AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಮೂವರ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

179 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 10 ಫೋರ್​ಗಳೊಂದಿಗೆ 114 ರನ್​ ಬಾರಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ 143 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 103 ರನ್ ಸಿಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿಕಿನ್ ಜೋಸ್ 215 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 107 ರನ್​ ಗಳಿಸಿದರು.

Ranji Trophy 2024: ಮೂವರ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ
Mayank Agarwal
TV9 Web
| Edited By: |

Updated on:Jan 22, 2024 | 9:59 AM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ (Ranji Trophy 2024) ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ ತಂಡ (Karnataka Team) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗೋವಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಗೋವಾ ತಂಡವು 321 ರನ್ ಪೇರಿಸಿ ಆಲೌಟ್ ಆದರು. ಕರ್ನಾಟಕ ಪರ ವಾಸುಕಿ ಕೌಶಿಕ್, ಎಂ ವೆಂಕಟೇಶ್ ಹಾಗೂ ರೋಹಿತ್ ಕುಮಾರ್ ತಲಾ 3 ವಿಕೆಟ್ ಕಬಳಿಸಿದರು.

ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. 179 ಎಸೆತಗಳನ್ನು ಎದುರಿಸಿದ ಮಯಾಂಕ್ 10 ಫೋರ್​ಗಳೊಂದಿಗೆ 114 ರನ್​ ಬಾರಿಸಿದರು. ಈ ಮೂಲಕ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಆ ಬಳಿಕ ಬಂದ ದೇವದತ್ ಪಡಿಕ್ಕಲ್ 143 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 103 ರನ್ ಸಿಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿಕಿನ್ ಜೋಸ್ 215 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 107 ರನ್​ ಬಾರಿಸಿದರು. ಈ ಮೂವರ ಶತಕದ ನೆರವಿನಿಂದ ಕರ್ನಾಟಕ ತಂಡವು 9 ವಿಕೆಟ್ ನಷ್ಟಕ್ಕೆ 498 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

177 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಗೋವಾ ತಂಡವು 27 ಓವರ್​ಗಳ ಮುಕ್ತಾಯದ ವೇಳೆಗೆ 93 ರನ್​ಗಳಿಸಿ 1 ವಿಕೆಟ್ ಕಳೆದುಕೊಂಡಿದೆ. ಸದ್ಯ ನಾಲ್ಕನೇ ದಿನದಾಟ ಚಾಲ್ತಿಯಲ್ಲಿದ್ದು, ಇಂದು ಗೋವಾ ತಂಡವನ್ನು ಆಲೌಟ್ ಮಾಡಿದರೆ ಅಲ್ಪ ಗುರಿಯೊಂದಿಗೆ ಈ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶ ಕರ್ನಾಟಕ ಮುಂದಿರಲಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ನಿಕಿನ್ ಜೋಸ್ , ಮನೀಶ್ ಪಾಂಡೆ , ಶುಭಾಂಗ್ ಹೆಗ್ಡೆ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಡಿ. ನಿಶ್ಚಲ್ , ರೋಹಿತ್ ಕುಮಾರ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್ , ಮುರಳೀಧರ ವೆಂಕಟೇಶ್.

ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

ಗೋವಾ ಪ್ಲೇಯಿಂಗ್ 11: ಇಶಾನ್ ಗಡೇಕರ್ , ಸುಯಶ್ ಪ್ರಭುದೇಸಾಯಿ , ಕೃಷ್ಣಮೂರ್ತಿ ಸಿದ್ಧಾರ್ಥ್ (ವಿಕೆಟ್ ಕೀಪರ್) , ಸ್ನೇಹಲ್ ಕೌಥಂಕರ್ , ದರ್ಶನ್ ಮಿಸಾಲ್ (ನಾಯಕ) , ದೀಪರಾಜ್ ಗಾಂವ್ಕರ್ , ಅರ್ಜುನ್ ತೆಂಡೂಲ್ಕರ್ , ಮೋಹಿತ್ ರೆಡ್ಕರ್ , ಹೆರಾಂಬ್ ಪರಬ್ , ಸಮರ್ ಶ್ರವಣ್ ದುಭಾಷಿ , ಫೆಲಿಕ್ಸ್ ಅಲೆಮಾವೋ.

Published On - 9:59 am, Mon, 22 January 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು