AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಚಂಡೀಗಢ್ ವಿರುದ್ಧದ ಪಂದ್ಯ ಡ್ರಾ: ಮುಂದಿನ ಸುತ್ತಿಗೆ ಕರ್ನಾಟಕ

Ranji Trophy 2024: ರಣಜಿ ಟ್ರೋಫಿಯ ಗ್ರೂಪಿ-ಸಿ ನಲ್ಲಿ ನಡೆದ ಕರ್ನಾಟಕ ಮತ್ತು ಚಂಡೀಗಢ್ ನಡುವಣ ಪಂದ್ಯವು ಡ್ರಾನಲ್ಲಿ ಕೊನೆಗೊಂಡಿದೆ. ಈ ಡ್ರಾನ ಹೊರತಾಗಿಯೂ ಕರ್ನಾಟಕ ತಂಡ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದ್ದು, ಮುಂದಿನ ಪಂದ್ಯದಲ್ಲಿ ವಿದರ್ಭ ತಂಡವನ್ನು ಎದುರಿಸಲಿದೆ. ಈ ಪಂದ್ಯವು ನಾಗ್​ಪುರದ ವಿಸಿಎ ಮೈದಾನದಲ್ಲಿ ನಡೆಯಲಿದೆ.

Ranji Trophy 2024: ಚಂಡೀಗಢ್ ವಿರುದ್ಧದ ಪಂದ್ಯ ಡ್ರಾ: ಮುಂದಿನ ಸುತ್ತಿಗೆ ಕರ್ನಾಟಕ
Karnataka Team
TV9 Web
| Edited By: |

Updated on: Feb 20, 2024 | 8:00 AM

Share

ಹುಬ್ಬಳ್ಳಿಯ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಚಂಡೀಗಢ್-ಕರ್ನಾಟಕ ನಡುವಣ ರಣಜಿ ಪಂದ್ಯವು (Ranji Trophy 2024) ಡ್ರಾನಲ್ಲಿ ಅಂತ್ಯ ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚಂಡೀಗಢ ತಂಡವು ಕರಣ್ ಕೈಲಾ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 267 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆಡಿದ ಕರ್ನಾಟಕ ತಂಡದ ಪರ ಮಯಾಂಕ್ ಅಗರ್ವಾಲ್ (57), ಹಾರ್ದಿಕ್ ರಾಜ್ (82) ಅರ್ಧಶತಕ ಬಾರಿಸಿದರೆ, ಮನೀಶ್ ಪಾಂಡೆ (148), ಶ್ರೀನಿವಾಸ್ ಶರತ್ (100) ಹಾಗೂ ವಿಜಯಕುಮಾರ್ ವೈಶಾಕ್ (103) ಭರ್ಜರಿ ಶತಕ ಸಿಡಿಸಿದರು. ಈ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 563 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿತು.

ದ್ವಿತೀಯ ಇನಿಂಗ್ಸ್​ ಆರಂಭಿಸಿದ ಚಂಡೀಗಢ್ ತಂಡದ ಪರ ಅರ್ಸ್ಲಾನ್ ಖಾನ್ (63) ಅರ್ಧಶತಕ ಬಾರಿಸಿದರೆ, ಮಯಾಂಕ್ ಸಿಧು (56) ಹಾಗೂ ಕರಣ್ ಕೈಲಾ (25) ಕ್ರೀಸ್ ಕಚ್ಚಿ ನಿಂತರು. ಪರಿಣಾಮ ಕರ್ನಾಟಕ ತಂಡವು 236 ರನ್​ಗಳಿಗೆ 5 ವಿಕೆಟ್ ಕಬಳಿಸಿದರೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇದರೊಂದಿಗೆ ಈ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿತು.

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಹಾರ್ದಿಕ್ ರಾಜ್ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಅನೀಶ್ ಕೆ ವಿ , ಮುರಳೀಧರ ವೆಂಕಟೇಶ್ , ವಿಜಯ್ ಕುಮಾರ್ ವೈಶಾಕ್ , ಶಶಿ ಕುಮಾರ್ ಕೆ , ವಾಸುಕಿ ಕೌಶಿಕ್.

ಇದನ್ನೂ ಓದಿ: Yashasvi Jaiswal: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಚಂಡೀಗಢ್ ಪ್ಲೇಯಿಂಗ್ ಇಲೆವೆನ್: ಮನನ್ ವೋಹ್ರಾ (ನಾಯಕ) , ಶಿವಂ ಭಾಂಬ್ರಿ , ಅರ್ಸ್ಲಾನ್ ಖಾನ್ , ಕುನಾಲ್ ಮಹಾಜನ್ , ಅಂಕಿತ್ ಕೌಶಿಕ್ , ಮಯಾಂಕ್ ಸಿಧು (ವಿಕೆಟ್ ಕೀಪರ್) , ಗುರಿಂದರ್ ಸಿಂಗ್ , ರೋಹಿತ್ ಧಂಡಾ , ಕರಣ್ ಕೈಲಾ , ಜಗಜಿತ್ ಸಿಂಗ್ , ಹರ್ತೇಜಸ್ವಿ ಕಪೂರ್.

ಕ್ವಾರ್ಟರ್​ ಫೈನಲ್​ಗೆ ಕರ್ನಾಟಕ:

ಈ ಡ್ರಾ ಹೊರತಾಗಿಯೂ ಕರ್ನಾಟಕ ತಂಡವು ರಣಜಿ ಟ್ರೋಫಿ 2024 ರಲ್ಲಿ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ. ಆಡಿರುವ 7 ಪಂದ್ಯಗಳಲ್ಲಿ 3 ಜಯ, 3 ಡ್ರಾ ಹಾಗೂ 1 ಸೋಲಿನೊಂದಿಗೆ ಕರ್ನಾಟಕ ತಂಡವು ಗ್ರೂಪ್-ಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದು, ಈ ಮೂಲಕ ಮುಂದಿನ ಹಂತಕ್ಕೇರಿದೆ. ಕ್ವಾರ್ಟರ್​ ಫೈನಲ್​ನಲ್ಲಿ ಕರ್ನಾಟಕ ತಂಡ ವಿದರ್ಭ ತಂಡವನ್ನು ಎದುರಿಸಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ