AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಮೂವರ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

179 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 10 ಫೋರ್​ಗಳೊಂದಿಗೆ 114 ರನ್​ ಬಾರಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ 143 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 103 ರನ್ ಸಿಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿಕಿನ್ ಜೋಸ್ 215 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 107 ರನ್​ ಗಳಿಸಿದರು.

Ranji Trophy 2024: ಮೂವರ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ
Mayank Agarwal
TV9 Web
| Updated By: ಝಾಹಿರ್ ಯೂಸುಫ್|

Updated on:Jan 22, 2024 | 9:59 AM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ (Ranji Trophy 2024) ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ ತಂಡ (Karnataka Team) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗೋವಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಗೋವಾ ತಂಡವು 321 ರನ್ ಪೇರಿಸಿ ಆಲೌಟ್ ಆದರು. ಕರ್ನಾಟಕ ಪರ ವಾಸುಕಿ ಕೌಶಿಕ್, ಎಂ ವೆಂಕಟೇಶ್ ಹಾಗೂ ರೋಹಿತ್ ಕುಮಾರ್ ತಲಾ 3 ವಿಕೆಟ್ ಕಬಳಿಸಿದರು.

ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. 179 ಎಸೆತಗಳನ್ನು ಎದುರಿಸಿದ ಮಯಾಂಕ್ 10 ಫೋರ್​ಗಳೊಂದಿಗೆ 114 ರನ್​ ಬಾರಿಸಿದರು. ಈ ಮೂಲಕ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಆ ಬಳಿಕ ಬಂದ ದೇವದತ್ ಪಡಿಕ್ಕಲ್ 143 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 103 ರನ್ ಸಿಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿಕಿನ್ ಜೋಸ್ 215 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 107 ರನ್​ ಬಾರಿಸಿದರು. ಈ ಮೂವರ ಶತಕದ ನೆರವಿನಿಂದ ಕರ್ನಾಟಕ ತಂಡವು 9 ವಿಕೆಟ್ ನಷ್ಟಕ್ಕೆ 498 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

177 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಗೋವಾ ತಂಡವು 27 ಓವರ್​ಗಳ ಮುಕ್ತಾಯದ ವೇಳೆಗೆ 93 ರನ್​ಗಳಿಸಿ 1 ವಿಕೆಟ್ ಕಳೆದುಕೊಂಡಿದೆ. ಸದ್ಯ ನಾಲ್ಕನೇ ದಿನದಾಟ ಚಾಲ್ತಿಯಲ್ಲಿದ್ದು, ಇಂದು ಗೋವಾ ತಂಡವನ್ನು ಆಲೌಟ್ ಮಾಡಿದರೆ ಅಲ್ಪ ಗುರಿಯೊಂದಿಗೆ ಈ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶ ಕರ್ನಾಟಕ ಮುಂದಿರಲಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ನಿಕಿನ್ ಜೋಸ್ , ಮನೀಶ್ ಪಾಂಡೆ , ಶುಭಾಂಗ್ ಹೆಗ್ಡೆ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಡಿ. ನಿಶ್ಚಲ್ , ರೋಹಿತ್ ಕುಮಾರ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್ , ಮುರಳೀಧರ ವೆಂಕಟೇಶ್.

ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

ಗೋವಾ ಪ್ಲೇಯಿಂಗ್ 11: ಇಶಾನ್ ಗಡೇಕರ್ , ಸುಯಶ್ ಪ್ರಭುದೇಸಾಯಿ , ಕೃಷ್ಣಮೂರ್ತಿ ಸಿದ್ಧಾರ್ಥ್ (ವಿಕೆಟ್ ಕೀಪರ್) , ಸ್ನೇಹಲ್ ಕೌಥಂಕರ್ , ದರ್ಶನ್ ಮಿಸಾಲ್ (ನಾಯಕ) , ದೀಪರಾಜ್ ಗಾಂವ್ಕರ್ , ಅರ್ಜುನ್ ತೆಂಡೂಲ್ಕರ್ , ಮೋಹಿತ್ ರೆಡ್ಕರ್ , ಹೆರಾಂಬ್ ಪರಬ್ , ಸಮರ್ ಶ್ರವಣ್ ದುಭಾಷಿ , ಫೆಲಿಕ್ಸ್ ಅಲೆಮಾವೋ.

Published On - 9:59 am, Mon, 22 January 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್