AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: 53 ಎಸೆತಗಳಲ್ಲಿ ಒಂದೇ ಒಂದು ರನ್​ಗಳಿಸಿಲ್ಲ, ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಜೈಸ್ವಾಲ್

Ranji Trophy 2021-22: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 393 ರನ್​ ಕಲೆಹಾಕಿತು.

Yashasvi Jaiswal: 53 ಎಸೆತಗಳಲ್ಲಿ ಒಂದೇ ಒಂದು ರನ್​ಗಳಿಸಿಲ್ಲ, ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಜೈಸ್ವಾಲ್
Yashasvi Jaiswal
TV9 Web
| Updated By: ಝಾಹಿರ್ ಯೂಸುಫ್|

Updated on: Jun 17, 2022 | 2:15 PM

Share

ಬೆಂಗಳೂರಿನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ಮುಂಬೈ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮುಂಬೈ ತಂಡದ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ (Yashasvi Jaiswal) ಮೊದಲ ರನ್​ಗಳಿಸಲು ಬರೋಬ್ಬರಿ 53 ಎಸೆತಗಳನ್ನು ಎದುರಿಸಿ ಸುದ್ದಿಯಾಗಿದ್ದರು. ಆದರೆ ಪಂದ್ಯದ ನಾಲ್ಕನೇ ದಿನ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸೆಮಿಫೈನಲ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ವಿಶೇಷ ಸಾಧನೆ ಮಾಡಿದ್ದಾರೆ 20 ರ ಹರೆಯದ ಯಶಸ್ವಿ ಜೈಸ್ವಾಲ್.

ಇದಕ್ಕೂ ಮುನ್ನ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ 103 ರನ್ ಗಳಿಸಿದ್ದ ಜೈಸ್ವಾಲ್, ಇದೀಗ ಸೆಮಿಫೈನಲ್​ನ ಮೊದಲ ಇನಿಂಗ್ಸ್​ನಲ್ಲಿ 100 ರನ್ ಬಾರಿಸಿದ್ದರು. ಅಲ್ಲದೆ 2ನೇ ಇನಿಂಗ್ಸ್​ನಲ್ಲಿ 115 ರನ್​ಗಳೊಂದಿಗೆ ಬ್ಯಾಟಿಂಗ್ ಮುಂದುವರೆಸಿದ್ದಾರೆ. ವಿಶೇಷ ಎಂದರೆ ಇದು ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಜೈಸ್ವಾಲ್ ಅವರ ಮೂರನೇ ಶತಕವಾಗಿದೆ. ಇನ್ನು ಜೈಸ್ವಾಲ್​ಗೆ ಉತ್ತಮ ಸಾಥ್ ನೀಡಿದ ಅರ್ಮಾನ್ ಜಾಫರ್ ಕೂಡ ಶತಕ ಬಾರಿಸಿ ಮಿಂಚಿದರು.

ಈ ಪಂದ್ಯದಲ್ಲಿ 54ನೇ ಎಸೆತದಲ್ಲಿ ಖಾತೆ ತೆರೆದಿದ್ದ ಯಶಸ್ವಿ ಜೈಸ್ವಾಲ್ ಮುಂದಿನ 187 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ರಕ್ಷಣಾತ್ಮಕವಾಗಿ ಹೇಗೆ ಆಡಬೇಕೆಂದು ಯುವ ಆಟಗಾರ ತೋರಿಸಿಕೊಟ್ಟರು. ಇದೀಗ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮುಂಬೈ ತಂಡವು ಸುಸ್ಥಿತಿಯಲ್ಲಿದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 393 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಉತ್ತರ ಪ್ರದೇಶ ತಂಡವು ಕೇವಲ 180 ರನ್​ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಮತ್ತೆ 2ನೇ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು 4ನೇ ದಿನದಾಟದಲ್ಲಿ 1 ವಿಕೆಟ್ ನಷ್ಟಕ್ಕೆ 296 ರನ್​ ಗಳಿಸಿದೆ. ಅದರಂತೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 509 ರನ್​ ಕಲೆಹಾಕಿದೆ. ಸದ್ಯ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಕ್ರೀಸ್​ನಲ್ಲಿದ್ದು, 4ನೇ ದಿನದಾಟದ ಅಂತ್ಯಕ್ಕೆ ಮುಂಬೈ ತಂಡವು ಡಿಕ್ಲೇರ್ ಘೋಷಿಸುವ ಸಾಧ್ಯತೆಯಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?