AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್ ಮಾಡಿದ್ದು ಸರಿಯಲ್ಲ, ಪ್ರಧಾನಿ ಮಾತಿಗೂ ಕಿಮ್ಮತ್ತಿಲ್ಲ! ಇದನ್ನು ಐಸಿಸಿ ಮುಂದಿಡಲಿದ್ದೇವೆ; ಪಾಕ್​ ಕ್ರಿಕೆಟ್ ಮಂಡಳಿ

ಕಿವಿ ಮಂಡಳಿಯ ಈ ನಿರ್ಧಾರದ ನಂತರ, ರಾಜಾ ಅವರ ಆಕ್ರೋಶ ಭುಗಿಲೆದ್ದಿತು. ನ್ಯೂಜಿಲೆಂಡ್​ನ ಈ ನಿರ್ಧಾರವನ್ನು ಐಸಿಸಿಯಲ್ಲಿ ಪ್ರಶ್ನಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ನ್ಯೂಜಿಲೆಂಡ್ ಮಾಡಿದ್ದು ಸರಿಯಲ್ಲ, ಪ್ರಧಾನಿ ಮಾತಿಗೂ ಕಿಮ್ಮತ್ತಿಲ್ಲ! ಇದನ್ನು ಐಸಿಸಿ ಮುಂದಿಡಲಿದ್ದೇವೆ; ಪಾಕ್​ ಕ್ರಿಕೆಟ್ ಮಂಡಳಿ
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷ ಮತ್ತು ಮಾಜಿ ನಾಯಕ ರಮೀಜ್ ರಾಜಾ
TV9 Web
| Edited By: |

Updated on: Sep 17, 2021 | 7:22 PM

Share

ಪಾಕಿಸ್ತಾನದಲ್ಲಿ ಕ್ರಿಕೆಟ್ ಮತ್ತೊಮ್ಮೆ ದೊಡ್ಡ ಹಿನ್ನಡೆ ಅನುಭವಿಸಿದೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡ ತನ್ನ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದೆ. ಶುಕ್ರವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಕಿವಿ ತಂಡ ಈ ನಿರ್ಧಾರ ಕೈಗೊಂಡಿದೆ. ಭದ್ರತಾ ಕಾರಣಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ (NZC) ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನ್ಯೂಜಿಲ್ಯಾಂಡ್ ಸರ್ಕಾರ ಮತ್ತು ನ್ಯೂಜಿಲ್ಯಾಂಡ್ ಕ್ರಿಕೆಟ್​ನ ಭದ್ರತಾ ಸಲಹೆಗಾರರ ​​ಸಲಹೆಯನ್ನು ಅನುಸರಿಸಿ ಪಾಕಿಸ್ತಾನದ ಪ್ರವಾಸವನ್ನು ರದ್ದುಗೊಳಿಸುವುದಾಗಿ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರವಾಸದಲ್ಲಿ ನ್ಯೂಜಿಲೆಂಡ್ ಮೂರು ಏಕದಿನ ಮತ್ತು ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಿತ್ತು. ಆದರೆ ಈ ಪ್ರವಾಸದಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಾಗುವುದಿಲ್ಲ. ನ್ಯೂಜಿಲ್ಯಾಂಡ್‌ನ ಈ ನಿರ್ಧಾರದ ಮೇಲೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷ ಮತ್ತು ಮಾಜಿ ನಾಯಕ ರಮೀಜ್ ರಾಜಾ ಕೋಪಗೊಂಡಿದ್ದಾರೆ. ನ್ಯೂಜಿಲೆಂಡ್ ಕ್ರಿಕೆಟ್ ಮಾಡಿದ ಮೋಸವನ್ನು ಐಸಿಸಿ ಮುಂದೆ ಇಡಲಾಗುವುದು ಎಂದು ರಾಜಾ ಹೇಳಿದ್ದಾರೆ.

ಸೀಮಿತ ಓವರ್‌ಗಳ ಸರಣಿಯ ಮೊದಲ ಏಕದಿನ ಪಂದ್ಯವು ಶುಕ್ರವಾರ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಸಮಯಕ್ಕೆ ಸರಿಯಾಗಿ ಆರಂಭವಾಗಲಿಲ್ಲ ಜೊತೆಗೆ ಆಟಗಾರರಿಗೂ ಸಹ ಹೋಟೆಲ್​ನಿಂದ ಬೊರಬರದಂತೆ ಆದೇಶ ಹೊರಡಿಸಲಾಯಿತು. ಇದರ ನಂತರ, ನ್ಯೂಜಿಲ್ಯಾಂಡ್ ಕ್ರಿಕೆಟ್ ಮುಖ್ಯ ಕಾರ್ಯನಿರ್ವಾಹಕ ಡೇವಿಡ್ ವೈಟ್ ಹೇಳಿಕೆಯನ್ನು ನೀಡಿದ್ದು, ನ್ಯೂಜಿಲೆಂಡ್ ಸರ್ಕಾರದಿಂದ ಬಂದ ಆದೇಶದ ನಂತರ ಪ್ರವಾಸವನ್ನು ಮುಂದುವರಿಸಲು ಸಾಧ್ಯವಿಲ್ಲ. ಇದು ಪಿಸಿಬಿಗೆ ಒಂದು ಹೊಡೆತ ಎಂದು ನಾನು ಭಾವಿಸುತ್ತೇನೆ. ಇಲ್ಲಿ ಆಟಗಾರರ ಸುರಕ್ಷತೆಯು ಅತ್ಯುನ್ನತವಾಗಿದೆ ಆದರೆ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ ಎಂದರು.

ರಾಜಾ ನ್ಯೂಜಿಲೆಂಡ್ ಮೇಲೆ ಕೋಪಗೊಂಡರು ಕಿವಿ ಮಂಡಳಿಯ ಈ ನಿರ್ಧಾರದ ನಂತರ, ರಾಜಾ ಅವರ ಆಕ್ರೋಶ ಭುಗಿಲೆದ್ದಿತು. ನ್ಯೂಜಿಲೆಂಡ್​ನ ಈ ನಿರ್ಧಾರವನ್ನು ಐಸಿಸಿಯಲ್ಲಿ ಪ್ರಶ್ನಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ರಾಜಾ ಟ್ವೀಟ್, ಇದು ತುಂಬಾ ಕೆಟ್ಟ ದಿನವಾಗಿದೆ. ನಮ್ಮ ಆಟಗಾರರು ಮತ್ತು ಅಭಿಮಾನಿಗಳ ಬಗ್ಗೆ ನನಗೆ ಬೇಸರವಾಗಿದೆ. ಭದ್ರತೆಯ ಬಗ್ಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಪ್ರವಾಸದಿಂದ ಹಿಂದೆ ಸರಿಯುವುದು, ಅದೂ ಕೂಡ ಮಾಹಿತಿಯನ್ನು ಹಂಚಿಕೊಳ್ಳದೆ, ನಿರಾಶಾದಾಯಕವಾಗಿದೆ. ನ್ಯೂಜಿಲೆಂಡ್ ಯಾವ ಜಗತ್ತಿನಲ್ಲಿ ವಾಸಿಸುತ್ತಿದೆ ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಹೇಳಿಕೆಯಲ್ಲಿ ನ್ಯೂಜಿಲ್ಯಾಂಡ್‌ಗಾಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಹೇಳಿದೆ. ದೇಶದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಕೂಡ ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಜೊತೆ ಮಾತನಾಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಪಾಕಿಸ್ತಾನ ಸರ್ಕಾರವು ಎಲ್ಲಾ ಭೇಟಿ ನೀಡುವ ತಂಡಗಳಿಗೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡುತ್ತಿದೆ. ನಾವು ಅದರ ಬಗ್ಗೆ ನ್ಯೂಜಿಲ್ಯಾಂಡ್ ಕ್ರಿಕೆಟ್​ಗೆ ಭರವಸೆ ನೀಡಿದ್ದೇವೆ. ಪಾಕಿಸ್ತಾನದ ಪ್ರಧಾನಿ (ಇಮ್ರಾನ್ ಖಾನ್) ವೈಯಕ್ತಿಕವಾಗಿ ಪ್ರಧಾನಿಯವರೊಂದಿಗೆ ಮಾತನಾಡಿದರು. ಜೊತೆಗೆ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ಇದೆ ಮತ್ತು ಭೇಟಿ ನೀಡುವ ತಂಡಕ್ಕೆ ಯಾವುದೇ ರೀತಿಯ ಭದ್ರತಾ ಬೆದರಿಕೆ ಇಲ್ಲ ಎಂದು ಹೇಳಿದರು. ಆದರೂ ಕೂಡ ನ್ಯೂಜಿಲೆಂಡ್ ಸರಣಿಯಿಂದ ಹಿಂದೆ ಸರಿದಿದೆ ಎಂದಿದ್ದಾರೆ.

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ