AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಕರ್ನಾಟಕದ 7 ವಿಕೆಟ್ ಕಿತ್ತ ಯುಪಿ ತಂಡದ ಇಬ್ಬರು ಬೌಲರ್ಸ್​! ಮೊದಲ ದಿನದಾಟ ಹೀಗಿತ್ತು

Ranji Trophy: ಈ ಪಂದ್ಯದಲ್ಲಿ ಕರ್ನಾಟಕದ ದಿಗ್ಗಜ ಬ್ಯಾಟ್ಸ್‌ಮನ್‌ಗಳಾದ ಮಯಾಂಕ್ ಅಗರ್ವಾಲ್ ಮತ್ತು ಕರುಣ್ ನಾಯರ್ ಕೂಡ ದೊಡ್ಡ ಇನ್ನಿಂಗ್ಸ್ ಆಡಲು ವಿಫಲರಾದರೆ, ನಾಯಕ ಮನೀಶ್ ಪಾಂಡೆ ಕೂಡ ಯಶಸ್ಸು ಕಾಣಲಿಲ್ಲ.

Ranji Trophy: ಕರ್ನಾಟಕದ 7 ವಿಕೆಟ್ ಕಿತ್ತ ಯುಪಿ ತಂಡದ ಇಬ್ಬರು ಬೌಲರ್ಸ್​! ಮೊದಲ ದಿನದಾಟ ಹೀಗಿತ್ತು
ಕರ್ನಾಟಕ ಕ್ರಿಕೆಟ್ ತಂಡ
TV9 Web
| Updated By: ಪೃಥ್ವಿಶಂಕರ|

Updated on: Jun 06, 2022 | 8:42 PM

Share

ಕರ್ನಾಟಕ ಕ್ರಿಕೆಟ್ ತಂಡ (Karnataka Cricket Team) ರಣಜಿ ಟ್ರೋಫಿ (Ranji Trophy) ಪ್ರಶಸ್ತಿಗಾಗಿ 7 ವರ್ಷಗಳಿಂದ ಕಾಯುತ್ತಿದೆ. ಉತ್ತರ ಪ್ರದೇಶದ ಕಾಯುವಿಕೆ ಅದಕ್ಕಿಂತಲೂ ದೀರ್ಘವಾಗಿದೆ. ಉತ್ತರ ಪ್ರದೇಶ (UP Cricket Team) 2005-06ರಲ್ಲಿ ತನ್ನ ಏಕೈಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕರ್ನಾಟಕ ಬಹು ಬಾರಿ ಚಾಂಪಿಯನ್ ಆಗಿದ್ದು, ಯುಪಿ ಎರಡನೇ ಬಾರಿಗೆ ಟ್ರೋಫಿಗೆ ಕೈ ಹಾಕಲು ಕಾಯುತ್ತಿದೆ. ಇವೆರಡರಲ್ಲಿ ಯಾವುದು ಸಕ್ಸಸ್ ಆಗುತ್ತೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಆದರೆ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ಮತ್ತು ಯುಪಿ ಪರಸ್ಪರ ಪೈಪೋಟಿ ನಡೆಸುತ್ತಿದ್ದು, ಉತ್ತರ ಪ್ರದೇಶ ಯಶಸ್ಸಿಗೆ ಜಾಸ್ತಿ ಹತ್ತಿರವಾಗಿದೆ. ಆಲೂರಿನಲ್ಲಿ ಆರಂಭವಾದ ರಣಜಿ ಟ್ರೋಫಿ 2022 ರ ಕ್ವಾರ್ಟರ್ ಫೈನಲ್‌ನ ಮೊದಲ ದಿನದಂದು ಉತ್ತರ ಪ್ರದೇಶದ ಸೌರಭ್ ಕುಮಾರ್ ಮತ್ತು ಶಿವಂ ಮಾವಿ (Saurabh Kumar and Shivam Mavi) ಒಟ್ಟಾಗಿ ಕರ್ನಾಟಕದ ಬ್ಯಾಟಿಂಗ್ ಬೆನ್ನೇಲುಬನ್ನು ಮುರಿದಿದ್ದಾರೆ.

ಸೋಮವಾರ, ಜೂನ್ 6, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮೈದಾನ (Karnataka State Cricket Association ground)ದಲ್ಲಿ, ಯುಪಿ ನಾಯಕ ಕರಣ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆರಂಭದಲ್ಲಿ ಈ ನಿರ್ಧಾರಕ್ಕೆ ಹಿನ್ನಡೆ ಎನಿಸಿತು, ಆದರೆ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಮತ್ತು ವೇಗದ ಬೌಲರ್ ಶಿವಂ ಮಾವಿ ದಾಳಿಗಿಳಿದ ಕೂಡಲೇ ಕರ್ನಾಟಕದ ಸ್ಥಿತಿ ಹದಗೆಟ್ಟಿತು. ಮೊದಲ ದಿನದಾಟದ ಅಂತ್ಯಕ್ಕೆ ಕರ್ನಾಟಕ ಏಳು ವಿಕೆಟ್‌ಗೆ 213 ರನ್ ಗಳಿಸಿದೆ.

ಇದನ್ನೂ ಓದಿ:Ranji Trophy 2022, Quarterfinals: ರಣಜಿ ಕ್ವಾರ್ಟರ್‌-ಫೈನಲ್‌: ಟಾಸ್ ಗೆದ್ದ ಉತ್ತರ ಪ್ರದೇಶ: ಕರ್ನಾಟಕ ಉತ್ತಮ ಆರಂಭ

ಇದನ್ನೂ ಓದಿ
Image
ICC Awards: ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Image
IND vs SA: 6 ವರ್ಷ, 56 ಟಿ20 ಪಂದ್ಯ; ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ನಾಯಕನ ಚೊಚ್ಚಲ ಪಂದ್ಯವಿದು
Image
ಭಾರತಕ್ಕೆ ಬಂದಾಗಲೆಲ್ಲ ಇಂಜುರಿಗೊಳಗಾಗುತ್ತೇನೆ; ಇಲ್ಲೇ ನನಗ್ಯಾವುದೋ ಶಾಪ ತಟ್ಟಿರಬೇಕು; ಮಿಚೆಲ್ ಮಾರ್ಷ್

ಸೌರಭ್ ಮತ್ತು ಶಿವಂ ಬೆಂಕಿ ಬೌಲಿಂಗ್

ಸ್ಪಿನ್ನರ್ ಸೌರಭ್ ಅವರ ಸ್ಪಿನ್ ಅನ್ನು ಅರ್ಥಮಾಡಿಕೊಳ್ಳುವುದು ಕರ್ನಾಟಕದ ಬ್ಯಾಟ್ಸ್‌ಮನ್‌ಗಳಿಗೆ ಕಷ್ಟದ ಕೆಲಸವಾಗಿತ್ತು. 67 ರನ್ ನೀಡಿ 4 ವಿಕೆಟ್ ಪಡೆದರು. ಇದರಲ್ಲಿ ಆರಂಭಿಕ ರವಿಕುಮಾರ್ ಸಮರ್ಥ್ ಮತ್ತು ನಾಯಕ ಮನೀಶ್ ಪಾಂಡೆಯಂತಹ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳು ಸೇರಿದ್ದರು. ಅದೇ ವೇಳೆ ಯುವ ವೇಗಿ ಶಿವಂ ಮಾವಿ ಕೂಡ 40 ರನ್ ನೀಡಿ ಮೂರು ವಿಕೆಟ್ ಪಡೆದರು. ಮಯಾಂಕ್ ಅಗರ್ವಾಲ್ ಮತ್ತು ಕರುಣ್ ನಾಯರ್ ಅವರಂತಹ ದಿಗ್ಗಜರನ್ನು ಪೆವಿಲಿಯನ್‌ಗೆ ಕಳುಹಿಸಿದರು.

ಸಮರ್ಥ್ ಹೊರತುಪಡಿಸಿ ಇತರರು ವಿಫಲ

ಕರ್ನಾಟಕದ ಪರ ಆರಂಭಿಕ ರವಿಕುಮಾರ್ ಸಮರ್ಥ್ (57) ಮಾತ್ರ ಸುಸ್ಥಿರ ಬ್ಯಾಟಿಂಗ್‌ಗೆ ಶಕ್ತರಾದರು. ರವಿಕುಮಾರ್ ಮತ್ತು ಮಯಾಂಕ್ ಅಗರ್ವಾಲ್ (10) ಮೊದಲ ವಿಕೆಟ್‌ಗೆ 57 ರನ್ ಸೇರಿಸಿದರು. ಆದಾಗ್ಯೂ, ಈ ಜೊತೆಯಾಟದ ಸಮಯದಲ್ಲಿ ಅಗರ್ವಾಲ್ ಲಯದಲ್ಲಿ ಕಾಣಿಸಿಕೊಂಡಿಲ್ಲ. ರವಿಕುಮಾರ್ ಕೇವಲ 54 ಎಸೆತಗಳಲ್ಲಿ ಸೌರಭ್ ಎಸೆತದಲ್ಲಿ ಅರ್ಧಶತಕ ಪೂರೈಸಿ, ಅವರಿಗೆ ಬಲಿಯಾದರು. ರವಿಕುಮಾರ್ 81 ಎಸೆತಗಳನ್ನು ಎದುರಿಸಿ 10 ಬೌಂಡರಿ ಬಾರಿಸಿದರು. ಕೆಲವೇ ಸಮಯದಲ್ಲಿ ನಾಯರ್ (29) ಅವರನ್ನು ಬೌಲ್ಡ್ ಮಾಡುವ ಮೂಲಕ ಮಾವಿ ಕರ್ನಾಟಕಕ್ಕೆ ಮೂರನೇ ಹೊಡೆತ ನೀಡಿದರು.

ಇದಾದ ನಂತರ ನಾಯಕ ಪಾಂಡೆ (27) ಮತ್ತು ಕೆ.ಸಿದ್ಧಾರ್ಥ (37) ತಂಡದ ಸ್ಕೋರ್ ಅನ್ನು ಮೂರು ವಿಕೆಟ್‌ಗೆ 163 ರನ್‌ಗಳಿಗೆ ಕೊಂಡೊಯ್ದರು. 56ನೇ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಪಾಂಡೆ ಮತ್ತು ಶ್ರೀನಿವಾಸ್ ಶರತ್ (00) ಅವರನ್ನು ಪೆವಿಲಿಯನ್‌ಗೆ ಕಳುಹಿಸುವ ಮೂಲಕ ಸೌರಭ್ ಕರ್ನಾಟಕಕ್ಕೆ ಎರಡು ಹೊಡೆತ ನೀಡಿದರು. ಸೌರಭ್ ಮೇಲೆ ಶ್ರೇಯಸ್ ಒಂದು ಬೌಂಡರಿ ಮತ್ತು ಸಿಕ್ಸರ್ ಬಾರಿಸಿದರು ಆದರೆ ಮಾವಿ ಸಿದ್ಧಾರ್ಥ್ ಬೌಲ್ಡ್ ಮಾಡುವ ಮೂಲಕ ಅವರ ಮೂರನೇ ವಿಕೆಟ್ ಪಡೆದರು. ಹವಾಮಾನ ವೈಪರೀತ್ಯದಿಂದಾಗಿ ಮೊದಲ ದಿನ ಕೇವಲ 72 ಓವರ್‌ಗಳು ಮಾತ್ರ ಆಡಲು ಸಾಧ್ಯವಾಯಿತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ