AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2023: ಬಲಿಷ್ಠ ತಂಡಗಳ ನಡುವೆ ನಾಳೆಯಿಂದ ರಣಜಿ ಟ್ರೋಫಿ ಫೈನಲ್ ಫೈಟ್

Ranji Trophy 2022-23: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಸೌರಾಷ್ಟ್ರ ಹಾಗೂ ಬಂಗಾಳ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

Ranji Trophy 2023: ಬಲಿಷ್ಠ ತಂಡಗಳ ನಡುವೆ ನಾಳೆಯಿಂದ ರಣಜಿ ಟ್ರೋಫಿ ಫೈನಲ್ ಫೈಟ್
Ranji Trophy 2022-23
TV9 Web
| Edited By: |

Updated on:Feb 15, 2023 | 5:17 PM

Share

Ranji Trophy 2022-23: ರಣಜಿ ಟೂರ್ನಿಯ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 16 ರಿಂದ ಶುರುವಾಗಲಿರುವ ಅಂತಿಮ ಹಣಾಹಣಿಯಲ್ಲಿ ಬಂಗಾಳ ಹಾಗೂ ಸೌರಾಷ್ಟ್ರ (Bengal vs Saurashtra) ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್​ನಲ್ಲಿ ಮಧ್ಯಪ್ರದೇಶ್ ತಂಡವನ್ನು ಬರೋಬ್ಬರಿ 306 ರನ್​ಗಳಿಂದ ಸೋಲಿಸಿ ಬಂಗಾಳ ತಂಡವು ಫೈನಲ್ ಪ್ರವೇಶಿಸಿತು. ಹಾಗೆಯೇ 2ನೇ ಸೆಮಿಫೈನಲ್​ನಲ್ಲಿ ಕರ್ನಾಟಕ ತಂಡದ ವಿರುದ್ಧ ಸೌರಾಷ್ಟ್ರ ತಂಡ 4 ವಿಕೆಟ್​ಗಳಿಂದ ಜಯ ಸಾಧಿಸಿ ಅಂತಿಮ ಸುತ್ತಿಗೆ ಎಂಟ್ರಿಕೊಟ್ಟಿತು.

ಇದೀಗ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಸೌರಾಷ್ಟ್ರ ಹಾಗೂ ಬಂಗಾಳ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇತ್ತ ಅಭಿಮನ್ಯು ಈಶ್ವರನ್, ಮನೋಜ್ ತಿವಾರಿ, ಶಹಬಾಝ್ ಅಹ್ಮದ್, ಸಂದೀಪ್ ಕುಮಾರ್ ಬಂಗಾಳ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದರೆ, ಅತ್ತ ಸೌರಾಷ್ಟ್ರ ತಂಡದಲ್ಲಿ ಶೆಲ್ಡನ್ ಜಾಕ್ಸನ್, ಅರ್ಪಿತ್ ವಾಸವಾಡ, ಪ್ರೇರಕ್ ಮಂಕಡ್​ನಂತಹ ಸ್ಟಾರ್ ಆಟಗಾರರಿದ್ದಾರೆ.

ಇದನ್ನೂ ಓದಿ
Image
India vs Australia 2nd Test: ಟೀಮ್ ಇಂಡಿಯಾಗೆ ಸ್ಟಾರ್ ಆಟಗಾರ ಎಂಟ್ರಿ
Image
Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್
Image
RCB ತಂಡದ ಸ್ಮೈಲ್ ಸುಂದರಿ ಸ್ಮೃತಿ ಮಂಧಾನ ಅವರ ಶೈಕ್ಷಣಿಕ ಅರ್ಹತೆ ಏನು ಗೊತ್ತಾ?
Image
WPL 2023: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ 5 ತಂಡಗಳು ಹೀಗಿವೆ

ಇನ್ನು ಬೌಲಿಂಗ್ ವಿಭಾಗದಲ್ಲಿ ಸೌರಾಷ್ಟ್ರ ತಂಡದಲ್ಲಿ ಜಯದೇವ್ ಉನಾದ್ಕಟ್, ಚೇತನ್ ಸಕರಿಯಾ, ಕುಶಾಂಗ್ ಪಟೇಲ್​ನಂತಹ ಅತ್ಯುತ್ತಮ ಬೌಲರ್​ಗಳ ಲೈನಪ್ ಇದೆ. ಹಾಗೆಯೇ ಬಂಗಾಳ ಪರ ಮುಖೇಶ್ ಕುಮಾರ್, ಶಹಬಾಝ್ ಅಹ್ಮದ್, ಆಕಾಶ್ ದೀಪ್​ನಂತಹ ಅತ್ಯುತ್ತಮ ಬೌಲರ್​ಗಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಹೀಗಾಗಿ ಈ ಬಾರಿ ರಣಜಿ ಟ್ರೋಫಿಯನ್ನು ಯಾರು ಮುಡಿಗೇರಿಸಿಕೊಳ್ಳುತ್ತಾರೆ ಎಂಬ ಕುತೂಹಲ ಕ್ರಿಕೆಟ್​ ಪ್ರೇಮಿಗಳಲ್ಲಿ ಮನೆ ಮಾಡಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ಸ್ಟಾರ್​ನಲ್ಲೂ ಲೈವ್ ಪ್ರಸಾರ ಇರಲಿದೆ.

ಬಂಗಾಳ ತಂಡ: ಕರಣ್ ಲಾಲ್, ಅಭಿಮನ್ಯು ಈಶ್ವರನ್, ಸುದೀಪ್ ಕುಮಾರ್ ಘರಾಮಿ, ಅನುಸ್ತುಪ್ ಮಜುಂದಾರ್, ಮನೋಜ್ ತಿವಾರಿ(ನಾಯಕ), ಶಹಬಾಝ್ ಅಹ್ಮದ್, ಅಭಿಷೇಕ್ ಪೊರೆಲ್(ವಿಕೆಟ್ ಕೀಪರ್), ಪ್ರದೀಪ್ತ ಪ್ರಮಾಣಿಕ್, ಆಕಾಶ್ ದೀಪ್, ಮುಖೇಶ್ ಕುಮಾರ್, ಇಶಾನ್ ಪೊರೆಲ್, ರಿಟಿಕ್ ಚಟರ್ಜಿ, ರವಿಕಾಂತ್ ಸಿಂಗ್, ಕೌಶಿಕ್ ಘೋಷ್, ಸಯಾನ್ ಮೊಂಡಲ್, ಅಭಿಷೇಕ್ ದಾಸ್, ಅಂಕಿತ್ ಮಿಶ್ರಾ, ಕಾಜಿ ಸೈಫಿ

ಸೌರಾಷ್ಟ್ರ ತಂಡ: ಹಾರ್ವಿಕ್ ದೇಸಾಯಿ(ವಿಕೆಟ್ ಕೀಪರ್), ಸ್ನೆಲ್ಲ್ ಪಟೇಲ್, ವಿಶ್ವರಾಜ್ ಜಡೇಜಾ, ಶೆಲ್ಡನ್ ಜಾಕ್ಸನ್, ಅರ್ಪಿತ್ ವಾಸವಾಡ (ನಾಯಕ), ಚಿರಾಗ್ ಜಾನಿ, ಪ್ರೇರಕ್ ಮಂಕಡ್, ಪಾರ್ಥ್ ಭುತ್, ಧರ್ಮೇಂದ್ರಸಿನ್ಹ್ ಜಡೇಜಾ, ಚೇತನ್ ಸಕರಿಯಾ, ಕುಶಾಂಗ್ ಪಟೇಲ್, ಸಮರ್ಥ್ ವ್ಯಾಸ್, ತರಂಗ್ ಗೊಟಮ್ಹೆಲ್, ತರಂಗ್ ಗೊಟಮ್ಹೆಲ್ , ಜೈ ಗೋಹಿಲ್, ನವನೀತ್ ವೋರಾ, ಯುವರಾಜ್‌ಸಿಂಹ ದೋಡಿಯಾ.

Published On - 5:16 pm, Wed, 15 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ