AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka vs Uttar Pradesh: ಯುಪಿ ಬೌಲಿಂಗ್ ಬಿರುಗಾಳಿಗೆ ಕರ್ನಾಟಕ ತತ್ತರ: ಮನೀಶ್ ಪಡೆ ಕೇವಲ 253 ರನ್​ಗೆ ಆಲೌಟ್

Ranji Trophy 2022, Quarterfinals: ಕರ್ನಾಟಕ ತಂಡ ಉತ್ತರ ಪ್ರದೇಶ (Karnataka vs Uttar Pradesh) ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ಮೊದಲ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿದ್ದ ಮನೀಶ್ ಪಾಂಡೆ (Manish Pandey) ಬಳಗ ಇಂದು ಎರಡನೇ ದಿನದ ಆರಂಭದಲ್ಲೇ 253 ರನ್​ಗೆ ಆಲೌಟ್ ಆಗಿದೆ.

Karnataka vs Uttar Pradesh: ಯುಪಿ ಬೌಲಿಂಗ್ ಬಿರುಗಾಳಿಗೆ ಕರ್ನಾಟಕ ತತ್ತರ: ಮನೀಶ್ ಪಡೆ ಕೇವಲ 253 ರನ್​ಗೆ ಆಲೌಟ್
Manish Pandey KAR vs UP Ranji Trophy
TV9 Web
| Updated By: Vinay Bhat|

Updated on: Jun 07, 2022 | 10:48 AM

Share

ಆಲೂರಿನ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಕ್ವಾರ್ಟರ್‌ಫೈನಲ್ (Ranji Trophy 2022, Quarterfinals) ಪಂದ್ಯದಲ್ಲಿ ಕರ್ನಾಟಕ ತಂಡ ಉತ್ತರ ಪ್ರದೇಶ (Karnataka vs Uttar Pradesh) ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ಮೊದಲ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿದ್ದ ಮನೀಶ್ ಪಾಂಡೆ (Manish Pandey) ಬಳಗ ಇಂದು ಎರಡನೇ ದಿನದ ಆರಂಭದಲ್ಲೇ 253 ರನ್​ಗೆ ಆಲೌಟ್ ಆಗಿದೆ. ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ರಾಜ್ಯ ತಂಡದ ಬ್ಯಾಟರ್​ಗಳನ್ನು ಬೆನ್ನು ಬಿಡದೆ ಕಾಡಿದರು. ಇದರ ನಡುವೆಯೂ ಶ್ರೇಯಸ್ ಗೋಪಾಲ್ ಏಕಾಂಗಿ ಹೋರಾಟ ನಡೆಸಿ ಅರ್ಧಶತಕದ ಕಾಣಿಕೆ ನೀಡಿದರು. ರವಿಕುಮಾರ್ ಸಮರ್ಥ್ ಕೂಡ 57 ರನ್ ಗಳಿಸಿದರು. ಉಳಿದವರು ನಿರೀಕ್ಷೆಗೆ ತಕ್ಕ  ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಇದೀಗ ಕರ್ನಾಟಕದ ಬೌಲರ್​ಗಳ ಮೇಲೆ ಒತ್ತಡ ಹೆಚ್ಚಾಗಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಉತ್ತರಪ್ರದೇಶ ತಂಡದ ನಾಯಕ ಕರಣ್ ಶರ್ಮಾ ಅವರ ಯೋಜನೆ ಫಲಿಸಿತು. ಅವರ ಬೌಲಿಂಗ್‌ ಪ್ರಯೋಗಗಳು ಫಲ ನೀಡಿದವು. ಆತಿಥೇಯ ಬ್ಯಾಟರ್‌ಗಳು ಉತ್ತಮ ಆರಂಭ ಕಂಡರೂ ದೊಡ್ಡ ಜೊತೆಯಾಟಗಳನ್ನು ದಾಖಲಿಸದಂತೆ ಬೌಲರ್‌ಗಳು ನೋಡಿಕೊಂಡರು. ಪರಿಣಾಮ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಅರ್ಧಶತಕದ ಜೊತೆಯಾಟ ಪಡೆದರೂ ಸಹ ಮುಂದುವರಿಸಲು ವಿಫಲಗೊಂಡಿತು. ಮಯಾಂಕ್ ಅಗರ್ವಾಲ್ ಕೇವಲ 10ರನ್‌ಗಳಿಗೆ ಶಿವಂ ಮಾವಿ ಬೌಲಿಂಗ್‌ನಲ್ಲಿ ಔಟಾಗಿ ಪೆವಿಲಿಯನ್ ಸೇರಿಕೊಂಡರು.

IND vs SA T20I: ಟೀಮ್ ಇಂಡಿಯಾದ ಈ 5 ಆಟಗಾರರ ಮೇಲೆ ಎಲ್ಲರ ಕಣ್ಣು

ಇದನ್ನೂ ಓದಿ
Image
Joe Root: ಅನುಮಾನ ಮೂಡಿಸಿದ ಜೋ ರೂಟ್ ಬ್ಯಾಟ್: ಯಾವುದೇ ಆಧಾರವಿಲ್ಲದೆ ಮೈದಾನದಲ್ಲಿ ನಿಂತಿದ್ದೇಗೆ?
Image
IND vs SA: ಮೊದಲ ಟಿ20ಗೆ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ತಯಾರಿ: ವೈರಲ್ ಆಗುತ್ತಿದೆ ಫೋಟೋ
Image
Indonesia Open: ಲಕ್ಷ್ಯ ಸೇನ್​ಗೆ ಭಾರತೀಯನೇ ಎದುರಾಳಿ; ಪಿವಿ ಸಿಂಧು, ಸೈನಾ ನೆಹ್ವಾಲ್ ಮೇಲೆ ಭಾರಿ ನಿರೀಕ್ಷೆ
Image
Ranji Trophy: ಕರ್ನಾಟಕದ 7 ವಿಕೆಟ್ ಕಿತ್ತ ಯುಪಿ ತಂಡದ ಇಬ್ಬರು ಬೌಲರ್ಸ್​! ಮೊದಲ ದಿನದಾಟ ಹೀಗಿತ್ತು

ಅರ್ಧಶತಕ ಗಳಿಸಿದ ಸಮರ್ಥ್ 30ನೇ ಓವರ್‌ನಲ್ಲಿ ಸೌರಭ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಕರುಣ್ ನಾಯರ್ (29; 74ಎ) ಆಟಕ್ಕೆ ಕುದುರಿಕೊಂಡಂತೆ ಕಂಡ ಹೊತ್ತಿನಲ್ಲಿಯೇ ಶಿವಂ ಸ್ವಿಂಗ್ ಎಸೆತಕ್ಕೆ ಕ್ಲೀನ್‌ಬೌಲ್ಡ್ ಆದರು. ಆಗ ತಂಡದ ಮೊತ್ತ ನೂರು ಕೂಡ ದಾಟಿರಲಿಲ್ಲ. ಕೃಷ್ಣಮೂರ್ತಿ ಸಿದ್ಧಾರ್ಥ್‌ ಮತ್ತು ನಾಯಕ ಮನೀಶ್ ಪಾಂಡೆ ತಂಡಕ್ಕೆ ಭದ್ರ ಜೊತೆಯಾಟವಾಡುವ ನಿರೀಕ್ಷೆ ಮೂಡಿಸಿದರಷ್ಟೆ. ಆದರೆ ಇವರಿಬ್ಬರ ಜೊತೆಯಾಟಕ್ಕೆ ಶಿವಂ ಮಾವಿ ಬ್ರೇಕ್ ಹಾಕಿದರು. 27ರನ್ ಕಲೆಹಾಕಿ ಉತ್ತಮ ಆಟವಾಡ್ತಿದ್ದ ಮನೀಶ್ ಪಾಂಡೆ ಔಟಾದರು.

ಮುಂದಿನ ಎಸೆತದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ಶ್ರೀನಿವಾಸ್ ಶರತ್ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡಿದ್ದು ತಂಡಕ್ಕೆ ಮತ್ತಷ್ಟು ಹೊಡೆತ ನೀಡಿತು. ಅಂತಿಮವಾಗಿ ಕರ್ನಾಟಕ ತಂಡ ಮೊದಲ ದಿನದಾಟದ ಅಂತ್ಯಕ್ಕೆ 7 ವಿಕೆಟ್‌ ಕಳೆದುಕೊಂಡು 213 ರನ್‌ ಗಳಿಸಿತು. 26 ರನ್‌ ಗಳಿಸಿ ಶ್ರೇಯಸ್‌ ಗೋಪಾಲ್‌ ಮತ್ತು 12 ರನ್‌ ಗಳಿಸಿ ವಿಜಯಕುಮಾರ್‌ ಎರಡನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದರು.

ಆದರೆ, ಇಂದು ಕರ್ನಾಟಕ ಬ್ಯಾಟರ್​ಗಳ ಆಟ ನಡೆಯಲಿಲ್ಲ. ವಿಜಯಕುಮಾರ್‌ ಬಂದ ಬೆನ್ನಲ್ಲೇ ಪೆವಿಲಿಯನ್ ಸೇರಿಕೊಂಡರೆ, ರೋನಿತ್ ಮೋರೆ 6 ಹಾಗೂ ವಿಧ್ವತ್ 4 ರನ್​ಗೆ ಔಟಾದರು. ಇದರ ನಡುವೆ ಶ್ರೇಯಸ್ ಕೊಂಚ ರನ್ ಕಲೆಹಾಕಿದ ಪರಿಣಾಮ ತಂಡದ ಮೊತ್ತ 250 ರನ್​ಗಳ ಗಡಿ ದಾಟಿತು. ಗೋಪಾಲ್ 80 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಕರ್ನಾಟಕ ತಂಡ 84 ಓವರ್​ನಲ್ಲಿ 253 ರನ್​ಗೆ ಆಲೌಟ್ ಆಯಿತು. ಯುಪಿ ಪರ ಸೌರಭಗ 4 ವಿಕೆಟ್ ಕಿತ್ತರೆ, ಶಿವಂ ಮಾವಿ 3 ವಿಕೆಟ್ ಪಡೆದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ