AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ

Ranji Final Shocker: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕ ಪರಾಸ್ ಡೋಗ್ರಾ, ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ತಲೆಗೆ ಡಿಚ್ಚಿ ಹೊಡೆದು ಅಸಭ್ಯ ವರ್ತನೆ ತೋರಿದ್ದಾರೆ. ಈ ಕ್ರೀಡಾ ಸ್ಫೂರ್ತಿ ವಿರೋಧಿ ನಡೆಗೆ ಬಿಸಿಸಿಐ ಪರಾಸ್ ಡೋಗ್ರಾಗೆ ಶೇ. 50ರಷ್ಟು ಪಂದ್ಯ ಶುಲ್ಕದ ದಂಡ ವಿಧಿಸಿದೆ.

ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ
Paras Dogra
ಪೃಥ್ವಿಶಂಕರ
|

Updated on: Feb 25, 2026 | 6:53 PM

Share

ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Karnataka vs J&K) ನಡುವೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ಒಂದೆಡೆ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ (Ranji Trophy Final) ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು ಎಂಟು ಬಾರಿಯ ರಣಜಿ ಚಾಂಪಿಯನ್ ಕರ್ನಾಟಕದ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದೆ. ಆದರೆ ಈ ಪಂದ್ಯದಲ್ಲಿ ಆಟದ ನಿಯಮದ ವಿರುದ್ಧ ನಡೆದುಕೊಂಡ ಜಮ್ಮು ಮತ್ತು ಕಾಶ್ಮೀರದ ನಾಯಕ ಪರಾಸ್ ಡೋಗ್ರಾ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಂಡಿದ್ದು, ಪಂದ್ಯ ಶುಲ್ಕದ ಶೇ. 50 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿದೆ.

ನಿಯಮ ಮುರಿದ ಪರಾಸ್ ಡೋಗ್ರಾ

ವಾಸ್ತವವಾಗಿ ರಣಜಿ ಫೈನಲ್ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಪರಾಸ್ ಡೋಗ್ರಾ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದನ್ನು ಗಮನಿಸಿದ ಅಂಪೈರ್​ಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಮಾತಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಇನ್ನಿಂಗ್ಸ್‌ನ 100 ನೇ ಓವರ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಸಿದ್ಧ್ ಕೃಷ್ಣ ಎಸೆತವನ್ನು ಪರಾಸ್ ಡೋಗ್ರಾ ಗಲ್ಲಿ ದಿಕ್ಕಿನಲ್ಲಿ ಆಡಿದರು. ಅಲ್ಲಿದ್ದ ಫೀಲ್ಡರ್ ಡೈವ್ ಮಾಡಿ ಚೆಂಡನ್ನು ತಡೆಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಹೀಗಾಗಿ ಚೆಂಡು ಬೌಂಡರಿ ಗೆರೆ ದಾಟಿತು. ಈ ನಡುವೆ ಸಿಲ್ಲಿ ಪಾಯಿಂಟ್‌ನಲ್ಲಿ ಫಿಲ್ಡಿಂಗ್ ಮಾಡುತ್ತಿದ್ದ ಕರ್ನಾಟಕದ ಕೆವಿ ಅನೀಶ್ ಹಾಗೂ ಪರಾಸ್ ಡೋಗ್ರಾ ನಡುವೆ ಮಾತಿನ ಚಕಮಕಿ ಪ್ರಾರಂಭವಾಗಿದೆ. ಇದೇ ವೇಳೆ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಕ್ಕಿ ಹೊಡೆದಿದ್ದಾರೆ.

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ

ಈ ಹಂತದಲ್ಲಿ, ಮಾಯಾಂಕ್ ಅಗರ್ವಾಲ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಆದರೆ, ಸ್ವಲ್ಪ ಸಮಯದವರೆಗೆ ವಾದ ಮುಂದುವರೆಯಿತು. ಕೊನೆಗೆ, ಅಂಪೈರ್‌ಗಳು ಮಧ್ಯಪ್ರವೇಶಿಸಿ ಡೋಗ್ರಾ ಮತ್ತು ಅನೀಶ್ ಅವರನ್ನು ಬೇರ್ಪಡಿಸಿದರು. ನಂತರ, ಪರಾಸ್ ಡೋಗ್ರಾ ಅನೀಶ್ ಕೆವಿ ಅವರ ಬಳಿ ಕ್ಷಮೆಯಾಚಿಸಲು ಪ್ರಯತ್ನಿಸಿದರು. ಆದರೆ ಬದಲಿ ಫೀಲ್ಡರ್ ಅನೀಶ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ. ಅಂಪೈರ್ ಪರಿಸ್ಥಿತಿಯನ್ನು ವಿವರಿಸುವ ಮೂಲಕ ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?