AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಶತಕ ವಂಚಿತ ಪಡಿಕ್ಕಲ್; ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಕರ್ನಾಟಕ

Karnataka Dominates Ranji Day 1: ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಮೊದಲ ಪಂದ್ಯದಲ್ಲಿ ಕರ್ನಾಟಕ ಮೊದಲ ದಿನದಾಟದಂತ್ಯಕ್ಕೆ 5 ವಿಕೆಟ್‌ಗೆ 295 ರನ್ ಗಳಿಸಿದೆ. ದೇವದತ್ ಪಡಿಕ್ಕಲ್ (96), ಕರುಣ್ ನಾಯರ್ (73) ಹಾಗೂ ಸ್ಮರಣ್ ರವಿಚಂದ್ರನ್ (66*) ಅರ್ಧಶತಕ ಸಿಡಿಸಿ ಮಿಂಚಿದರು. ಧರ್ಮೇಂದ್ರಸಿಂಹ ಜಡೇಜಾ 4 ವಿಕೆಟ್ ಕಬಳಿಸಿ ಸೌರಾಷ್ಟ್ರಕ್ಕೆ ನೆರವಾದರು. ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ.

Ranji Trophy: ಶತಕ ವಂಚಿತ ಪಡಿಕ್ಕಲ್; ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಕರ್ನಾಟಕ
Karun, Padikkal
ಪೃಥ್ವಿಶಂಕರ
|

Updated on:Oct 15, 2025 | 5:25 PM

Share

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿರುವ ಕರ್ನಾಟಕ ಹಾಗೂ ಸೌರಾಷ್ಟ್ರ (Karnataka vs Saurashtra) ನಡುವಿನ ರಣಜಿ ಟ್ರೋಫಿ (Ranji Trophy) ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಕರ್ನಾಟಕ ತಂಡ ಮೊದಲ ದಿನದಾಟದಂತ್ತಕ್ಕೆ 5 ವಿಕೆಟ್ ಕಳೆದುಕೊಂಡು 295 ರನ್ ಕಲೆಹಾಕಿದೆ. ತಂಡದ ಪರ ಮೂವರು ಅರ್ಧಶತಕ ಸಿಡಿಸಿದ್ದು, ದೇವದತ್ ಪಡಿಕ್ಕಲ್ (Devdutt Padikkal) ಕೇವಲ 4 ರನ್​ಗಳಿಂದ ಶತಕ ವಂಚಿತರಾದರೆ, ಕರುಣ್ ನಾಯರ್ ಹಾಗೂ ಸ್ಮರಣ್ ರವಿಚಂದ್ರನ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಇದರಲ್ಲಿ ಕರುಣ್ 73 ರನ್ ಬಾರಿಸಿ ಔಟಾದರೆ, ಸ್ಮರಣ್ 66 ರನ್ ಬಾರಿಸಿ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಕರ್ನಾಟಕಕ್ಕೆ ಕಳಪೆ ಆರಂಭ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿದ ಕರ್ನಾಟಕಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಿಧಾನಗತಿಯ ಬ್ಯಾಟಿಂಗ್​ಗೆ ಮುಂದಾದ ನಿಖಿನ್ ಜೋಶ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ 13 ರನ್​ಗಳಿಗೆ ಬೇರ್ಪಟ್ಟರು. ನಾಯಕ ಮಯಾಂಕ್ ಕೇವಲ 2 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿಖಿನ್ 12 ರನ್​ಗಳಿಗೆ ಸುಸ್ತಾದರು. ಆದರೆ ಆ ಬಳಿಕ ಒಂದಾದ ಅನುಭವಿ ಕರುಣ್ ನಾಯರ್ ಹಾಗೂ ಪಡಿಕ್ಕಲ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಕರುಣ್, ಪಡಿಕ್ಕಲ್ ಜೊತೆಯಾಟ

ಇಬ್ಬರು ಮೂರನೇ ವಿಕೆಟ್​ಗೆ ಶತಕದ ಜೊತೆಯಾಟವನ್ನಾಡಿದರು. ಈ ವೇಳೆ ಕರುಣ್ ನಾಯರ್ 9 ಬೌಂಡರಿ ಸಹಿತ 73 ರನ್ ಬಾರಿಸಿ ಔಟಾದರೆ, ದೇವದತ್ ಪಡಿಕ್ಕಲ್ ಶತಕದಂಚಿನಲ್ಲಿ ಎಡವಿ 96 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಪಡಿಕ್ಕಲ್ ಅವರ ಇನ್ನಿಂಗ್ಸ್​ನಲ್ಲಿ 11 ಬೌಂಡರಿಗಳು ಸೇರಿದ್ದವು. ಇವರಿಬ್ಬರು ಒಟ್ಟಾಗಿ ತಂಡವನ್ನು 172 ರನ್​ಗಳಿಗೆ ಕೊಂಡೊಯ್ದರು. ಈ ಜೋಡಿಯ ಬಳಿಕ ಬಂದ ಸ್ಮರಣ್​ಗೆ ಶ್ರೀಜಿತ್​ರಿಂದ ಬೆಂಬಲ ಸಿಗಲಿಲ್ಲ. ಶ್ರೀಜಿತ್ 5 ರನ್ ಬಾರಿಸಿ ಔಟಾದರು. ಆ ಬಳಿಕ ಬಂದ ಶ್ರೇಯಸ್ ಗೋಪಾಲ್​, ಸ್ಮರಣ್​ಗೆ ಉತ್ತಮ ಸಾಥ್ ನೀಡಿದರು.

Vaibhav Suryavanshi: 14ನೇ ವಯಸ್ಸಿಗೆ ರಣಜಿ ತಂಡದ ಉಪನಾಯಕನಾದ ವೈಭವ್ ಸೂರ್ಯವಂಶಿ

ಸ್ಮರಣ್ ಅರ್ಧಶತಕ

ಇವರಿಬ್ಬರು ಒಟ್ಟಾಗಿ ತಂಡವನ್ನು 200 ರನ್​ಗಳ ಗಡಿ ದಾಟಿಸಿದಲ್ಲದೆ, ದಿನದಾಟದ ಅಂತ್ಯದ ವೇಳೆಗೆ ಅಜೇಯರಾಗಿ ಉಳಿದು ತಂಡವನ್ನು 295 ರನ್​ಗಳಿಗೆ ಕೊಂಡೊಯ್ದರು. ಈ ವೇಳೆ ಸ್ಮರಣ್ ಅಜೇಯ 66 ರನ್ ಬಾರಿಸಿದರೆ, ಶ್ರೇಯಸ್ ಗೋಪಾಲ್ 38 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಇತ್ತ ಸೌರಾಷ್ಟ್ರ ಪರ ಬೌಲಿಂಗ್​ನಲ್ಲಿ ಮಿಂಚಿದ ಧರ್ಮೇಂದ್ರಸಿಂಹ ಜಡೇಜಾ ಅತ್ಯಧಿಕ 4 ವಿಕೆಟ್ ಕಬಳಿಸಿದರೆ, ಯುವರಾಜ್‌ಸಿಂಹ ದೋಡಿಯಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Wed, 15 October 25

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?