇಳಿಕೆಯಲ್ಲಿ ನ್ಯೂಜಿಲ್ಯಾಂಡ್‌ಗಾಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಹೇಳಿದೆ. ದೇಶದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಕೂಡ ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಜೊತೆ ಮಾತನಾಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಪಾಕಿಸ್ತಾನ ಸರ್ಕಾರವು ಎಲ್ಲಾ ಭೇಟಿ ನೀಡುವ ತಂಡಗಳಿಗೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡುತ್ತಿದೆ. ನಾವು ಅದರ ಬಗ್ಗೆ ನ್ಯೂಜಿಲ್ಯಾಂಡ್ ಕ್ರಿಕೆಟ್​ಗೆ ಭರವಸೆ ನೀಡಿದ್ದೇವೆ. ಪಾಕಿಸ್ತಾನದ ಪ್ರಧಾನಿ (ಇಮ್ರಾನ್ ಖಾನ್) ವೈಯಕ್ತಿಕವಾಗಿ ಪ್ರಧಾನಿಯವರೊಂದಿಗೆ ಮಾತನಾಡಿದರು. ಜೊತೆಗೆ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ಇದೆ ಮತ್ತು ಭೇಟಿ ನೀಡುವ ತಂಡಕ್ಕೆ ಯಾವುದೇ ರೀತಿಯ ಭದ್ರತಾ ಬೆದರಿಕೆ ಇಲ್ಲ ಎಂದು ಹೇಳಿದರು. ಆದರೂ ಕೂಡ ನ್ಯೂಜಿಲೆಂಡ್ ಸರಣಿಯಿಂದ ಹಿಂದೆ ಸರಿದಿದೆ ಎಂದಿದ್ದಾರೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!