AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2022-23: 4 ಅರ್ಧಶತಕ, 1 ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

Karnataka vs Uttarakhand: ಆ ಬಳಿಕ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ (83) ಹಾಗೂ ರವಿಕುಮಾರ್ ಸಮರ್ಥ್ (82) ಉತ್ತಮ ಆರಂಭ ಒದಗಿಸಿದ್ದರು.

Ranji Trophy 2022-23: 4 ಅರ್ಧಶತಕ, 1 ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ
Shreyas Gopal
TV9 Web
| Edited By: |

Updated on:Feb 02, 2023 | 7:24 PM

Share

Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ 3ನೇ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಬೃಹತ್ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಉತ್ತರಾಖಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಯುವ ವೇಗಿ ವೆಂಕಟೇಶ್ ದಾಳಿಗೆ ತತ್ತರಿಸಿತು. ಕರಾರುವಾಕ್ ಬೌಲಿಂಗ್ ನಡೆಸಿದ್ದ ಎಂ. ವೆಂಕಟೇಶ್ 36 ರನ್​ಗಳಿಗೆ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಉತ್ತರಾಖಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 116 ರನ್​ಗಳಿಗೆ ಆಲೌಟ್ ಆಗಿತ್ತು.

ಆ ಬಳಿಕ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ (83) ಹಾಗೂ ರವಿಕುಮಾರ್ ಸಮರ್ಥ್ (82) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ 69 ರನ್​ಗಳ ಅಮೂಲ್ಯ ಕೊಡುಗೆ ನೀಡಿದರು. ಇನ್ನು ನಿಕಿನ್ ಜೋಸ್ 62 ರನ್ ಬಾರಿಸಿದರು. ಪರಿಣಾಮ ಕರ್ನಾಟಕ ತಂಡದ ಮೊತ್ತವು 3 ವಿಕೆಟ್ ನಷ್ಟಕ್ಕೆ 300 ರ ಗಡಿದಾಟಿತು.

ಈ ನಾಲ್ಕು ಅರ್ಧಶತಕಗಳ ಬಳಿಕ ಮನೀಷ್ ಪಾಂಡೆ 39 ರನ್ ಬಾರಿಸಿ ಔಟಾದರೆ, ಶ್ರೇಯಸ್ ಗೋಪಾಲ್ ಅತ್ಯಾದ್ಭುತ ಇನಿಂಗ್ಸ್​ ಆಡಿದರು. ಉತ್ತರಾಖಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಶ್ರೇಯಸ್ ಭರ್ಜರಿ ಶತಕ ಸಿಡಿಸಿದರು. ಅಷ್ಟೇ ಅಲ್ಲದೆ ಕೆಳಕ್ರಮಾಂಕದ ಆಟಗಾರರ ಜೊತೆಗೂಡಿ ರನ್​ ಕಲೆಹಾಕುತ್ತಾ ಸಾಗಿದರು. ಶ್ರೇಯಸ್ ಗೋಪಾಲ್ ಅವರ ಈ ಅತ್ಯುತ್ತಮ ಆಟದ ಫಲವಾಗಿ ಕರ್ನಾಟಕ ತಂಡದ ಸ್ಕೋರ್ 600 ರನ್​ಗಳನ್ನು ದಾಟಿತು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಇದನ್ನೂ ಓದಿ: Shubman Gill: 1 ಶತಕದೊಂದಿಗೆ 10 ದಾಖಲೆಗಳನ್ನು ನಿರ್ಮಿಸಿದ ಶುಭ್​ಮನ್ ಗಿಲ್

ಆದರೆ ಈ ಹಂತದಲ್ಲಿ ವಿಧ್ವತ್ ಕಾವೇರಪ್ಪ ಹಾಗೂ ವಿಜಯ್​ಕುಮಾರ್ ವೈಶಾಖ್ ಬೇಗನೆ ಔಟಾದರು. ಪರಿಣಾಮ ಕರ್ನಾಟಕ ತಂಡವು 606 ರನ್​ಗಳಿಗೆ ಆಲೌಟ್ ಆಯಿತು. ಇನ್ನು ಕೊನೆಯವರೆಗೂ ಕ್ರೀಸ್ ಕಚ್ಚಿ ನಿಂತಿದ್ದ ಶ್ರೇಯಸ್ ಗೋಪಾಲ್ 288 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 16 ಫೋರ್​ನೊಂದಿಗೆ ಅಜೇಯ 161 ರನ್​ ಬಾರಿಸಿ ಮಿಂಚಿದರು.

ಇದೀಗ 490 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಉತ್ತರಾಖಂಡ್ ತಂಡವು 3ನೇ ದಿನದಾಟದ ಅಂತ್ಯಕ್ಕೆ 103 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಸದ್ಯ 384 ರನ್​ಗಳ ಹಿನ್ನಡೆಯಲ್ಲಿರುವ ಉತ್ತರಾಖಂಡ್ ತಂಡವು ಸೋಲಿನ ಭೀತಿಯಲ್ಲಿದ್ದು, ಇದರೊಳಗೆ ಕರ್ನಾಟಕ ತಂಡವು 7 ವಿಕೆಟ್​ ಪಡೆದರೆ ಇನಿಂಗ್ಸ್​ ಜಯ ಸಾಧಿಸಬಹುದು.

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ನಿಕಿನ್ ಜೋಸ್ , ಮನೀಶ್ ಪಾಂಡೆ , ಮುರಳೀಧರ ವೆಂಕಟೇಶ್ , ಶರತ್ ಬಿಆರ್​ ( ವಿಕೆಟ್ ಕೀಪರ್ ) , ಕೃಷ್ಣಪ್ಪ ಗೌತಮ್ , ಶ್ರೇಯಸ್ ಗೋಪಾಲ್ , ವಿಜಯ್ ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ.

ಉತ್ತರಾಖಂಡ್ ಪ್ಲೇಯಿಂಗ್ ಇಲೆವೆನ್: ಆದಿತ್ಯ ತಾರೆ (ವಿಕೆಟ್ ಕೀಪರ್) , ಜೀವನ್​ಜೋತ್ ಸಿಂಗ್ (ನಾಯಕ) , ಕುನಾಲ್ ಚಂಡೇಲಾ , ಅಖಿಲ್ ರಾವತ್ , ಅವನೀಶ್ ಸುಧಾ , ಅಭಯ್ ನೇಗಿ , ಸ್ವಪ್ನಿಲ್ ಸಿಂಗ್ , ದಿಕ್ಷಾಂಶು ನೇಗಿ , ಮಯಾಂಕ್ ಮಿಶ್ರಾ , ದೀಪಕ್ ಧಪೋಲಾ , ನಿಖಿಲ್ ಕೊಹ್ಲಿ.

Published On - 7:23 pm, Thu, 2 February 23

Follow Us
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ