AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2022: ಭರ್ಜರಿ ಜಯದೊಂದಿಗೆ ಪ್ರೀ ಕ್ವಾರ್ಟರ್​ ಫೈನಲ್​ಗೆ ಎಂಟ್ರಿಕೊಟ್ಟ ಕರ್ನಾಟಕ

Ranji Trophy 2022: ಪುದುಚೇರಿ ವಿರುದ್ದ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ದೇವದತ್ ಪಡಿಕ್ಕಲ್ 178 ರನ್​ ಬಾರಿಸಿದ್ದರು. ಇದಾದ ಬಳಿಕ ನಾಯಕ ಮನೀಷ್ ಪಾಂಡೆ ಕೂಡ ಭರ್ಜರಿ ಶತಕ (107) ಸಿಡಿಸಿದ್ದರು.

Ranji Trophy 2022: ಭರ್ಜರಿ ಜಯದೊಂದಿಗೆ ಪ್ರೀ ಕ್ವಾರ್ಟರ್​ ಫೈನಲ್​ಗೆ ಎಂಟ್ರಿಕೊಟ್ಟ ಕರ್ನಾಟಕ
Ranji Trophy 2022
TV9 Web
| Edited By: |

Updated on: Mar 06, 2022 | 2:36 PM

Share

ರಣಜಿ ಟ್ರೋಫಿಯ 2022ರ (Ranji Trophy 2022) ಸೀಸನ್​ನಲ್ಲಿ ಸತತ ಎರಡು ಜಯ ಸಾಧಿಸುವ ಮೂಲಕ ಕರ್ನಾಟಕ (Karnataka) ತಂಡವು ಪ್ರೀ ಕ್ವಾರ್ಟರ್​ ಫೈನಲ್ ಪ್ರವೇಶಿಸಿದೆ. ಮೊದಲ ಪಂದ್ಯದಲ್ಲಿ ರೈಲ್ವೇಸ್ ವಿರುದ್ದ ಡ್ರಾ ಮಾಡಿಕೊಂಡಿದ್ದ ಕರ್ನಾಟಕ ತಂಡವು ಆ ಬಳಿಕ ಎರಡು ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದುಕೊಂಡಿತು. ಜಮ್ಮು-ಕಾಶ್ಮೀರ ವಿರುದ್ದ ನಡೆದ ಪಂದ್ಯದಲ್ಲಿ ಕರ್ನಾಟಕ ಪರ ಕರುಣ್ ನಾಯರ್ 175 ರನ್​ ಬಾರಿಸಿ ಮಿಂಚಿದ್ದರು. ಇನ್ನು ಬೌಲಿಂಗ್​ನಲ್ಲಿ ಪ್ರಸಿದ್ಧ್ ಕೃಷ್ಣ ಎರಡು ಇನಿಂಗ್ಸ್ ಮೂಲಕ 10 ವಿಕೆಟ್ ಕಬಳಿಸಿದ್ದರು. ಈ ಮೂಲಕ ಜಮ್ಮು-ಕಾಶ್ಮೀರ ವಿರುದ್ದ ಕರ್ನಾಟಕ ತಂಡವು 117 ರನ್​ಗಳ ಜಯ ಸಾಧಿಸಿತ್ತು.

ಇನ್ನು ಪುದುಚೇರಿ ವಿರುದ್ದ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ದೇವದತ್ ಪಡಿಕ್ಕಲ್ 178 ರನ್​ ಬಾರಿಸಿದ್ದರು. ಇದಾದ ಬಳಿಕ ನಾಯಕ ಮನೀಷ್ ಪಾಂಡೆ ಕೂಡ ಭರ್ಜರಿ ಶತಕ (107) ಸಿಡಿಸಿದ್ದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ನಷ್ಟಕ್ಕೆ 453 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿತ್ತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಪುದುಚೇರಿ ತಂಡವು ಕೃಷ್ಣಪ್ಪ ಗೌತಮ್ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಕೇವಲ 241 ರನ್​ಗಳಿಗೆ ಆಲೌಟ್ ಆಯಿತು. ಫಾಲೋಆನ್​ ಪಡೆದು 2ನೇ ಇನಿಂಗ್ಸ್​ ಆರಂಭಿಸಿದ ಪುದುಚೇರಿ ತಂಡವು ಈ ಬಾರಿ ಶ್ರೇಯಸ್ ಗೋಪಾಲ್ ಸ್ಪಿನ್ ಮೋಡಿಗೆ ಬಾಗಿತು. ಅದರಂತೆ 2ನೇ ಇನಿಂಗ್ಸ್​ನಲ್ಲಿ 192 ರನ್​ಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್​ ಹಾಗೂ 20 ರನ್​ಗಳಿಂದ ಸೋಲೋಪ್ಪಿಕೊಂಡಿತು. ಕರ್ನಾಟಕ ಪರ ಕೃಷ್ಣಪ್ಪ ಗೌತಮ್ ಹಾಗೂ ಶ್ರೇಯಸ್ ಗೋಪಾಲ್ 2 ಇನಿಂಗ್ಸ್​​ಗಳಲ್ಲಿ ತಲಾ 5 ವಿಕೆಟ್ ಉರುಳಿಸಿ ಮಿಂಚಿದ್ದರು. ಈ ಎರಡು ಭರ್ಜರಿ ಜಯದೊಂದಿಗೆ ಗ್ರೂಪ್ ಸಿ ನಲ್ಲಿ ಅಗ್ರ ತಂಡವಾಗಿ ಕರ್ನಾಟಕವು ಪ್ರೀ ಕ್ವಾರ್ಟರ್​ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಕರ್ನಾಟಕ ತಂಡ: ರವಿಕುಮಾರ್ ಸಮರ್ಥ್ , ದೇವದತ್ ಪಡಿಕ್ಕಲ್ , ಕರುಣ್ ನಾಯರ್ , ಕೃಷ್ಣಮೂರ್ತಿ ಸಿದ್ಧಾರ್ಥ್ , ಮನೀಶ್ ಪಾಂಡೆ (ನಾಯಕ) , ಶರತ್ ಬಿಆರ್ (ವಿಕೆಟ್ ಕೀಪರ್) , ಶ್ರೇಯಸ್ ಗೋಪಾಲ್ , ಕೃಷ್ಣಪ್ಪ ಗೌತಮ್ , ವಿದ್ಯಾಧರ್ ಪಾಟೀಲ್ , ವಿಧ್ವತ್ ಕಾವೇರಪ್ಪ , ಪ್ರಸಿದ್ಧ್ ಕೃಷ್ಣ, ಮೋನಿತ್ ಮೋರೆ , ಡಿ ನಿಶ್ಚಲ್ , ಕೆ ಸಿ ಕಾರಿಯಪ್ಪ , ಜಗದೀಶ ಸುಚಿತ್ , ವಿಜಯ್ ಕುಮಾರ್ ವೈಶಾಕ್ , ಶ್ರೀನಿವಾಸ್ ಶರತ್ , ಮುರಳೀಧರ ವೆಂಕಟೇಶ್ , ಶುಭಾಂಗ್ ಹೆಗ್ಡೆ , ಅನೀಶ್ವರ್ ಗೌತಮ್

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Ranji Trophy 2022: Karnataka enter quarterfinal)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ